ಧಾರವಾಡ | ಭೋವಿ ಸಮಾಜಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಬೆಳಗಾವಿ ಚಲೋ ಪಾದಯಾತ್ರೆ

Date:

Advertisements

ಭೋವಿ ಸಮಾಜದ ಮೇಲೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ನವಲಗುಂದ ಪಟ್ಟಣದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ವರೆಗೆ ಭೋವಿ ಸಮಾಜದ ವತಿಯಿಂದ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದರು.

ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ನಂತರ ಪ್ರತಿಭಟನಾಕಾರರು ಮಾತನಾಡಿ, ಭೋವಿಗಳು ವಡ್ಡರಲ್ಲ ವಡ್ಡರು ಭೋವಿಗಳಲ್ಲ ಎಂಬುದು ಸ್ಪಷ್ಟವಾಗಿದ್ದು, ಭೋವಿ ಸಮಾಜದ ಜನರು ರಾಜ ಮಹಾರಾಜರ ಕಾಲದಿಂದಲೂ ರಾಜರನ್ನು ಮತ್ತು ಮಠಾಧಿಪತಿಗಳನ್ನು ಮೇಣೆ, ಪಲ್ಲಕ್ಕಿಗಳಲ್ಲಿ ಹೊತ್ತುಕೊಂಡು ಹೋಗುವ ಕಸುಬು ಮಾಡುತ್ತಿದ್ದರು. ಮೂಲ ಭೋವಿ ಜಾತಿಯನ್ನು ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಸೇರಿಸುವಂತೆ ಮೈಸೂರು ಮಹಾರಾಜರೂ ಸಹಿತ ಕೇಂದ್ರ ಸರಕಾರಕ್ಕೆ ಸಿಫಾರಸ್ಸು ಮಾಡಿದ್ದರು.

ವಡ್ಡರ ಜಾತಿಯು ಭೋವಿ ಜಾತಿಗೆ ಸಮಾನಾಂತರ ಪದವಲ್ಲ. ವಡ್ಡರಿಗೆ ನೀಡುವ ಪರಿಶಿಷ್ಟ ಜಾರಿ ಪ್ರಮಾಣ ಪತ್ರವನ್ನು ನಾವು ವಿರೋಧಿಸುವುದಿಲ್ಲ. ಆದರೆ ಭೋವಿ ಸಮಾಜವನ್ನೂ ಪರಿಶಿಷ್ಟ ಪಟ್ಟಿಯಲ್ಲಿ ಸೇರಿಸಬೇಕು. ಭೋವಿ ಸಮುದಾಯ ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯ ವಲಯದಿಂದ ಈಗಲೂ ಹಿಂದುಳಿದಿದೆ. ಭೋವಿ ಪದವನ್ನು ದುರ್ಬಳಕೆ ಮಾಡಿಕೊಳ್ಳುವುದರ ಜೊತೆಗೆ ವಡ್ಡರ ಸಮಾಜದವರು ಭೋವಿ ಸಮುದಾಯವನ್ನು ಹೈಜಾಕ್ ಮಾಡಿ, ಭೋವಿ ಜನಾಂಗದವರಿಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Advertisements

ಈ ವಿಚಾರವಾಗಿ ಮುಂಬರುವ ಡಿಸೆಂಬರ್ 16ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ. ಕೆಲ ತಹಶೀಲ್ದಾರರು ಹಣ ಕೊಟ್ಟರೆ ಮಾತ್ರ ಭೋವಿ ಜಾತಿಗೆ ಎಸ್.ಸಿ ಪ್ರಮಾಣ ಪತ್ರ ಕೊಡುವುದಾಗಿ ಹೇಳುತ್ತಾರೆ. ಈ ಹಿನ್ನೆಲೆಯಲ್ಲಿ ಭೋವಿ ಸಮಾಜಕ್ಕೆ ಬಹಳ ಅನ್ಯಾಯವಾಗುತ್ತಿದ್ದು ಈ ಅನ್ಯಾಯವನ್ನು ಸರಿಪಡಿಸುವಂತೆ ಆಗ್ರಹಿಸಿದರು.

ಈ ವರದಿ ಓದಿದ್ದೀರಾ? ಬೀದರ್‌ | ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ : ವಸತಿ ಶಾಲೆ ಪ್ರಾಂಶುಪಾಲ, ವಾರ್ಡನ್‌ ಅಮಾನತು

ಪಾದಯಾತ್ರೆಯಲ್ಲಿ ಕರ್ನಾಟಕ ರಾಜ್ಯ ಭೋವಿ ಸಮಾಜದ ಕಾರ್ಯಾಧ್ಯಕ್ಷ ಹುಚಪ್ಪ ಭೋವಿ, ಧಾರವಾಡ ಜಿಲ್ಲಾಧ್ಯಕ್ಷ ವಿಠ್ಠಲ್ ಭೋವಿ, ಬಾಗಲಕೋಟೆ ಜಿಲ್ಲಾಧ್ಯಕ್ಷ ಮುತ್ತು ಭೋವಿ, ಸಮಾಜದ ಮುಖಂಡ ಬೇಲೂರಪ್ಪ ಭೋವಿ, ನಾಗಪ್ಪ ಭೋವಿ, ಕೃಷ್ಣ ಭೋವಿ ಹಾಗೂ ಸಮಾಜದ ಹಿರಿಯರು, ಮಹಿಳೆಯರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X