ಕಾಂಗ್ರೆಸ್‌ ಸರ್ಕಾರದಿಂದ ದ್ವೇಷದ ರಾಜಕೀಯ; ಬಿಜೆಪಿ ಕಿಡಿ

Date:

Advertisements
  • ಪ್ರವೀಣ್‌ ನೆಟ್ಟಾರು ಪತ್ನಿಗೆ ನೀಡಿದ್ದ ಹುದ್ದೆ ರದ್ದು ಮಾಡಿದ ಸರ್ಕಾರ
  • ಸಿದ್ದರಾಮಯ್ಯ ಸರ್ಕಾರ ಪಿಎಫ್ಐ ಕೈಗೊಂಬೆಯಂತೆ ಕುಣಿಯುತ್ತಿದೆ

ರಾಜ್ಯದಲ್ಲಿ ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ತನ್ನ ದ್ವೇಷದ ರಾಜಕೀಯವನ್ನು ಮುಂದುವರಿಸಿರುವುದು ಖಂಡನೀಯ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಮುಖ್ಯಮಂತ್ರಿ ಸಚಿವಾಲಯದಲ್ಲಿ ನೀಡಿದ್ದ ಗುತ್ತಿಗೆ ಆಧಾರಿತ ಉದ್ಯೋಗವನ್ನು ಹೊಸ ಸರ್ಕಾರ ರದ್ದು ಮಾಡಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, “ಕಾಂಗ್ರೆಸ್ ಪಕ್ಷವೇ ಸಾಕಿ‌ ಬೆಳೆಸಿದ ಪಿಎಫ್ಐ ಎಂಬ ಭಯೋತ್ಪಾದಕ ಸಂಘಟನೆಯ ಕೋಮು ದ್ವೇಷಕ್ಕೆ ಒಳಪಟ್ಟು, ಪಿಎಫ್‌ಐ ಗೂಂಡಾಗಳಿಂದ ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ಅವರ ಧರ್ಮಪತ್ನಿಗೆ ಜೀವನ ನಿರ್ವಹಣೆಗಾಗಿ ಅನುಕಂಪದ ಆಧಾರದಲ್ಲಿ ನಮ್ಮ ಸರ್ಕಾರ ಮಂಗಳೂರಿನ ಡಿ.ಸಿ. ಕಚೇರಿಯಲ್ಲಿ ಉದ್ಯೋಗ ಕಲ್ಪಿಸಿತ್ತು” ಎಂದು ತಿಳಿಸಿದೆ.

Advertisements
ಬಿಜೆಪಿ

“ಕಾಂಗ್ರೆಸ್ ನೇತೃತ್ವದ ಸರ್ಕಾರ ತನ್ನ ದ್ವೇಷದ ರಾಜಕೀಯವನ್ನು ಮುಂದುವರಿಸಿರುವುದು ಖಂಡನೀಯ. ಕೂಡಲೇ ಸರ್ಕಾರ ಉದ್ಯೋಗದಿಂದ ವಜಾಮಾಡುವ ಅಮಾನವೀಯ ಆದೇಶವನ್ನು ಹಿಂಪಡೆಯಬೇಕು” ಎಂದು ಆಗ್ರಹಿಸಿದೆ.

“ಪಿಎಫ್ಐ ಕೈಗೊಂಬೆಯಂತೆ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಕುಣಿಯುತ್ತಿರುವುದು ರಾಜ್ಯದ ದುರಂತ” ಎಂದು ಬಿಜೆಪಿ ಅಸಮಧಾನ ವ್ಯಕ್ತಪಡಿಸಿದೆ.

ಈ ಸುದ್ದಿ ಓದಿದ್ದೀರಾ? ಎಂಟು ಜಿಲ್ಲೆಗಳಿಗೆ ಸಿಗದ ಸಚಿವ ಸ್ಥಾನದ ಪ್ರಾತಿನಿಧ್ಯ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಚಪಾತಿ ರೊಟ್ಟಿ ಕಾಯಿಸಿದಂತೆ ಎಫ್‌ಐಆರ್ ಮಾಡ್ತಿದ್ದಾರೆ: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X