ರಾಯಚೂರು | ಯುವತಿ ಸಾವಿನ ಬಳಿಕ ಬೀದಿ ನಾಯಿಗಳನ್ನು ಸೆರೆ ಹಿಡಿಯಲು ಮುಂದಾದ ನಗರಸಭೆ

Date:

Advertisements

‘ಗುಡ್ಡಕ್ಕೆ ಬೆಂಕಿ ಹತ್ತಿದಾಗ ಬಾವಿ ತೋಡಲು ಮುಂದಾದರು’ ಎಂಬ ಗಾದೆ ಮಾತಿನಂತೆ ಬೀದಿ ನಾಯಿಗಳ ದಾಳಿಗೆ ಯುವತಿ ಮೃತಪಟ್ಟ ನಂತರ ನಗರಸಭೆಯು ಎಚ್ಚೆತ್ತುಕೊಂಡಿದ್ದು, ನಾಯಿಗಳನ್ನು ಸೆರೆ ಹಿಡಿಯಲು ಮುಂದಾಗಿದೆ.

ನಗರದ ಮಡ್ಡಿಪೇಟೆಯಲ್ಲಿ ಮಹಾದೇವಿ (20) ಎಂಬ ಯುವತಿ ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟಿದ್ದಾರೆ. ನಗರಸಭೆಗೆ ಬೀದಿ ನಾಯಿಗಳ, ಬೀಡಾಡಿ ದನಗಳ ಬಗ್ಗೆ ಹಲವು ಬಾರಿ ಗಮನಕ್ಕೆ ತರಲಾಗಿದೆಯಾದರೂ ನಿರ್ಲಕ್ಷ್ಯದ ಕಾರಣದಿಂದ ಯುವತಿ ಸಾವನ್ನಪ್ಪಿದ್ದಾರೆ. ಆ ಬಳಿಕ ಎಚ್ಚೆತ್ತುಕೊಂಡಿರುವ ನಗರಸಭೆ, ದುರ್ಘಟನೆ ಸಂಭವಿಸಿದರೆ ಮಾತ್ರ ಕೆಲಸ ನಿರ್ವಹಿಸುತ್ತಾರೆ ಎಂದು ಕಾಣುತ್ತಿದೆ ಎಂದು ಸ್ಥಳೀಯ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆಯೂ ಸಹ ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ್ದವು. ದಾಳಿ ಬಳಿಕ ಎಚ್ಚೆತ್ತುಕೊಂಡು ನಾಯಿಗಳ ಸೆರೆ ಹಿಡಿಯಲಾಗಿತ್ತು. ದಾಳಿ ಮಾಡಿದ ಬಳಿಕ ನಗರಸಭೆ ಎಚ್ಚರಿಕೆ ವಹಿಸುತ್ತಿದೆ ವಿನಃ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.

Advertisements

ಸೂಕ್ತ ಪರಿಹಾರದ ಭರವಸೆ ನೀಡಿದ ಜಿಲ್ಲಾಧಿಕಾರಿ

ಬೀದಿ ನಾಯಿಗಳ ದಾಳಿಯಿಂದ ಬಲಿಯಾದ ಯುವತಿಯ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ. ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ರಾಯಚೂರು | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಎಲ್ಲ ಶಾಸಕರ ಮನೆ ಮುಂದೆ ಡಿ.14ರಂದು ತಮಟೆ ಚಳವಳಿ

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೀದಿ ನಾಯಿಗಳ ಹಾವಳಿಗೆ ಯುವತಿ ಬಲಿಯಾದ ವಿಷಯ ತಿಳಿದು ಬಂದಿದೆ. ತಕ್ಷಣ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಯುವತಿ ಕುಟುಂಬಕ್ಕೆ ಅಗತ್ಯ ಪರಿಹಾರ ಕಲ್ಪಿಸಲಾಗುವುದು ಎಂದು ಹೇಳಿದರು.

ಹಿಂದೆಯೂ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾದಾಗ ಕಾರ್ಯಾಚರಣೆ ನಡೆಸಿ ಬೇರೆ ಕಡೆ ಸಾಗಿಸಲಾಗಿತ್ತು. ನಿಯಂತ್ರಿಸುವಲ್ಲಿ ನಡೆಸಿದ ಕಾರ್ಯಾಚರಣೆ ಪರಿಣಾಮಕಾರಿಯಾಗಿಲ್ಲ ಎನ್ನುವ ದೂರುಗಳು ಬಂದಿದೆ. ಈ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಶೀಘ್ರದಲ್ಲಿಯೇ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಕ್ರಮ ವಹಿಸಲಾಗುವುದು ಎಂದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X