ರಮೇಶ್ ಜಾರಕಿಹೊಳಿ ವಿರುದ್ಧದ ಸಾಲ ವಂಚನೆ ಪ್ರಕರಣ; ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

Date:

Advertisements

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ದಾಖಲಾಗಿರುವ ಸಾಲ ವಂಚನೆ ಪ್ರಕರಣದ ತನಿಖಾ ವರದಿಯನ್ನು ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ.

ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗಾಗಿ ಪಡೆದಿರುವ ಸಾಲ ಮತ್ತು ಬಡ್ಡಿಯ ಹಣ ಸೇರಿ ಭರ್ತಿ 439 ಕೋಟಿ ರೂಪಾಯಿ ಪಾವತಿಸದೆ ವಂಚಿಸಿರುವ ಆರೋಪದ ಮೇಲೆ ತಮ್ಮ ವಿರುದ್ದದ ದೂರು ಮತ್ತು ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನಡೆಸಿದೆ.

ಇದನ್ನು ಓದಿದ್ದೀರಾ? ರಾಯಚೂರು | ಡಿಸೆಂಬರ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುವ ನಿರೀಕ್ಷೆ : ರಮೇಶ್ ಜಾರಕಿಹೊಳಿ

Advertisements

ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿದ್ದು, ಇದುವರೆಗೆ ನಡೆಸಿರುವ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚಿಸಿದ್ದಾರೆ.

ಅರ್ಜಿದಾರರು ತನಿಖೆಗೆ ಸಹಕರಿಸಬೇಕು ಎಂದು ಹೇಳಿರುವ ಕೋರ್ಟ್ ಮಧ್ಯಂತರ ಆದೇಶ ವಿಸ್ತರಣೆ ಮಾಡಿದೆ. ವಿಚಾರಣೆಯನ್ನು ಡಿಸೆಂಬರ್ 19ಕ್ಕೆ ಮುಂದೂಡಲಾಗಿದೆ. ಈ ಹಿಂದೆ ಮುಂದಿನ ವಿಚಾರಣೆವರೆಗೂ ರಮೇಶ್‌ ಜಾರಕಿಹೊಳಿ ವಿರುದ್ಧ ಯಾವುದೇ ಕ್ರಮ ಬೇಡ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿತ್ತು.

ಇದನ್ನು ಓದಿದ್ದೀರಾ? ಬೆಳಗಾವಿ | ಕೋ-ಆಪರೇಟೀವ್‌ ಕ್ರೆಡಿಟ್ ಬ್ಯಾಂಕ್‌ ವಂಚನೆ ಪ್ರಕರಣ; ʼಹಣ ಮರಳಿ ಕೊಡಿಸುವೆʼ ಎಂದ ರಮೇಶ್ ಜಾರಕಿಹೊಳಿ

ವಿಚಾರಣೆ ವೇಳೆ ರಮೇಶ್‌ ಜಾರಕಿಹೊಳಿ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡಬೇಕು ಎಂದು ಹಿರಿಯ ವಕೀಲ ರವಿ ಬಿ. ನಾಯಕ್‌ ಕೋರಿದರು. ಹಾಗೆಯೇ ಅರ್ಜಿದಾರರನ್ನು ತನಿಖೆಗೆ ಸಹಕರಿಸಲು ಸೂಚಿಸಬೇಕು ಎಂದು ಹೆಚ್ಚುವರಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಕೋರಿದರು.

ಏನಿದು ಪ್ರಕರಣ?

ಸೌಭಾಗ್ಯಲಕ್ಷ್ಮಿ ಶುಗರ್ಸ್‌ ಲಿಮಿಟೆಡ್‌ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮೇಶ್‌ ಜಾರಕಿಹೊಳಿ ಹಾಗೂ ಮತ್ತಿಬ್ಬರು ನಿರ್ದೇಶಕರಾಗಿದ್ದ ವಸಂತ್‌ ಪಾಟೀಲ್‌ ಮತ್ತು ಶಂಕರ್‌ ಪವಾಡೆ ಅವರು ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ ಲಿಮಿಟೆಡ್‌ಗೆ 439 ಕೋಟಿ ಸಾಲ ಮರು ಪಾವತಿ ಮಾಡದೆ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್ಸ್: ಮಹಿಳೆಯರ 10ಮೀ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆಯುತ್ತಿರುವ 16ನೇ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನ ಮಹಿಳೆಯರ 10...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X