ಶ್ರೀರಂಗಪಟ್ಟಣ: ಅಂಬೇಡ್ಕರ್ ಪ್ರತಿಮೆ ಸುತ್ತ ಕೇಸರಿ ಧ್ವಜ ಕಟ್ಟಲು ಸಿದ್ಧತೆ: ದಸಂಸ ನಾಯಕರ ಆಕ್ರೋಶ

Date:

Advertisements

ಶ್ರೀರಂಗಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆ ಇರುವ ಮಂಟಪದ ಸುತ್ತಲು ಆರ್‌ಎಸ್‌ಎಸ್‌ ಹಾಗೂ ಸಂಘಪರಿವಾರದ ಕೆಲವರು ದುರುದ್ದೇಶಪೂರ್ವಕವಾಗಿ ಕೇಸರಿ ಧ್ವಜ ಹಾರಿಸಲು ಪ್ರಯತ್ನಿಸುತ್ತಿರುವುದಕ್ಕೆ ಮಂಡ್ಯದ ದಸಂಸ ನಾಯಕರಾದ ಗುರುಪ್ರಸಾದ್ ಕೆರಗೋಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಟಪದ ಸುತ್ತಲೂ ದೊಡ್ಡ ಕಂಬಗಳನ್ನು ನೆಟ್ಟು ಕೇಸರಿ ಧ್ವಜ ಹಾರಿಸಲು ಪ್ರಯತ್ನಿಸುತ್ತಿದ್ದು, ಇದು ಶ್ರೀರಂಗಪಟ್ಟಣದ ಶಾಂತಿ-ಸೌಹಾರ್ದತೆ-ಸಹಬಾಳ್ವೆಗೆ ಭಂಗ ತರುವ ದುಷ್ಟ ಪ್ರಯತ್ನವಾಗಿದೆ. ಹಾಗಾಗಿ ಕೂಡಲೇ ಈ ದುಷ್ಕೃತ್ಯವನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮಂಡ್ಯ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಗುರುಪ್ರಸಾದ್ ಕೆರಗೋಡು ಮನವಿ ಮಾಡಿದ್ದಾರೆ.

ಇದಲ್ಲದೆ ಸಂಘಪರಿವಾರದ ದುಷ್ಕೃತ್ಯವನ್ನು ಮಂಡ್ಯ ಹಾಗೂ ಶ್ರೀರಂಗಪಟ್ಟಣದ ದಸಂಸ ನಾಯಕರು ಕೂಡ ಖಂಡಿಸಿದ್ದು, ಕೂಡಲೇ ಕೇಸರಿ ಧ್ವಜ ಹಾರಿಸುವ ಪ್ರಯತ್ನವನ್ನು ತೆರವುಗೊಳಿಸದಿದ್ದಲ್ಲಿ ಭಾರಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉತ್ತರ ಕರ್ನಾಟಕ ಜನತೆಯ ಆಶೋತ್ತರಗಳು ಈ ಬಾರಿಯಾದರೂ ಈಡೇರಲಿ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X