ಬೆಳಗಾವಿ | ಅಧಿವೇಶನದಲ್ಲಿ ಸ್ಲಂ ಜನರ ಸಮಸ್ಯೆಗಳ ಮೇಲೆ ಚರ್ಚೆ : ಪ್ರಸಾದ್‌ ಅಬ್ಬಯ್ಯ

Date:

Advertisements

  ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯಿಂದ ಡಿಸೆಂಬರ್ 13 ರಂದು ಬೆಳಗಾವಿಯ ಸುವರ್ಣ ಸೌಧದ ಮುಂದೆ ನಡೆದ ಸಾಮಾಜಿಕ ನ್ಯಾಯಕ್ಕಾಗಿ ಸ್ಲಂ ನಿವಾಸಿಗಳ ಹಕ್ಕೋತ್ತಾಯ ಪ್ರತಿಭಟನೆ ಸ್ಥಳಕ್ಕೆ  ಸರ್ಕಾರದ ಪರವಾಗಿ ಆಗಮಿಸಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಪ್ರಸಾದ್‌ ಅಬ್ಬಯ್ಯ ಮನವಿ ಸ್ವೀಕರಿಸಿದರು.

 ಮನವಿ ಸ್ವೀಕರಿಸಿ ಮಾತನಾಡಿದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಪ್ರಸಾದ್‌ ಅಬ್ಬಯ್ಯ,  ರಾಜ್ಯದಲ್ಲಿ ಸ್ಲಂ ನಿವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ ಪ್ರಸ್ತುತ ಬಜೆಟ್‌ನಲ್ಲಿ ಹಣ ಮೀಸಲಿಡುವುದು ಸೇರಿದಂತೆ ಸ್ಲಂ ಕಾಯಿದೆಗೆ ವಿರುದ್ಧವಾಗಿರುವ ವಸತಿ ಇಲಾಖೆ ಸುತ್ತೋಲೆ ವಾಪಾಸಾತಿ ಹಾಗೂ ಲ್ಯಾಂಡ್‌ ಬ್ಯಾಂಕ್‌ ನೀತಿ ಕುರಿತಂತೆ ಪ್ರಸ್ತುತ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ಮಾಡಲು ಈಗಾಗಲೇ ಸಮಯ ನಿಗಧಿಯಾಗಿದ್ದು ಅದರಂತೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸ್ಲಂ ಜನರಿಗೆ ಹಕ್ಕುಪತ್ರ ವಿತರಣೆ ನೋಂದಣಿ ಮತ್ತು ಇ-ಖಾತಾ ಪ್ರಕ್ರಿಯೆಯನ್ನು ಸರಳಗೊಳಿಸಿ ಖಾಸಗಿ ಸ್ಲಂಗಳ ಅಭಿವೃದ್ಧಿಗೂ ಮುಂದಾಗುವ ಜೊತೆಗೆ ಪ್ರಧಾನ್‌ ಮಂತ್ರಿ ಅವಾಸ್‌ ಯೋಜನೆ ಅಡಿಯಲ್ಲಿ ನಿರ್ಮಿಸುತ್ತಿರುವ ವಸತಿ ಯೋಜನೆಯನ್ನು ಪೂರ್ಣಗೊಳಲು ಹಣ ಮಂಜೂರಾತಿ ಸೇರಿದಂತೆ ಸ್ಲಂ ಜನರ ಪರವಾದ ಕಾನೂನು ಮತ್ತು ನೀತಿಗಳನ್ನು ನನ್ನ ಅವಧಿಯಲ್ಲಿ ಮುಖ್ಯಮಂತ್ರಿ ಮತ್ತು ವಸತಿ ಸಚಿವರ ಬೆಂಬಲದೊಂದಿಗೆ ಮಾಡುವ ಭರವಸೆ ನೀಡಿದರು.

