ವಿಜಯಪುರ | ಸರ್ಕಾರಿ ಪದವಿ ಕಾಲೇಜು ಮಂಜೂರಿಗೆ ದಲಿತ ವಿದ್ಯಾರ್ಥಿ ಪರಿಷತ್ತು ಆಗ್ರಹ

Date:

Advertisements

ಜಿಲ್ಲೆಯಲ್ಲಿ ಸರ್ಕಾರಿ ಬಿಎಡ್ ಪದವಿ ಕಾಲೇಜುಗಳಲ್ಲಿ ಪ್ರಸ್ತುತ ಖಾಸಗಿ ಪದವಿ ಶಿಕ್ಷಣ ಸಂಸ್ಥೆಗಳು ಮನಬಂದಂತೆ ಹಣ ವಸೂಲಿಗೆ ಇಳಿದಿದ್ದು, ಸರ್ಕಾರಿ ಪದವಿ ಕಾಲೇಜು ಮಂಜೂರು ಮಾಡಲು ಒತ್ತಾಯಿಸಿ ವಿಜಯಪುರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಮನವಿ ಸಲ್ಲಿಸಿದರು.

ಈ ವೇಳೆ ಪರಿಷತ್ ಮುಖಂಡರು ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ಪ್ರತಿ ವರ್ಷ 20 ರಿಂದ 30 ಸಾವಿರ ವಿದ್ಯಾರ್ಥಿಗಳು ಪದವಿ ಮುಗಿಸಿ ತೇರ್ಗಡೆ ಹೊಂದುತ್ತಾರೆ. ಅದರಲ್ಲಿ ಅರ್ಧ ಭಾಗದಷ್ಟು ಜನ ಬಿಎಡ್ ದಾಖಲಾತಿಗೆ 2 ರಿಂದ 3 ಲಕ್ಷ ರೂಪಾಯಿ ವಸೂಲಿ ಮಾಡುತ್ತಿದ್ದು, ಇದರಿಂದ ಬಡ ಕುಟುಂಬ ಹಾಗೂ ಗ್ರಾಮೀಣ ಭಾಗದ ಮಕ್ಕಳು ತಮ್ಮ ಶಿಕ್ಷಣವನ್ನೇ ಕುಂಟಿತಗೊಳಿಸಿಕೊಂಡು ಕೂಲಿ ಮಾಡುವಂತಹ ಪರಿಸ್ಥಿತಿ ಎದುರಾಗಿದೆ. ವಿದ್ಯಾಭ್ಯಾಸ ಮಾಡಲೇಬೇಕು ಅನ್ನುವ ಅದೆಷ್ಟೋ ವಿದ್ಯಾರ್ಥಿಗಳು ಸಾಲಮಾಡಿ, ಮನೆಯಲ್ಲಿಯ ಒಡವೆ ಮಾರಿ ಓದುವ ವಾತಾವರಣ ಸೃಷ್ಟಿಯಾಗಿದೆ.

ತಾವು ಮನಸ್ಸು ಮಾಡಿ ಸರ್ಕಾರಿ ಬಿಎಡ್ ಕಾಲೇಜು ಮಂಜೂರು ಮಾಡಿದರೆ, ಹಣ ವಸೂಲಿ ಮಾಡುತ್ತಿರುವ ಕಾಲೇಜುಗಳ ಹಾವಳಿ ಕಡಿಮೆಯಾಗುತ್ತದೆ. ನಾನೂ ಶಿಕ್ಷಕನಾಗಿ ಸೇವೆ ಸಲ್ಲಿಸಬೇಕೆನ್ನುವ ಕನಸು ಹೊತ್ತಿರುವ‌ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.

Advertisements

ಈ ವರದಿ ಓದಿದ್ದೀರಾ? ಬೆಳಗಾವಿ | ಸುಳ್ಳು ಹೆಸರು ದಾಖಲಿಸಿ, ಶಿಶುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪರಾರಿಯಾದ ತಾಯಿ

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಅಕ್ಷಯ ಅಜಮನಿ, ಮಾದೇಶ ಚಲವಾದಿ, ಕಾರ್ಯಕರ್ತ ಸಂದೇಶ್ ಕುಮುಟಗಿ, ಯಾಸೀನ್ ಇನಾಮಧಾರ, ಆಶೀಪ್, ಲೂಲ್ಲು ಮುಲ್ಲಾ, ಮುಂತಾದವರು ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X