ನೀವು ದಲಿತರನ್ನು ಅಪ್ಪಿಕೊಳ್ಳುತ್ತೀರಾ?: ಆರ್‌ಎಸ್‌ಎಸ್‌-ಬಿಜೆಪಿ ಪ್ರಶ್ನಿಸಿದ ರಾಜಸ್ಥಾನ ಸಿಎಂ

Date:

Advertisements

ಅಸ್ಪೃಶ್ಯತೆಯನ್ನು ಉತ್ತೇಜಿಸುವ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನವರು ದೇಶದ ದಲಿತರನ್ನು ಅಪ್ಪಿಕೊಳ್ಳುತ್ತಾರೆಯೇ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪ್ರಶ್ನಿಸಿದ್ದಾರೆ.

ಗೆಹ್ಲೋಟ್ ಅವರು ಬರಾನ್ ಜಿಲ್ಲೆಯಲ್ಲಿ ಹಿಂದೂ ಸಮುದಾಯದ 2,111 ಹಾಗೂ  ಮುಸ್ಲಿಂ ಸಮುದಾಯದ 111 ಜೋಡಿಗಳು ಸೇರಿದಂತೆ 2,222 ಜೋಡಿಗಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಬಿಜೆಪಿ ಹಾಗೂ ಆರೆಸ್ಸೆಸ್‌ನವರು ಭಿನ್ನಾಭಿಪ್ರಾಯ ಮತ್ತು ತಾರತಮ್ಯವನ್ನು ಸೃಷ್ಟಿಸುತ್ತಾರೆ ಹಾಗೂ ಹರಡುತ್ತಾರೆ. ದೇಶದ ಜನರಲ್ಲಿ ಅಸ್ಪೃಶ್ಯತೆಯನ್ನು ಉತ್ತೇಜಿಸುತ್ತಾರೆ ಎಂದು ಆರೋಪಿಸಿದರು.

“ಅವರು (ಬಿಜೆಪಿ-ಆರ್‌ಎಸ್‌ಎಸ್) ಹಿಂದೂ ಧರ್ಮದ ಬಗ್ಗೆ ಮಾತನಾಡುತ್ತಾರೆ ಮತ್ತು ಅವರೆಲ್ಲರೂ ಹಿಂದೂಗಳು ಆದರೆ ಅವರು ಧರ್ಮಕ್ಕಿಂತ ಮೇಲೇರಬೇಕು ಮತ್ತು ಕೆಲವು ನೈಜ ಕೆಲಸ ಮಾಡಬೇಕು” ಎಂದು ಗೆಹ್ಲೋಟ್ ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಕವಿ ಮೊಹಮ್ಮದ್ ಇಕ್ಬಾಲ್ ಪಠ್ಯಕ್ರಮ ಸ್ಥಗಿತಕ್ಕೆ ದೆಹಲಿ ವಿವಿ ನಿರ್ಣಯ

“ಅಸ್ಪೃಶ್ಯತೆ ಹಳ್ಳಿಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಈಗಲೂ ತಾಂಡವವಾಡುತ್ತಿದೆ. ಕೆಳವರ್ಗದವರ ವಿರುದ್ಧ ತಾರತಮ್ಯವಿದೆ. ಇದು ಎಲ್ಲರಿಗೂ ತಿಳಿದಿರುವ ವಿಷಯ. ಆರೆಸ್ಸೆಸ್  ಮುಖ್ಯಸ್ಥ ಮೋಹನ್ ಭಾಗವತ್ ಹಾಗೂ  ಪ್ರಧಾನಿ ನರೇಂದ್ರ ಮೋದಿ ಅವರು ದಲಿತರ ಕಲ್ಯಾಣಕ್ಕಾಗಿ ತಮ್ಮ ಅಲ್ಪಾವಧಿ ಹಾಗೂ  ದೀರ್ಘಕಾಲೀನ ಯೋಜನೆಗಳನ್ನು ಬಹಿರಂಗಪಡಿಸಬೇಕು” ಎಂದು ಗೆಹ್ಲೋಟ್ ಒತ್ತಾಯಿಸಿದರು.

“ದಲಿತರನ್ನು ಯಾರು ನೋಡಿಕೊಳ್ಳುತ್ತಿದ್ದಾರೆ? ನೀವು (ಬಿಜೆಪಿ-ಆರೆಸ್ಸೆಸ್) ಅವರಿಗಾಗಿ ಏನು ಮಾಡುತ್ತಿದ್ದೀರಿ, ನೀವು ದಲಿತರನ್ನು ಅಪ್ಪಿಕೊಳ್ಳುತ್ತೀರಾ? ಈ ಪ್ರಶ್ನೆಗಳಿಗೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಉತ್ತರಿಸಬೇಕು” ಎಂದು ಅಶೋಕ್ ಗೆಹ್ಲೋಟ್ ಹೇಳಿದರು.

ಕಳೆದ ತಿಂಗಳು ರಾಜ್ಯದ ಬಾರ್ಮರ್ ಜಿಲ್ಲೆಯಲ್ಲಿ ದಲಿತ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಬೆಂಕಿ ಹಚ್ಚಿದ ನಂತರ ವಿಪಕ್ಷಗಳಿಂದ ಸರ್ಕಾರಕ್ಕೆ ಟೀಕೆ ವ್ಯಕ್ತವಾಗಿತ್ತು. ನಂತರ ಕೃತ್ಯವೆಸಗಿದ ಶಕೂರ್ ಎಂಬಾತನನ್ನು ಬಂಧಿಸಲಾಗಿತ್ತು.  ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ಆರೋಪಕ್ಕೆ ಅವರು ತಿರುಗೇಟು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X