1000772262

 ನಾನೂ ದಲಿತನಾಗಿ ಸ್ಲಂ ಜನರ ಕಷ್ಟದ ಅನುಭವವನ್ನು ಹೊಂದಿದ್ದು ಈ ಕಷ್ಟಗಳನ್ನು ಪರಿಹರಿಸಲು ಪ್ರಮಾಣಿಕ ಪ್ರಯತ್ನ ಮಾಡಿ, ಮುಂದಿನ ದಿನಗಳಲ್ಲಿ ಸ್ಲಂ ಜನರ ರಾಜ್ಯಮಟ್ಟದ ಸಮಾವೇಶವನ್ನು ಮಾಡುವ ಮೂಲಕ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲಾಗುವುದು. ನಾನೂ ಸಹ ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯ ಹಕ್ಕೋತ್ತಾಯಗಳಿಗೆ ಪೂರಕವಾಗಿದ್ದೇನೆ ಎಂದರು.

Advertisements

ವಸತಿ ಕಾರ್ಯದರ್ಶಿಗಳ ಪರವಾಗಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಆಯುಕ್ತರಾದ ಡಾ.ಅಶೋಕ್‌ ಡಿ.ಆರ್‌ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿ ಮಾತನಾಡಿದರು. ಈಗಾಗಲೇ ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ನೋಂದಣಿಗೆ ಇ-ಖಾತಾ ತೊಡಕಾಗಿರುವ ಬಗ್ಗೆ ಮುದ್ರಾಂಕ ಇಲಾಖೆಯ ಎಐಜಿ ಅವರೊಂದಿಗೆ ಸಭೆ ನಡೆಸಿ 94ಸಿಸಿ ಮಾದರಿಯಲ್ಲಿ ನೋಂದಣಿ ಮಾಡಿಕೊಡಲು ಒಪ್ಪಿಸಲಾಗಿದೆ. ಹಾಗೆ ಇದುವರೆಗೂ 1.86 ಲಕ್ಷ ಕುಟುಂಬಗಳಿಗೆ ಇದುವರೆಗೂ ಹಕ್ಕುಪತ್ರ ನೀಡಲಾಗಿದೆ ತೊರಿತವಾಗಿ ಪ್ರಧಾನ್‌ ಮಂತ್ರಿ ಅವಾಸ್‌ ಯೋಜನೆಯಲ್ಲಿ ಬಾಕಿ ಇರುವ ಮನೆಗಳನ್ನು ಪೂರ್ಣಗೊಳಿಸಿ ಹಸ್ತಾಂತರಿಸಲಾಗುವುದು ಖಾಸಗಿ ಮಾಲೀಕತ್ವದ ಘೋಷಣೆಗೆ ಯಾವುದೇ ರೀತಿಯ ತೊಡಕಿಲ್ಲ, ಈಗಾಗಲೇ ಹಣಕಾಸು ಇಲಾಖೆ ಸ್ಲಂಗಳ ಘೋಷಣೆ ಆಡಳಿತಾತ್ಮಕ ವಿಚಾರವೆಂದು ಸ್ಪಷ್ಟೀಕರಣ ನೀಡಿರುವುದರಿಂದ ಉತ್ತರ ಕರ್ನಾಟಕ ಭಾಗದ ಸ್ಲಂ ನಿವಾಸಿಗಳಿಗೆ ವಸತಿ ಇಲಾಖೆ ಸುತ್ತೋಲೆ ತೊಡಕಾಗಿದ್ದು, ಎಲ್ಲಾ ವಿಭಾಗಗಳಿಂದ ಬಾಕಿ ಇರುವ ಸರ್ಕಾರಿ ಮತ್ತು ಖಾಸಗಿ ಕೊಳಚೆ ಪ್ರದೇಶಗಳ ಘೋಷಣೆಗೆ ಕ್ರಮವಹಿಸಲು ಸ್ಪಷ್ಟ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.                                                           

     ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸ್ಲಂ ಜನಾಂದೋಲನ ಕರ್ನಾಟಕದ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ, 2023ರ ವಿಧಾನ ಸಭೆ ಚುನಾವಣೆಯಲ್ಲಿ ಸ್ಲಂ ಜನರಿಗೆ ನೀಡಿರುವ ಪ್ರಾಳಿಕೆಯ ಭರವಸೆಯಂತೆ ಸಿದ್ದರಾಮಯ್ಯ ಸರ್ಕಾರ ನಡೆಯಬೇಕು. ನಗರಗಳಲ್ಲಿ ಅಸಮಾನತೆ ಮತ್ತು ಅಭಿವೃದ್ಧಿ ತಾರತಮ್ಯದಿಂದ ಕೊಳಚೆ ಪ್ರದೇಶದಲ್ಲಿರುವ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ಖಾತ್ರಿ ಮಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಕಾಂಗ್ರೆಸ್‌ ಪಕ್ಷದ ಭರವಸೆಯ ಮೇಲೆ ಸ್ಲಂ ನಿವಾಸಿಗಳು ಈ ಸರ್ಕಾರವನ್ನು ಆಯ್ಕೆ ಮಾಡಿದ್ದು ವಸತಿ ಹಕ್ಕು ಕಾಯಿದೆ, ನಗರ ಉದ್ಯೋಗ ಖಾತ್ರಿ ಕಾಯಿದೆ, ಹೊಸ ಸ್ಲಂ ಕಾಯಿದೆ ಸೇರಿದಂತೆ ನಿವೇಶನ ರಹಿತರಿಗೆ ವಿಶೇಷ ವರ್ಗಗಳಿಗೆ ವಸತಿ ಕಲ್ಪಿಸಲು ಲ್ಯಾಂಡ್‌ ಬ್ಯಾಂಕ್ ನೀತಿ ಜಾರಿಯನ್ನು ತುರ್ತಾಗಿ ಮಾಡಬೇಕು ಎಂದು ಒತ್ತಾಯಿಸಿದರು.

1000772264

ಸ್ಲಂ ಜನರಿಗೆ ಸ್ಪಂದಿಸುವ ಮತ್ತು ಸರ್ಕಾರಕ್ಕೆ ಹೆಸರು ತರುವ ದಕ್ಷತೆಯ ವಸತಿ ಸಚಿವರನ್ನು ಹಾಗೂ ವಸತಿ ಕಾರ್ಯದರ್ಶಿಯನ್ನು ಸರ್ಕಾರ ನೇಮಕ ಮಾಡಬೇಕೆಂದು ಆಗ್ರಹಿಸಿ ಖಾಸಗಿ ಕೊಳಚೆ ಪ್ರದೇಶಗಳ ಘೋಷಣೆ ತಡೆಯಿಂದ ಉತ್ತರ ಕರ್ನಾಟಕದ ಕಲ್ಯಾಣ, ಕಿತ್ತೂರು ವಲಯಗಳ 150 ಸ್ಲಂಗಳ ಕಳೆದ 2 ವರ್ಷಗಳಿಂದ ಘೋಷಣೆಯಾಗದೆ ಅತಂತ್ರ ಸ್ಥಿತಿಯಲ್ಲಿವೆ, ಈ ಬಗ್ಗೆ ಕೊಳಚೆ ಪ್ರದೇಶಗಳ ಸಮಗ್ರ ಅಭಿವೃದ್ಧಿ ಕುರಿತಂತೆ ಚಳಿಗಾಲದ ಅಧಿವೇಶದಲ್ಲಿ ಚರ್ಚೆಯಾಗಬೇಕೆಂದು ಒತ್ತಾಯಿಸಿದರು

