ಸಚಿವ ಸ್ಥಾನ ತಪ್ಪಿದ್ದಕ್ಕೆ ಬೇಸರ; ಪರಿಷತ್‌ ಸದಸ್ಯತ್ವಕ್ಕೆ ಬಿ ಕೆ ಹರಿಪ್ರಸಾದ್‌ ರಾಜೀನಾಮೆ?

Date:

Advertisements

ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕರಾಗಿದ್ದ ಬಿ ಕೆ ಹರಿಪ್ರಸಾದ್‌ ಅವರು ತಮಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಬಿ ಕೆ ಹರಿಪ್ರಸಾದ್‌ ಅವರಿಗೆ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತ ಎನ್ನಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಇದರಿಂದ ಬೇಸರಗೊಂಡಿರುವ ಅವರು ಶನಿವಾರ ಸಂಪುಟ ವಿಸ್ತರಣೆಯಾದ ಕೂಡಲೇ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಆಪ್ತರ ಬಳಿ ಹೇಳಿಕೊಂಡಿದ್ದಾರೆ.

ಹೈಕಮಾಂಡ್‌ ಜೊತೆ ನೇರ ಸಂಪರ್ಕದಲ್ಲಿದ್ದ ಬಿ ಕೆ ಹರಿಪ್ರಸಾದ್‌ ಅವರಿಗೆ ಪಕ್ಷ ನಿಷ್ಠೆ, ಹಿರಿತನ ಹಾಗೂ ಈಡಿಗ ಸಮುದಾಯದ ಆಧಾರದ ಮೇಲೆ ಸಚಿವ ಸ್ಥಾನ ಸಿಗಲಿದೆ ಎಂಬ ಮಾತುಗಳು ಕಾಂಗ್ರೆಸ್‌ ಪಡಸಾಲೆಯಲ್ಲಿ ಹೆಚ್ಚು ಕೇಳಿಬಂದಿದ್ದವು. ಆದರೆ, ಹರಿಪ್ರಸಾದ್‌ ಸೇರ್ಪಡೆಗೆ ಸಿಎಂ ಸಿದ್ದರಾಮಯ್ಯ ಅವರು ವಿರೋಧ ವ್ಯಕ್ತಪಡಿಸಿ, ಮಾಜಿ ಸಿಎಂ ಎಸ್‌ ಬಂಗಾರಪ್ಪ ಅವರ ಮಗ ಮಧು ಬಂಗಾರಪ್ಪ ಅವರಿಗೆ ಹಠ ಹಿಡಿದು ಸಚಿವ ಸ್ಥಾನ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

Advertisements

ರಾಜೀನಾಮೆ ವಿಚಾರವಾಗಿ ಬಿ ಕೆ ಹರಿಪ್ರಸಾದ್‌ ಅವರನ್ನು ಈ ದಿನ.ಕಾಮ್‌ ಸಂಪರ್ಕಿಸಿದಾಗ “ಈ ಬಗ್ಗೆ ಆ ಮೇಲೆ ಮಾತನಾಡುವೆ” ಎಂದಷ್ಟೇ ಹೇಳಿದರು.

ಬಿ ಕೆ ಹರಿಪ್ರಸಾದ್‌ ಅವರ ರಾಜೀನಾಮೆ ನೀಡಲಿದ್ದಾರೆ ಎಂಬ ವಿಷಯ ಹೈಕಮಾಂಡ್‌ ತಲುಪಿದ್ದು, ಅವರನ್ನು ಮನವೊಲಿಸುವ ಸಾಧ್ಯತೆ ಹೆಚ್ಚಿದೆ. ಹೈಕಮಾಂಡ್‌ ಮಾತಿಗೆ ಕಟ್ಟುಬಿದ್ದು, ಹರಿಪ್ರಸಾದ್‌ ಅವರು ಪಕ್ಷದಲ್ಲೇ ಉಳಿಯುತ್ತಾರಾ ಎಂಬುದು ಕಾದುನೋಡಬೇಕು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X