ಎಂಟು ಜಿಲ್ಲೆಗಳಿಗೆ ಸಿಗದ ಸಚಿವ ಸ್ಥಾನದ ಪ್ರಾತಿನಿಧ್ಯ

Date:

Advertisements
  • ಕಾಂಗ್ರೆಸ್‌ಗೆ ವಲಸೆ ಬಂದ ಶಾಸಕರಿಗೆ ಸಿಕ್ಕಿಲ್ಲ ಸಚಿವ ಸ್ಥಾನ
  • ಅತೃಪ್ತರಿಗೆ ನಿಗಮ-ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್‌ ಸರ್ಕಾರದಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ 23 ಜಿಲ್ಲೆಗಳಿಗೆ ಮಾತ್ರವೇ ಸಚಿವ ಸ್ಥಾನದ ಪ್ರಾತಿನಿಧ್ಯ ಸಿಕ್ಕಿದ್ದು, ಉಳಿದ ಎಂಟು ಜಿಲ್ಲೆಗಳು ಸಚಿವ ಸ್ಥಾನದಿಂದ ವಂಚಿತವಾಗಿವೆ.

ಬೆಂಗಳೂರು ನಗರ ಜಿಲ್ಲೆಗೆ ಅತಿ ಹೆಚ್ಚು ಅಂದರೆ ಆರು ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದೆ. ಮೈಸೂರು ಎರಡನೇ ಸ್ಥಾನದಲ್ಲಿದ್ದು, ಸಿದ್ದರಾಮಯ್ಯ ಅವರಲ್ಲದೇ ಇನ್ನೂ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ಸಿಕ್ಕಿದೆ.

ಉಳಿದಂತೆ ತುಮಕೂರು, ವಿಜಯಪುರ, ಕಲಬುರಗಿ, ಸೇರಿದಂತೆ ಐದು ಜಿಲ್ಲೆಗಳಲ್ಲಿ ತಲಾ ಇಬ್ಬರಿಗೆ, 16 ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ. ಕೋಲಾರ, ಹಾಸನ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ವಿಜಯನಗರ ಜಿಲ್ಲೆಗಳಲ್ಲಿ ಯಾರೊಬ್ಬರಿಗೂ ಸಚಿವ ಸ್ಥಾನ ಸಿಕ್ಕಿಲ್ಲ.

Advertisements

ವಲಸೆ ಬಂದವರಿಗೆ ಇಲ್ಲ ಸಚಿವ ಸ್ಥಾನ

ವಿಧಾನಸಭೆ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್‌ನತ್ತ ವಲಸೆ ಬಂದಿರುವ ಎಲ್ಲರಿಗೂ ಸಚಿವ ಸ್ಥಾನದ ಭರವಸೆ ನೀಡಲಾಗಿದ್ದು, ಅದು ಈಗ ಕಾಂಗ್ರೆಸ್‌ಗೆ ಮತ್ತು ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಪ್ರಮುಖವಾಗಿ ಬಿಜೆಪಿಯಿಂದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌, ಮಾಜಿ ಡಿಸಿಎಂ ಲಕ್ಷ್ಮಣ್‌ ಸವದಿ, ಅಶೋಕ್‌ ರೈ ಸೇರಿದಂತೆ ಹಲವರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದರು. ಜೆಡಿಎಸ್‌ನಿಂದ ಕೆ ಎಂ ಶಿವಲಿಂಗೇಗೌಡ, ಗುಬ್ಬಿ ಶ್ರೀನಿವಾಸ್‌, ಮಧು ಬಂಗಾರಪ್ಪ ಸೇರ್ಪಡೆಯಾಗಿ ತಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್‌ ಖಾತೆ ತೆರೆಯುವಂತೆ ಮಾಡಿದ್ದಾರೆ. ಈ ಎಲ್ಲರಿಗೂ ಸಚಿವ ಸ್ಥಾನದ ಭರವಸೆ ನೀಡಿರುವ ಕಾಂಗ್ರೆಸ್‌ ಇದೀಗ ಮಾತು ಉಳಿಸಿಕೊಳ್ಳದೆ ಮುಜುಗರಕ್ಕೆ ಸಿಲುಕಿದೆ.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಸರ್ಕಾರದ ನೂತನ ಸಚಿವ ಸಂಪುಟದ ಜಾತಿ ಲೆಕ್ಕಾಚಾರ ಹೀಗಿದೆ

ವಂಚಿವರಿಗೆ ನಿಗಮ ಮಂಡಳಿಯ ಭರವಸೆ

ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಕಸರತ್ತು ನಡೆಸಿದರೂ ಸಚಿವ ಸ್ಥಾನ ಸಿಗದೆ ನಿರಾಶೆಯಾಗಿರುವ ಸುಮಾರು 30ಕ್ಕೂ ಹೆಚ್ಚು ಮಂದಿ ಶಾಸಕರಿಗೆ ನಿಗಮ-ಮಂಡಳಿಯಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ನೀಡಿ ಸಂತೈಸಲು ತೀರ್ಮಾನಿಸಲಾಗಿದೆ.

ಸುಮಾರು 60ಕ್ಕೂ ಹೆಚ್ಚು ಶಾಸಕರು ಈ ಬಾರಿ ಸಚಿವ ಸಂಪುಟ ಸೇರಲು ಕಸರತ್ತು ನಡೆಸಿದ್ದರು. ಆದರೆ, ಇವರಲ್ಲಿ ಕೇವಲ 24 ಮಂದಿ ಹೆಸರನ್ನು ಮಾತ್ರ ಅಂತಿಮಗೊಳಿಸಿದ್ದು, ಶನಿವಾರ ಈ ಎಲ್ಲರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X