ಪ್ರತಿಭಟನೆಯ ನೇತೃತ್ವವನ್ನು ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಮಿತಿ ಪದಾಧಿಕಾರಿಗಳಾದ ಗದಗನ ಇಮ್ತಿಯಾಜ್‌ ಆರ್‌ ಮಾನ್ವಿ, ಹುಬ್ಬಳ್ಳಿಯ ಶೋಭ ಕಮತಾರ್‌, ಬೆಳಗಾವಿಯ ಫಕೀರಪ್ಪ ತಳವಾರ್‌, ಬೆಂಗಳೂರಿನ ಚಂದ್ರಮ್ಮ, ರಾಯಚೂರಿನ ಜನಾರ್ಧನ್‌ ಹಳ್ಳಿಬೆಂಚಿ, ದಾವಣಗೆರೆಯ ರೇಣುಕ ಎಲ್ಲಮ್ಮ, ತುಮಕೂರಿನ ಅರುಣ್‌, ಹೊಸಪೇಟೆಯ ವೆಂಕಮ್ಮ, ಬಳ್ಳಾರಿಯ ಶೇಖರ್‌ ಬಾಬು, ಬಿಜಾಪುರದ ಅಕ್ರಮ್‌ ಮಶಾಲ್ಕರ್‌, ಕಲ್ಬುರ್ಗಿಯ ರೇಣುಕ ಸರಡಗಿ, ಯಾದಗಿರಿಯ ಹಣಮಂತ ಸಹಪೂರ್ಕರ್‌, ಚಿತ್ರದುರ್ಗದ ಸುಧಾ, ಧಾರವಾಡದ ರಸೂಲ್‌ ನದಾಫ್‌ ವಹಿಸಿದ್ದರು. 

ಸಾವಿತ್ರಿ ಬಾಯಿಪುಲೆ ಮಹಿಳಾ ಸಂಘಟನೆಯ ಮಂಜೂಬಾಯಿ, ದಮನಿತ ಸಾಧನ ಮಹಿಳಾ ಸಂಘದ ಅನ್ನಪೂರ್ಣ ಹಾಗೂ ಸ್ಲಂ ಜನಾಂದೋಲನ ಕರ್ನಾಟಕದ ಸಾವಿರಾರೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕಾಗವಾಡ ತಾಲೂಕಿಗೆ ಕಿತ್ತೂರು ರಾಣಿ ಚೆನ್ನಮ್ಮ ವೀರಜ್ಯೋತಿ

ಕಿತ್ತೂರು ಉತ್ಸವದ ಭಾಗವಾಗಿ ವೀರರಾಣಿ ಕಿತ್ತೂರು ಚೆನ್ನಮ್ಮ ಜ್ಯೋತಿಯು ರಾಜ್ಯದ ಎಲ್ಲ...

ಬೆಳಗಾವಿ | ʼಕಾವ್ಯ ಎಲ್ಲರ ಮನಸ್ಸನ್ನು ಮೃದುಗೊಳಿಸುವ ಮಧುರ ಭಾವʼ

ಕಾವ್ಯ ಎಲ್ಲರ ಮನಸ್ಸನ್ನು ಮೃದುಗೊಳಿಸುವ ಮಧುರ ಭಾವ. ಸ್ಥಳೀಯ ಭಾಷೆ, ಶೈಲಿ,...

ಚಿಕ್ಕೋಡಿ | ಬಿಜೆಪಿ ಟಿಕೆಟ್‌ ಪೈಪೋಟಿ, ಶಕ್ತಿಪ್ರದರ್ಶನಕ್ಕೆ ಅಣ್ಣಾಸಾಹೇಬ್ ಜೊಲ್ಲೆ ಸಜ್ಜು

ಲೋಕಸಭೆ ಚುನಾವಣೆ ಹತ್ತಿರದಲ್ಲಿರುವಾಗಲೇ, ಚಿಕ್ಕೋಡಿಯಲ್ಲಿ ಬಿಜೆಪಿ ಟಿಕೆಟ್‌ ಮೇಲೆ ಕಣ್ಣಿಟ್ಟಿರುವ ಆಕಾಂಕ್ಷಿಗಳ...

ಬೆಳಗಾವಿ | ಭಗತ್ ಸಿಂಗ್ ಜನ್ಮದಿನ‌ ಆಚರಣೆ, ಅವರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳ ಸಂಕಲ್ಪ

ನಗರದಲ್ಲಿ ಎಐಡಿಎಸ್ಓ ಹಾಗೂ ಎಐಡಿವೈಓ ಸಂಘಟನೆಗಳ ವತಿಯಿಂದ ಕ್ರಾಂತಿಕಾರಿ ಭಗತ್ ಸಿಂಗ್...

Download Eedina App Android / iOS

X