ಓಪನ್‌ಎಐ ಬಗ್ಗೆ ಗಂಭೀರ ಆರೋಪ ಮಾಡಿದ್ದ ಸಂಶೋಧಕ ಸುಚಿರ್ ಬಾಲಾಜಿ ಶವವಾಗಿ ಪತ್ತೆ

Date:

Advertisements

ಓಪನ್‌ಎಐ ಬಗ್ಗೆ ಗಂಭೀರ ಆರೋಪ ಮಾಡಿದ್ದ ಭಾರತೀಯ ಮೂಲದ ಸಂಶೋಧಕ ಸುಚಿರ್ ಬಾಲಾಜಿ ಶವವಾಗಿ ಪತ್ತೆಯಾಗಿದ್ದಾರೆ. 26 ವರ್ಷದ ಸುಚಿರ್ ಯುಎಸ್‌ನ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ನವೆಂಬರ್ 26ರಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಸರಿಸುಮಾರು ಮಧ್ಯಾಹ್ನ 1 ಗಂಟೆಗೆ ಸುಚಿರ್ ಅಪಾರ್ಟ್‌ಮೆಂಟ್ ಪರಿಶೀಲಿಸುವಂತೆ ಕರೆಯೊಂದು ಬಂದಿದೆ. ಅದೇ ದಿನ ಬಾಲಾಜಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ. ಇತರೆ ಯಾವುದೇ ಅನುಮಾನಾಸ್ಪದ ಪುರಾವೆಗಳು ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿದೆ.

ಇದನ್ನು ಓದಿದ್ದೀರಾ? ಬೆಂಗಳೂರು | ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ರೋಗ ಪತ್ತೆಗೆ ಕೃತಕ ಬುದ್ಧಿಮತ್ತೆ ಬಳಕೆ

Advertisements

ಜನಪ್ರಿಯ ಕೃತಕ ಬುದ್ಧಿಮತ್ತೆ ಸಂಸ್ಥೆಯಾದ ಓಪನ್‌ಎಐ (OpenAI) ಬಗ್ಗೆ ಸುಚಿರ್ ಗಂಭೀರ ಆರೋಪಗಳನ್ನು ಮಾಡಿದ ಕೆಲವೇ ತಿಂಗಳುಗಳ ನಂತರ ಈ ದುರಂತ ಸಂಭವಿಸಿದೆ.

ಓಪನ್‌ಎಐ ಸಂಸ್ಥೆಯ ಮಾಜಿ ಸಂಶೋಧಕರಾಗಿದ್ದ ಬಾಲಾಜಿ ಅವರು ಈ ಹಿಂದೆ ನ್ಯೂಯಾರ್ಕ್ ಟೈಮ್ಸ್‌ಗೆ ಲೇಖನವೊಂದನ್ನು ಬರೆದಿದ್ದರು. “ಚಾಟ್‌ಜಿಪಿಟಿಗೆ ತರಬೇತಿ ನೀಡಲು ಓಪನ್‌ಎಐ ಹಕ್ಕುಸ್ವಾಮ್ಯದ ವಸ್ತುಗಳನ್ನು ಬಳಸುತ್ತಿದೆ” ಎಂದು ತಾನಿದ್ದ ಸಂಸ್ಥೆಯ ವಿರುದ್ಧವೇ ಆರೋಪಿಸಿದ್ದರು.

ಓಪನ್‌ಎಐ ಸಂಸ್ಥೆ ಅಮೆರಿಕದ ಹಕ್ಕುಸ್ವಾಮ್ಯ ನಿಯಮಗಳನ್ನು ಉಲ್ಲಂಘಿಸುತ್ತದೆ. ಚಾಟ್‌ಜಿಪಿಟಿಯಂತಹ ತಂತ್ರಜ್ಞಾನಗಳು ಇಂಟರ್‌ನೆಟ್ ಅನ್ನು ಹಾನಿಗೊಳಿಸುತ್ತಿವೆ ಎಂದು ದೂರಿದ್ದರು. ಹಾಗೆಯೇ ಇದಾದ ಕೆಲವು ದಿನಗಳ ನಂತರ ತಾನಾಗಿಯೇ ನ್ಯೂಯಾರ್ಕ್ ಟೈಮ್ಸ್ ಅನ್ನು ಸಂಪರ್ಕಿಸಿ ಈ ಲೇಖನ ನೀಡಿರುವುದಾಗಿ ತಿಳಿಸಿದ್ದರು.

ಇನ್ನು ಈ ಹಿಂದೆ ಓಪನ್‌ಎಐ ಬಗ್ಗೆ ಕೆಲವು ಆರೋಪಗಳನ್ನು ಮಾಡಿದ್ದ ಉದ್ಯಮಿ ಎಲಾನ್ ಮಸ್ಕ್, ಬಾಲಾಜಿ ಸಾವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಬರೀ ‘ಹ್ಮ್‌’ ಎಂದು ಪೋಸ್ಟ್ ಮಾಡುವ ಮೂಲಕ ಮಸ್ಕ್ ಅನುಮಾನ ವ್ಯಕ್ತಪಡಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

Download Eedina App Android / iOS

X