ಅವಿಶ್ವಾಸ ನಿರ್ಣಯ | ಖರ್ಗೆ – ಧನಕರ್ ಜಟಾಪಟಿ; ‘ನಾನು ನಿಮ್ಮನ್ನು ಹೇಗೆ ಗೌರವಿಸಲಿ?’ ಎಂದ ಖರ್ಗೆ

Date:

Advertisements

ಉಪರಾಷ್ಟ್ರಪತಿ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ವಿರುದ್ಧ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದ್ದು, ರಾಜ್ಯಸಭೆಯಲ್ಲಿ ಭಾರೀ ಕೋಲಾಹಲ ಸೃಷ್ಟಿಸಿದೆ. ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಧನಕರ್ ನಡುವೆ ಮಾತಿನ ಸವರವೇ ನಡೆದಿದೆ. ಬಳಿಕ, ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ವಿಶ್ವಾಸ ನಿರ್ಣಯ ಮಂಡಿಸಿದ ವಿಪಕ್ಷಗಳ ವಿರುದ್ಧ ಧನಕರ್ ಅಸಮಾಧಾನಗೊಂಡಿದ್ದು, “ನಾನೊಬ್ಬ ರೈತನ ಮಗ, ಯಾವುದೇ ಪರಿಸ್ಥಿತಿಯಲ್ಲೂ ನಾನು ದುರ್ಬಲನಾಗುವುದಿಲ್ಲ. ನಾನು ಸಾಕಷ್ಟು ಸಹಿಸಿಕೊಂಡಿದ್ದೇನೆ” ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಖರ್ಗೆ, “ನೀವು ರೈತನ ಮಗ, ನಾನೂ ಕೂಡ ಕೂಲಿಕಾರನ ಮಗನೇ. ನಾನು ನಿಮಗಿಂತ ಹೆಚ್ಚು ಸವಾಲುಗಳನ್ನು ಎದುರಿಸಿದ್ದೇನೆ. ನೀವು ನಮ್ಮ ಪಕ್ಷದ ನಾಯಕರನ್ನು ನಿಂದಿಸಿದ್ದೀರಿ. ಕಾಂಗ್ರೆಸ್‌ಗೆ ಅವಮಾನ ಮಾಡಿದ್ದೀರಿ. ನಾವು ನಿಮ್ಮ ಹೊಗಳಿಕೆ ಕೇಳಲು ಅಥವಾ ಹೊಗಳಲು ಬಂದಿಲ್ಲ. ಚರ್ಚಿಸಲು ಬಂದಿದ್ದೇವೆ” ಎಂದು ಹೇಳಿದ್ದಾರೆ.

“ಪ್ರತಿಪಕ್ಷಗಳಿಗೆ ಹೋಲಿಸಿದರೆ ಆಡಳಿತ ಪಕ್ಷದ ಸಂಸದರಿಗೆ ಹೆಚ್ಚಿನ ಸಮಯವನ್ನು ಅಧ್ಯಕ್ಷರು ನೀಡುತ್ತಿದ್ದಾರೆ. ರಾಜ್ಯಸಭಾ ಅಧ್ಯಕ್ಷರು ಬಿಜೆಪಿಯ ಅಶಿಸ್ತಿಗೆ ಪ್ರಚೋದನೆ ನೀಡುತ್ತಿದ್ದಾರೆ. ಅವರು ವಿರೋಧ ಪಕ್ಷಗಳ ಸಂಸದರಿಗೆ ಮಾತನಾಡಲು ಬಿಡುತ್ತಿಲ್ಲ” ಖರ್ಗೆ ಆರೋಪಿಸಿದ್ದಾರೆ.

Advertisements

ಮುಂದುವರೆದು ಮಾತನಾಡಿದ ಖರ್ಗೆ, “ನೀವು ನನ್ನನ್ನು ಅವಮಾನಿಸುತ್ತಿದ್ದೀರಿ. ನಾನು ನಿಮ್ಮನ್ನು ಹೇಗೆ ಗೌರವಿಸಲಿ?” ಎಂದರು.

ಅವಿಶ್ವಾಸ ನಿರ್ಣಯದ ಕುರಿತು ಹೆಚ್ಚುತ್ತಿರುವ ಚರ್ಚೆಗಳ ನಡುವೆ ರಾಜ್ಯಸಭೆಯ ಕಲಾಪವನ್ನು ಡಿಸೆಂಬರ್ 16ಕ್ಕೆ ಮುಂದೂಡಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X