ದಾವಣಗೆರೆ | ಅಧಿವೇಶನದಲ್ಲಿ ಒಳಮೀಸಲಾತಿ ಜಾರಿಗೊಳಿಸಲು ಪ್ರಸ್ತಾಪಿಸಿ: ಶಾಸಕರಿಗೆ ದಸಂಸ ಮನವಿ

Date:

Advertisements

ಅಧಿವೇಶನದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶನಂತೆ ಒಳಮೀಸಲಾತಿ ಬಗ್ಗೆ ಚಾರಿಗೊಳಿಸುವ ಬಗ್ಗೆ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯಬೇಕು ಎಂದು ಒತ್ತಾಯಿಸಿ ಮೈಕೊಂಡ ಕ್ಷೇತ್ರದ ಶಾಸಕ ಬಸವಂತಪ್ಪ ಅವರಿಗೆ ದಲಿತ ಸಂಘರ್ಷ ಸಮಿತಿಯ (ಪ್ರೊ.ಕೃಷ್ಣಪ್ಪ) ವತಿಯಿಂದ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.

ದಾವಣಗೆರೆ ನಗರದ ಪ್ರವಾಸಿ ಮಂದಿರದಲ್ಲಿ ಮಾಯಕೊಂಡ ಶಾಸಕ ಸನ್ಮಾನ್ಯ ಶ್ರೀ ಕೆ. ಎಸ್. ಬಸವಂತಪ್ಪ ಅವರನ್ನು ಭೇಟಿ ಮಾಡಿದ ದಸಂಸ ಮುಖಂಡರು, ಮನವಿ ಸಲ್ಲಿಸಿ ಆಗ್ರಹಿಸಿದರು.

“ಪರಿಶಿಷ್ಟ ಜಾತಿಯಲ್ಲಿನ ಒಳಮೀಸಲಾತಿ ವರ್ಗಿಕರಣದ ಆಗಸ್ಟ್ 1ರಂದು ನೀಡಿರುವ ಸುಪ್ರೀಂ ಕೋರ್ಟ್ ಆದೇಶ ಮೇರೆಗೆ ಒಳಮೀಸಲಾತಿ ಜಾರಿಗೊಳಿಸುವಂತೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕು. ಈ ಮೂಲಕ ಸರ್ಕಾರದ ಗಮನ ಸೆಳೆದು ಶೀಘ್ರ ಸಾಮಾಜಿಕ ನ್ಯಾಯದ ಒಳಮೀಸಲಾತಿಯನ್ನು ರಾಜ್ಯದಲ್ಲಿ ಜಾರಿಗೊಳಿಸಲು ಸರ್ಕಾರಕ್ಕೆ ಒತ್ತಾಯಿಸಬೇಕು” ಎಂದು ಆಗ್ರಹಿಸಿದರು.

Advertisements

ಇದನ್ನು ಓದಿದ್ದೀರಾ? ಬಳ್ಳಾರಿ | ನಮ್ಮ ಚರಿತ್ರೆಯನ್ನು ನಾವು ನೆನಪಿಟ್ಟುಕೊಳ್ಳಬೇಕು: ಸಾಹಿತಿ ವಸುಂಧರಾ ಭೂಪತಿ

ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ(ಪ್ರೊ. ಬಿ. ಕೃಷ್ಣಪ್ಪ) ಜಿಲ್ಲಾ ಸಂಚಾಲಕರಾದ ಕುಂದುವಾಡ ಮಂಜುನಾಥ್, ಮುಖಂಡರಾದ ವಿಜಯ ಲಕ್ಷ್ಮೀ, ಕೆ,ಪ್ರದೀಪ್ ಕೆ ಟಿ ಜೆ ನಗರ, ಮಂಜುನಾಥ್ ಆರ್, ವೀರಭದ್ರಪ್ಪ ಬಿ. ಎಚ್ ಹಾಗೂ ಹೆಗ್ಗೆರಿ ರಂಗಪ್ಪ ಮತ್ತು ಇತರ ದಲಿತ ಮುಖಂಡರು ಹಾಜರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

Download Eedina App Android / iOS

X