ಬೀದರ್‌ | ಕೆರೆಗಳಿಂದ ಹೊಲಗಳಿಗೆ ನೀರು ಹರಿಸಲು ಆಗ್ರಹ

Date:

Advertisements

ಔರಾದ್ ತಾಲ್ಲೂಕಿನ ನೀರಾವರಿ ಇಲಾಖೆ ವ್ಯಾಪ್ತಿಗೆ ಬರುವ ಏಕಂಬಾ, ಹುಲ್ಯಾಳ ಹಾಗೂ ಖಂಡೆಕೇರಿ ಗ್ರಾಮಗಳ ಕೆರೆಗಳಲ್ಲಿ ಸಂಗ್ರಹವಾದ ನೀರು ಸುತ್ತಲಿನ ಹೊಲಗಳಿಗೆ ಹರಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಶೆಟ್ಟಿ ಬಣ) ಹಾಗೂ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ಆಗ್ರಹಿಸಿದರು.

ಈ ಕುರಿತು ಜಂಟಿ ಸಂಘಟನೆಗಳ ಪ್ರಮುಖರು ಶುಕ್ರವಾರ ಔರಾದ್‌ ಗ್ರೇಡ್-‌2 ತಹಸೀಲ್ದಾರ್‌ ಸಂಗಯ್ಯಾ ಸ್ವಾಮಿ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ರೈತರ ಕೃಷಿ ಭೂಮಿಗಳಿಗೆ ಅನುಕೂಲ ಆಗಬೇಕೆಂಬ ಉದ್ದೇಶದಿಂದ ಸರ್ಕಾರ ಕೋಟ್ಯಾಂತರ ರೂಪಾಯಿ ವೆಚ್ಚದಿಂದ ಬ್ರಿಜ್ ಕಂ ಬ್ಯಾರೇಜ್‌ಗಳು ನಿರ್ಮಿಸಿದೆ. ಆದರೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವು ಉಪಯೋಗಕ್ಕೆ ಬಾರದೆ ಹಾಳಾಗುತ್ತಿವೆ. ಈ ಮೂರು ಗ್ರಾಮಗಳ ಕೆರೆ ನೀರು ಬಿಟ್ಟರೆ ಸುತ್ತಲಿನ ಅನೇಕ ಗ್ರಾಮಗಳ ಹಿಂಗಾರು ಬೆಳೆಗಳಿಗೆ ಅನುಕೂಲವಾಗಲಿದೆʼ ಎಂದು ಒತ್ತಾಯಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ಖಾಲಿಯಿರುವ ಸಿಬ್ಬಂದಿ ಕೊರತೆ ನೀಗಿಸಿ : ಶಾಸಕ ಪ್ರಭು ಚವ್ಹಾಣ

ಈ ಸಂದರ್ಭದಲ್ಲಿ ಕರವೇ ತಾಲೂಕಾಧ್ಯಕ್ಷ ಅನಿಲ ದೇವಕತ್ತೆ, ರೈತ ಸಂಘದ ತಾಲೂಕಾಧ್ಯಕ್ಷ ಪ್ರಕಾಶ ಬಾವಗೆ, ರೈತ ಮುಖಂಡ ವಿಶ್ವನಾಥ ಧರಣೆ, ನಮ್ಮ ಕರ್ನಾಟಕ ಸೇನೆ ತಾಲೂಕಾಧ್ಯಕ್ಷ ಬಾಲಾಜಿ ದಾಮ, ಗೌರವಾಧ್ಯಕ್ಷ ಬಸವರಾಜ ಶೆಟಕಾರ್ ಸೇರಿದಂತೆ ಅರ್ಜುನ್ ಭಂಗೆ, ಬಾಲಾಜಿ ಕಾಸಲೆ, ಆಕಾಶ್, ಮಾರುತಿ, ರಾಹುಲ್, ವಿಜಯ ಹಾಗೂ ಕರವೇ ಕಾರ್ಯಕರ್ತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X