ಲಿವ್-ಇನ್ ಸಂಬಂಧ | ಮುಸ್ಲಿಂ ಯುವಕನ ಜೊತೆ ಜೀವಿಸುವ ಬಗ್ಗೆ ನಿರ್ಧರಿಸಲು ಹಿಂದು ಯುವತಿಗೆ ಅವಕಾಶ ಕೊಟ್ಟ ಬಾಂಬೆ ಹೈಕೋರ್ಟ್‌

Date:

Advertisements

ಲಿವ್-ಇನ್ ಸಂಬಂಧದಲ್ಲಿ ಜೊತೆಯಾಗಿ ಬದುಕುತ್ತಿದ್ದ ಮುಸ್ಲಿಂ ಯುವಕ ಮತ್ತು ಹಿಂದು ಯುವತಿಯನ್ನು ಬೇರ್ಪಡಿಸಲು ಯುವತಿಯ ಪೋಷಕರು ಯತ್ನಿಸಿದ್ದರು. ಪ್ರಕರಣವು ಕೋರ್ಟ್‌ ಮೆಟ್ಟಿಲೇರಿದ್ದು, ವಿಚಾರಣೆ ನಡೆಸಿರುವ ಬಾಂಬೆ ಹೈಕೋರ್ಟ್‌, “ಇದು ಆಕೆಯ ಜೀವನ. ಆಕೆಯ ಭವಿಷ್ಯದ ಬಗ್ಗೆ ಆಕೆಯೇ ನಿರ್ಧರಿಸಬೇಕು” ಎಂದು ಹೇಳಿದೆ. ತನ್ನ ಬದುಕಿನ ಆಯ್ಕೆಗೆ ಯುವತಿಗೆ ಅನುಮತಿ ನೀಡಿದೆ.

ಯವಕ-ಯುವತಿಯ ಅಂತರ್‌ ಧರ್ಮೀಯ ಸಂಬಂಧಕ್ಕೆ ಯುವತಿಯ ಷೋಷಕರು ವಿರೋಧ ವ್ಯಕ್ತಪಡಿಸಿದ್ದರು. ಯುವಕ-ಯುವತಿಯ ಸಂಬಂಧವನ್ನು ಮುರಿದು, ಅವರಿಬ್ಬರನ್ನು ಬೇರ್ಪಡಿಸಲು ಮುಂದಾಗಿದ್ದರು. ಯುವತಿಯನ್ನು ಬಲವಂತವಾಗಿ ಚೆಂಬೂರ್ ಸರಕಾರಿ ಮಹಿಳಾ ವಸತಿ ನಿಲಯ ಕರೆದೊಯ್ಯಲಾಗಿತ್ತು. ಆಕೆಯನ್ನು ವಸತಿ ನಿಲಯದಿಂದ ಬಿಡುಗಡೆ ಮಾಡಲು ನಿರ್ದೇಶಿಸಬೇಕೆಂದು ಕೋರಿ ಯುವಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿರುವ ಬಾಂಬೆ ಹೈಕೋರ್ಟ್‌ ನ್ಯಾಯಮೂರ್ತಿಗಳಾದ ಭಾರತಿ ಡಾಂಗ್ರೆ ಮತ್ತು ಮಂಜುಷಾ ದೇಶಪಾಂಡೆ ಅವರಿದ್ದ ಪೀಠ, ತನ್ನ ಭವಿಷ್ಯದ ಬದುಕಿನ ಆಯ್ಕೆ ಯುವತಿಗೇ ಬಿಟ್ಟ ವಿಚಾರ ಎಂದು ಸಾರಿದೆ.

Advertisements

“ಇದು ಆಕೆಯ ಜೀವನ. ಆಕೆ ಬಯಸಿದ್ದನ್ನು ಮಾಡಲಿ. ಆಕೆಗೆ ನಾವು ಶುಭ ಹಾರೈಸಬಹುದಷ್ಟೇ. ಹೀಗೇ ಮಾಡಬೇಕೆಂದು ಒತ್ತಾಯ ಮಾಡಲು ಸಾಧ್ಯವಿಲ್ಲ. ನಾವು ಆಕೆಯನ್ನು ಪೋಷಕರ ಜೊತೆ ಹೋಗಲು ಸಿದ್ಧವೇ ಎಂದು ಕೇಳಿದ್ದೇವೆ. ಆಕೆ ತಯಾರಿಲ್ಲ. ಯುವತಿಗೆ ತನ್ನ ಯೋಗಕ್ಷೇಮದ ಬಗ್ಗೆ ತಿಳಿವಳಿಕೆ ಇರುವುದೇ ಆದರೆ ಯಾವುದೇ ಸಮಸ್ಯೆ ಇಲ್ಲ” ಎಂದು ನ್ಯಾಯಾಲಯ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X