ರಾಯಚೂರು | ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು: ಸೂಕ್ತ ಕ್ರಮಕ್ಕೆ ಅಂಬೇಡ್ಕರ್ ಸೇನಾ ಸಮಿತಿ ಆಗ್ರಹ

Date:

Advertisements

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸರಣಿ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ತಪ್ಪಿತಸ್ಥರಾದ ವೈದ್ಯಾಧಿಕಾರಿಗಳು ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಡಾ.ಬಿ.ಆರ್. ಅಂಬೇಡ್ಕರ್ ಸೇನಾ ಸಮಿತಿ ವತಿಯಿಂದ ರಾಯಚೂರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಜಿಲ್ಲಾಸ್ಪತ್ರೆಯಲ್ಲಿ ಮಹಿಳೆಯರ ಸರಣಿ ಸಾವಿನ ಇಡೀ ರಾಜ್ಯವೇ ಬೆಚ್ಚಿ ಬಿದ್ದಿದೆ.ರಾಜ್ಯದ ಎಲ್ಲಾ ಜಿಲ್ಲೆಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಮಟ್ಟದ ಔಷಧಿಗಳನ್ನು ಸರಬರಾಜು ಮಾಡುತ್ತಿರುವುದು ಹಾಗೂ ಸಿಬ್ಬಂದಿಗಳ ಬೇಜವಾಬ್ದಾರಿತನದಿಂದ ದುರ್ಘಟನೆ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ದೂರಿದರು.

ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಪ್ರತಿ ತಿಂಗಳು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕುಂದು ಕೊರತೆ ಸಭೆ ನಡೆಸಬೇಕು. ಬಾಂಗ್ಲಾ ಫಾರ್ಮಾ ಕಂಪನಿಯನ್ನು ಕೂಡಲೇ ಕಪ್ಪು ಪಟ್ಟಿಗೆ ಸೇರಿಸಿ ಕಂಪನಿ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಂಡು ಇವರನ್ನ ಬಂಧಿಸಬೇಕು ಎಂದು ಒತ್ತಾಯಿಸಿದರು.

Advertisements

ಗರ್ಭಿಣಿ ಹಾಗೂ ಬಾಣಂತಿಯರಿಗೆ ಆಯಾ ಭಾಗದ ವ್ಯಾಪ್ತಿಯಲ್ಲಿನ ಅಂಗನವಾಡಿ ಕೇಂದ್ರದ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರಿಂದ ಸೂಕ್ತ ಚಿಕಿತ್ಸೆ ಹಾಗೂ ಪೌಷ್ಠಿಕ ಆಹಾರ ವಿತರಿಸಲು ಸೂಚಿಸಬೇಕು ಎಂದರು.

ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಔಷಧಿಗಳನ್ನು ಹೊರ ಔಷಧಿ ಅಂಗಡಿಗಳ ಮಾಲೀಕರಿಗೆ ಮಾರಾಟ ಮಾಡುತ್ತಿದ್ದು, ಇದನ್ನು ತಕ್ಷಣ ತಡೆಹಿಡಿದು ಸಂಬಂಧಪಟ್ಟವರ ಮೇಲೆ ಕ್ರಮ ಜರುಗಿಸಬೇಕು. ಹಾಗೂ ಗುಣಮಟ್ಟದ ಆಕ್ಸಿಜನ್ ಸರಬರಾಜು ಮಾಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಬಿ.ಸುಧಾನಂದ ಮಾನ್ವಿ, ಕಾರ್ಯದರ್ಶಿ ಪರಮೇಶ ಯರಮರಸ್, ಕಾರ್ಯಾದ್ಯಕ್ಷ ರಂಗಪ್ಪ ಅಸ್ಕಿಹಾಳ್, ತಿಮ್ಮಪ್ಪ ಕಡಗೋಳ, ಆನಂದ ಏಗನೂರು, ರಾಜು ಆಶಾಪೂರು, ಗೋವಿಂದ ಮೇಸ್ತ್ರಿ, ರಮೇಶ ಸಿರವಾರ, ಶಾಂತಕುಮಾರ ಚಿಕ್ಕಸೂಗೂರು ಸೇರಿದಂತೆ ಅನೇಕರು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X