ಐಪಿಎಲ್‌ 2023 | ಕ್ವಾಲಿಫೈಯರ್​ 2, ಫೈನಲ್‌ ಪಂದ್ಯದ ಟಿಕೆಟ್‌ ಪಡೆಯಲು ನೂಕುನುಗ್ಗಲು, ಕಾಲ್ತುಳಿತ

Date:

Advertisements

ಐಪಿಎಲ್‌ನ ಕೊನೆಯ ಎರಡು ಪಂದ್ಯಗಳ ಆನ್‌ಲೈನ್ ಟಿಕೆಟ್‌ಗಳ ಪ್ರತಿಯನ್ನೂ ಆಫ್‌ಲೈನ್‌ನಲ್ಲಿ ಸ್ಟೇಡಿಯಂನಲ್ಲಿ ಪಡೆಯಲು ಹೇಳಿರುವುದು ನೂಕುನುಗ್ಗಲು, ಕಾಲ್ತುಳಿತ ಸಮಸ್ಯೆಯನ್ನು ಸೃಷ್ಟಿಸಿದೆ.

ಐಪಿಎಲ್‌ 16ನೇ ಆವೃತ್ತಿಯ ಕ್ವಾಲಿಫೈಯರ್​ 2 ಮತ್ತು ಫೈನಲ್‌ ಪಂದ್ಯದ ಟಿಕೆಟ್‌ ಮಾರಾಟದ ವೇಳೆ ಭಾರಿ ಜನಸಂದಣಿಯಿಂದಾಗಿ ಕಾಲ್ತುಳಿತ ಉಂಟಾಗಿದೆ. ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶುಕ್ರವಾರ, ಗುಜರಾತ್​ ಟೈಟನ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಕ್ವಾಲಿಫೈಯರ್​ 2 ಮತ್ತು ಮೇ 29ರಂದು ಫೈನಲ್‌ ಪಂದ್ಯ ನಡೆಯಲಿದೆ. ಈ ಹಿನ್ನಲೆಯಲ್ಲಿ ಟಿಕೆಟ್‌ ಪಡೆಯಲು ಸ್ಟೇಡಿಯಂನ ಹೊರ ಭಾಗದಲ್ಲಿ ಭಾರಿ ಜನಸಂದಣಿ ನೆರೆದಿತ್ತು. ಭದ್ರತೆಗೆ ನಿಯೋಜಿಸಿದ್ದ ಪೊಲೀಸರು, ಸಾವಿರಾರು ಸಂಖ್ಯೆಯಲ್ಲಿದ್ದ ಅಭಿಮಾನಿಗಳನ್ನು ನಿಯಂತ್ರಿಸಲು ವಿಫಲರಾದ ಪರಿಣಾಮ ನೂಕುನುಗ್ಗಲು ಉಂಟಾಯಿತು.

Advertisements

ಭಾರಿ ಬಿಸಿಲಿನ ತಾಪದ ನಡುವೆಯೂ ಅಭಿಮಾನಿಗಳು ಹಲವು ಗಂಟೆಗಳ ಕಾದು ಕುಳಿತ ಪರಿಣಾಮ  ಕಾಲ್ತುಳಿತದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ವೇಳೆ  ತೀವ್ರ ಶಾಖದ ಪರಿಣಾಮ ಕೆಲವರು ಮೂರ್ಛೆ ಹೋದರು. ಆನ್‌ಲೈನ್‌ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಿದ್ದರೂ ಸಹ, ಸ್ಟೇಡಿಯಂನ ಬಾಕ್ಸ್ ಆಫೀಸ್‌ನಿಂದ ಟಿಕೆಟ್‌ ಪ್ರತಿಗಳನ್ನು ಪಡೆಯಲು ಸೂಚಿಸಲಾಗಿತ್ತು. ಇದು ನೂಕುನುಗ್ಗಲಿಗೆ ಪ್ರಮುಖ ಕಾರಣವಾಗಿತ್ತು.

ಈ ಸುದ್ದಿ ಓದಿದ್ದೀರಾ?: ಈ ದಿನ ಸಂಪಾದಕೀಯ | ಬೆಂಗಳೂರು: ಅಂಡರ್‌ಪಾಸ್, ಫ್ಲೈಓವರ್, ರಸ್ತೆ ಗುಂಡಿ; ಹೆಜ್ಜೆ ಹೆಜ್ಜೆಗೂ ಕಾಡುವ ಸಾವು!

ಒಂದು ಲಕ್ಷಕ್ಕೂ ಹೆಚ್ಚು ಪ್ರೇಕ್ಷಕರು ಕುಳಿತು ಪಂದ್ಯ ವೀಕ್ಷಿಸುವ ಸಾಮರ್ಥ್ಯವಿದ್ದರೂ ಸಹ ನರೇಂದ್ರ ಮೋದಿ ಸ್ಟೇಡಿಯಂನ ನಿರ್ಗಮನ ದ್ವಾರಗಳು ಅತ್ಯಂತ ಕಿರಿದಾಗಿವೆ. ಇದು ಅಧಿಕಾರಿಗಳಿಗೆ ಸಮಸ್ಯೆ ತಂದಿಟ್ಟಿದೆ. ಟಿಕೆಟ್‌ ವಿತರಣೆಗಾಗಿ ಸೂಕ್ತ ವ್ಯವಸ್ಥೆ ಮಾಡದ ಬಿಸಿಸಿಐ ವಿರುದ್ಧ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಜೀವಕ್ಕಿಂತ ಜನರಿಗೆ ಐಪಿಎಲ್​ ಟಿಕೆಟ್ ಹೆಚ್ಚಾಯಿತೆ ಎಂದು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X