ಮುತ್ತಪ್ಪ ರೈ ಪುತ್ರನ ಮೇಲೆ ಉದ್ಯಮಿ ನಾಯ್ಡು ಹಲ್ಲೆ : ದೂರು ದಾಖಲು

Date:

Advertisements
  • ಊಟಕ್ಕೆಂದು ಖಾಜಿ ಬಾರ್ ಆಂಡ್ ಕಿಚನ್ ಹೋಟೆಲ್‌ಗೆ ತೆರಳಿದ್ದ ರಿಕ್ಕಿ ರೈ
  • ರೈ ಕಾರು ಚಾಲಕ ಸೋಮಶೇಖರ್ ಕಬ್ಬನ್‌ಪಾರ್ಕ್ ಠಾಣೆಯಲ್ಲಿ ದೂರು ದಾಖಲು

ರಾಜಧಾನಿ ಬೆಂಗಳೂರಿನಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಉದ್ಯಮಿ ಶ್ರೀನಿವಾಸ್ ನಾಯ್ಡು ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ರಿಕ್ಕಿ ರೈ ಕಾರು ಚಾಲಕ ಸೋಮಶೇಖರ್ ದೂರು ದಾಖಲಿಸಿದ್ದಾರೆ.

ಮೇ 26 ರಂದು ಲ್ಯಾವೆಲ್ಲಿ ರಸ್ತೆಯ ಖಾಜಿ ಬಾರ್ ಅಂಡ್ ಕಿಚನ್ ಹೋಟೆಲ್‌ಗೆ ರಿಕ್ಕಿ ರೈ ಊಟಕ್ಕೆಂದು ತೆರಳಿದ್ದರು. ಈ ಸಮಯದಲ್ಲಿ ಉದ್ಯಮಿ ಶ್ರೀನಿವಾಸ್ ನಾಯ್ಡು ಮೂರು ನಾಲ್ಕು ಜನರೊಂದಿಗೆ ಬಂದು ಏಕಾಏಕಿ ಹಲ್ಲೆ ಮಾಡಲು ಮುಂದಾಗಿದ್ದಾರೆ. ಹಲ್ಲೆ ವೇಳೆ ರಿಕ್ಕಿ ಅವರ ಹಣೆಗೆ ಪೆಟ್ಟು ಬಿದ್ದಿದ್ದು, ತಕ್ಷಣವೇ ಪೊಲೀಸರಿಗೆ ಈ ಘಟನೆಯ ಬಗ್ಗೆ ಮಾಹಿತಿ ನೀಡಲಾಯಿತು. ಬಳಿಕ ಶ್ರೀನಿವಾಸ್ ನಾಯ್ಡು ಹಾಗೂ ಅವರ ಸಂಗಡಿಗರು ಪರಾರಿಯಾಗಿದ್ದಾರೆ ಎಂದು ಕಾರು ಚಾಲಕ ಸೋಮಶೇಖರ್ ದೂರು ನೀಡಿದ್ದಾರೆ.

ಸೋಮಶೇಖರ್ ನೀಡಿದ ದೂರಿನ ಅನ್ವಯ ಕಬ್ಬನ್‌ ಪಾರ್ಕ್‌ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisements

ಉದ್ಯಮಿ ನಾಯ್ಡು ಕಾರಿಗೆ ಬೆಂಕಿ ಪ್ರಕರಣ

ಉದ್ಯಮಿ ಶ್ರೀನಿವಾಸ್ ನಾಯ್ಡು ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಗರದ ಎಸಿಎಂಎಂ ನ್ಯಾಯಾಲಯಕ್ಕೆ ಸದಾಶಿವನಗರ ಪೊಲೀಸರು 188 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದರು.

ಮುತ್ತಪ್ಪ ರೈ ಮಗ ರಿಕ್ಕಿ ರೈ, ನಾರಾಯಣಸ್ವಾಮಿ, ಅಭಿನಂದನ್, ಮುನಿಯಪ್ಪ, ಗಣೇಶ್, ಶಶಾಂಕ್, ನಿರ್ಮಲ್, ರೋಹಿತ್, ರಾಕೇಶ್ ಸೇರಿದಂತೆ ಒಟ್ಟು 9 ಜನರ ಹೆಸರನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಯುಪಿಎಸ್‌ಸಿ ಪರೀಕ್ಷೆ | ಭಾನುವಾರ ಬೆಳಗ್ಗೆ 6ರಿಂದಲೇ ಮೆಟ್ರೋ ಸಂಚಾರ

ಏನಿದು ಹಿನ್ನೆಲೆ?

ಒಂದಾನೊಂದು ಕಾಲದಲ್ಲಿ ಬೆಂಗಳೂರಿನ ಕುಖ್ಯಾತ ರೌಡಿ ಮುತ್ತಪ್ಪ ರೈ ಮಗ ರಿಕ್ಕಿ ರೈ ಹಾಗೂ ಶ್ರೀನಿವಾಸ್ ನಾಯ್ಡು ಆತ್ಮೀಯ ಸ್ನೇಹಿತರಾಗಿದ್ದರು. ಮುತ್ತಪ್ಪ ರೈ ನಿಧನದ ಬಳಿಕ ರೈ ಗ್ರೂಪ್‌ನಿಂದ ಶ್ರೀನಿವಾಸ್ ನಾಯ್ಡು ಹೊರಬಂದಿದ್ದರು.

ಇದರಿಂದ ಕೋಪಗೊಂಡಿದ್ದ ರಿಕ್ಕಿ ರೈ ನಾಯ್ಡುನನ್ನು ದ್ವೇಷ ಮಾಡಲು ಪ್ರಾರಂಭಿಸಿದ್ದರು. ನಾಯ್ಡು ಬಳಸುತ್ತಿದ್ದ ಬ್ಲಾಕ್ ಕಲರ್ ರೇಂಜ್ ರೋವರ್ ಕಾರನ್ನು ನೋಡಿ ಅವನ ಕೋಪ ಇನ್ನಷ್ಟು ಹೆಚ್ಚಿತ್ತು. ಈ ಬಗ್ಗೆ ರೈ ನಾಯ್ಡುಗೆ ತಾಕೀತು ಮಾಡಿದ್ದರು.

2021ರ ಅಕ್ಟೋಬರ್‌ನಲ್ಲಿ ಸದಾಶಿವನಗರದ ಸಪ್ತಗಿರಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ಶ್ರೀನಿವಾಸ್ ನಾಯ್ಡುಗೆ ಸೇರಿದ ಕೋಟ್ಯಂತರ ರೂ ಬೆಲೆ ಬಾಳುವ ಐಷಾರಾಮಿ ಕಾರಿಗೆ ನಾರಾಯಣಸ್ವಾಮಿ ಎಂಬಾತನ ಮೂಲಕ ಬೆಂಕಿ ಹಚ್ಚಿ ಪರಾರಿಯಾಗಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X