ಜಾಮೀನು ಕೊಡಲು ಲಂಚ ಪಡೆದ ಆರೋಪ; ನ್ಯಾಯಾಧೀಶರ ಬಂಧನ

Date:

Advertisements

ವಂಚನೆ ಪ್ರಕರಣದಲ್ಲಿ ಜಾಮೀನು ನೀಡಲು 5 ಲಕ್ಷ ರೂ.ಗೆ ಬೇಡಿಕೆಯಿಟ್ಟ ಆರೋಪದ ಮೇಲೆ ಮಹಾರಾಷ್ಟ್ರದ ಸತಾರಾ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರನ್ನು ಬಂಧಿಸಲಾಗಿದೆ. ನ್ಯಾಯಾಧೀಶ ಧನಂಜಯ್ ಮತ್ತು ಇತರ ಮೂವರು ಆರೋಪಿಗಳನ್ನು ಮಹಾರಾಷ್ಟ್ರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಂಧಿಸಿದೆ.

ಉದ್ಯೋಗ ಕೊಡಿಸುವುದಾಗಿ 41 ಲಕ್ಷ ರೂ. ಹಣ ವಸೋಲಿ ಮಾಡಿ ವಂಚಿಸಿದ್ದ ಆರೋಪಿಗೆ ಜಾಮೀನು ಕೊಡಲು ಆರೋಪಿಯ ಮಗಳ ಬಳಿ ನ್ಯಾಯಾಧೀಕರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. “ಉದ್ಯೋಗದ ಆಮಿಷವೊಡ್ಡಿ ವಂಚನೆ ಪ್ರಕರಣದಲ್ಲಿ ಆರೋಪಿಗೆ ಜಾಮೀನು ನೀಡಲು ಆತನ ಮಗಳು, 24 ವರ್ಷದ ಯುವತಿ ಬಳಿ 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ನ್ಯಾಯಾಧೀಶರು ಮತ್ತು ಇತರ ಮೂವರು ಲಂಚಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಯುವತಿ ದೂರು ದಖಲಿಸಿದ್ದರು” ಎಂದು ಪುಣೆ ಉಪ ಪೊಲೀಸ್ ವರಿಷ್ಠಾಧಿಕಾರಿ ದಯಾನಂದ ಗಾವಡೆ ಹೇಳಿದ್ದಾರೆ.

“ಯುವತಿ ಡಿಸೆಂಬರ್ 2ರಂದು ಎಸಿಬಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಗ್ಗೆ ಡಿಸೆಂಬರ್ 3ರಿಂದ 9ರವೆಗೆ ಪರಿಶೀಲಿನೆ ನಡೆಸುತ್ತಿದ್ದೆವು. ಡಿಸೆಂಬರ್ 9ರಂದು ಸತಾರಾ ನ್ಯಾಯಾಲಯದ ಸಂಕೀರ್ಣದ ಹೊರಗೆ ಯುವತಿಯನ್ನು ನ್ಯಾಯಾಧೀಶರು ಭೇಟಿಯಾಗಿದ್ದರು. ಕಾರಿನಲ್ಲಿ ಕುಳಿತು ಮಧ್ಯವರ್ತಿಗಳೊಂದಿಗೆ ಲಂಚದ ಒಪ್ಪಂದದ ಬಗ್ಗೆ ಚರ್ಚಿಸಿದ್ದರು” ಎಂದು ಎಸಿಬಿ ದಾಖಲಿಸಿರುವ ಎಫ್‌ಐಆರ್‌ನಲ್ಲಿ ವಿವರಿಸಲಾಗಿದೆ.

Advertisements

“ಒಪ್ಪಂದದ ಬಳಿಕ ಇಬ್ಬರು ಮಧ್ಯವರ್ತಿಗಳು ಹೋಟೆಲ್‌ನಲ್ಲಿ ಲಂಚ ಸ್ವೀಕರಿಸಲು ಯೋಜಿಸಿದ್ದರು. ಅಲ್ಲಿ, ನ್ಯಾಯಾಧೀಶರ ಪರವಿದ್ದ ಮಧ್ಯವರ್ತಿಗಳು ಹಣವನ್ನು ಕೊಡುವಂತೆ ಯುವತಿಯ ಬಳಿ ಕೇಳಿದರು. ಆ ವೇಳೆ, ಯುವತಿಯೊಂದಿಗೆ ಎಸಿಬಿ ಸಾಕ್ಷಿಯೊಬ್ಬರು ಜೊತೆಗಿದ್ದರು” ಎಂದು ಎಸಿಬಿ ವಿವರಿಸಿದೆ.

ಆರೋಪಿ ನ್ಯಾಯಾಧೀಶರು ಮತ್ತು ಇತರ ಮೂವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7, 7-ಎ, 12 ಹಾಗೂ ಐಪಿಸಿ ಸೆಕ್ಷನ್ 3(5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ, ಬದಲಿಗೆ ಸಂಪುಟದಿಂದ ಉಚ್ಚಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ...

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X