ಉಡುಪಿ | ವ್ಯಾಪಾರದಲ್ಲಿ ದೂರದೃಷ್ಟಿ ಇದ್ದರೆ ಮಾತ್ರ ಯಶಸ್ಸು ಸಾಧ್ಯ – ಮುಮ್ತಾಝ್ ಮನ್ಸೂರಿ

Date:

Advertisements

ದೂರದೃಷ್ಟಿ ಇಟ್ಟು ವ್ಯಾಪಾರ ವ್ಯವಹಾರ ಮಾಡಿದರೆ ಮಾತ್ರ ಯಶಸ್ಸು ಸಾಧಿಸಬಹುದು ಎಂದು ರಿಫಾ ಚೇಂಬರ್ ಆಫ್ ಕಾಮರ್ಸ್ ರಾಜ್ಯಾಧ್ಯಕ್ಚರಾದ ಸಯ್ಯದ್ ಮುಮ್ತಾಜ್ ಮನ್ಸೂರಿರವರು ಹೇಳಿದರು.

ಅವರು ಶುಕ್ರವಾರ ಉಡುಪಿಯ ಮಣಿಪಾಲ್ ಇನ್ ಸಂಭಾಂಗಣದಲ್ಲಿ ರಿಫಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಉಡುಪಿ ಘಟಕದ ಉದ್ಘಾಟನೆಯಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ನಾವು ಮಾಡುವ ವ್ಯಾಪಾರದಲ್ಲಿ ದೂರದೃಷ್ಟಿ ಇರಬೇಕು. ನಾವು ಕೇವಲ ಈಗಿನದ್ದು ಮಾತ್ರ ಯೋಚಿಸುತ್ತೇವೆ. ನಮಗೆ ಒಂದು ಹೊತ್ತಿನ ಊಟ ಸಿಕ್ಕರೆ ಅಷ್ಟೇ ಸಾಕು ಎಲ್ಲವೂ ಸಿಕ್ಕಿದ ಹಾಗೇ ಎಂದೆನೆಸಿಕೊಳ್ಳುತ್ತೇವೆ, ಮಗಳಿಗೆ ಒಂದು ಎಂಬಿಬಿಎಸ್ ಸೀಟು ಸಿಕ್ಕಿದರೆ ಎಲ್ಲವೂ ಸಿಕ್ಕಿದ ಹಾಗೇ ಎಂದೆನೆಸಿಕೊಳ್ಳುತ್ತೇವೆ, ಆದರೆ ನಮಗೆ ಯಾವುದೇ ರೀತಿಯ ದೂರದೃಷ್ಟಿ ಇರುವುದಿಲ್ಲ. ದೂರ ದೃಷ್ಟಿ ಇಟ್ಟು ವ್ಯಾಪಾರ ವ್ಯವಹಾರ ಮಾಡಿದರೆ ಮಾತ್ರ ಯಶಸ್ಸು ಸಾಧಿಸಬಹುದು ಎಂದು ಮುಮ್ತಾಜ್ ಮನ್ಸೂರಿ ಹೇಳಿದರು.

Advertisements

ರಿಫಾ ಚೇಂಬರ್ ಆಫ್ ಕಾಮರ್ಸ್ ವ್ಯಾಪಾರಿಗಳನ್ನು ಒಂದೆಡೆ ಸೇರಿಸುತ್ತದೆ. ನಮ್ಮಲ್ಲಿರುವ ವ್ಯಾಪಾರ ವಹಿವಾಟುಗಳನ್ನು ಪರಸ್ಪರ ಪರಿಚಯ ಪಟ್ಟುಕೊಳ್ಳುವುದರ ಜೊತೆಗೆ ಸಂಬಂಧಗಳನ್ನು ಸಹ ಸದೃಢಗೊಳಿಸುತ್ತದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ರಿಫಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ ರಾಜ್ಯ ಜೊತೆ ಕಾರ್ಯದರ್ಶಿ ಮಹಮ್ಮದ್ ಆರೀಫುಲ್ಲಾ, ಸಂಪರ್ಕ ಕಾರ್ಯದರ್ಶಿ ಸಯ್ಯದ್ ಝುಬೇರ್, ಮಾಧ್ಯಮ ಕಾರ್ಯದರ್ಶಿ ಮತೀನ್ ಅಹಮದ್, ಫಯಾಝ್ ಹಮೀದುಲ್ಲಾ, ಉಡುಪಿ‌ ಉದ್ಯಮಿ ಆಸಿಫ್ ಇಕ್ಬಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಫೈಝ್ ಅಹಮದ್ ಕಾರ್ಯಕ್ರಮ ನಿರೂಪಿಸಿದರು, ಆಸಿಪ್ ಜಿಡಿ ಧನ್ಯವಾದವಿತ್ತರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X