ರೈತ ಆತ್ಮಹತ್ಯೆ ಬಗ್ಗೆ ಸುಳ್ಳು ಸುದ್ದಿ | ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದು

Date:

Advertisements

ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದು ಆದ ಕಾರಣದಿಂದಾಗಿ ರೈತರೊಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ಹಾವೇರಿಯ ರೈತರೊಬ್ಬರು ಸಾಲದ ಹೊರೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ ಬಿಜೆಪಿ ಸಂಸದ ಈ ವಿಚಾರದಲ್ಲಿಯೂ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ವಕ್ಫ್ ಹೆಸರು ಇದ್ದ ಕಾರಣ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

ಇದನ್ನು ಓದಿದ್ದೀರಾ? ಸುಳ್ಳೇ ಬಂಡವಾಳ | ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸೃಷ್ಟಿಸಿದ ಸರಣಿ ಸುಳ್ಳುಗಳು, ಇಲ್ಲಿವೆ ನೋಡಿ!

Advertisements

ಸಂಸದ ಸುಳ್ಳು ಸುದ್ದಿ ಹರಡುತ್ತಿದ್ದಂತೆ ಹಾವೇರಿ ಪೊಲೀಸರು ಎಕ್ಸ್ ಖಾತೆಯಲ್ಲಿ ಸಚಿವರ ಪೋಸ್ಟ್‌ಗೆ ಪ್ರತಿಕ್ರಿಯಿಸಿ ಇದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ಟ್ವೀಟ್ ಅನ್ನು ತೇಜಸ್ವಿ ಸೂರ್ಯ ಡಿಲೀಟ್ ಮಾಡಿದ್ದರು.

ಇದನ್ನು ಓದಿದ್ದೀರಾ? ಸಂಸದ ತೇಜಸ್ವಿ ಸೂರ್ಯ ಸೇರಿ ಕನ್ನಡ ದುನಿಯಾ, ಕನ್ನಡ ನ್ಯೂಸ್‌ ಸಂಪಾದಕರ ಮೇಲೆ ಎಫ್‌ಐಆರ್‌

ಸಂಸದರಾಗಿದ್ದುಕೊಂಡು ಸಮಾಜದ ಸ್ವಾಸ್ಥ್ಯ ಕೆಡಿಸುವ ಸುಳ್ಳು ಸುದ್ದಿಯನ್ನು ಹರಡುವುದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿತ್ತು. ತೇಜಸ್ವಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ತೇಜಸ್ವಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಪೀಠವು ಅರ್ಜಿಯನ್ನು ಪುರಸ್ಕರಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಈ ಪುಣ್ಯಾತ್ಮ ಮಾಡಿದ ತಪ್ಪನ್ನೇ ಅಕಸ್ಮಾತ್ ಒಬ್ಬ ಸರ್ಕಾರಿ ನೌಕರ ಅಥವಾ ಜನಸಾಮಾನ್ಯ ಮಾಡಿ ಎಫ್ ಐ ಆರ್ ಆಗಿದ್ದರೆ,, ಇಲಾಖೆಯವರು ಏಕಾಏಕಿ ರದ್ದು ಮಾಡುವ ಸಾಧ್ಯತೆ ಇತ್ತಾ,,,

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X