ವಿವಾಹೇತರ ಸಂಬಂಧಕ್ಕೆ ಒಪ್ಪದ ಮಹಿಳೆಯ ಶಿರಚ್ಛೇದ; ಸೋದರ ಮಾವನೇ ಎಸಗಿದ ಹತ್ಯೆ

Date:

Advertisements

ವಿವಾಹೇತರ ಸಂಬಂಧಕ್ಕೆ ಒಪ್ಪದ ಮಹಿಳೆಯನ್ನು ಆಕೆಯ ಸೋದರ ಮಾವನೇ ಹತ್ಯೆಗೈದು, ಆಕೆಯ ಶಿರಚ್ಛೇದ ಮಾಡಿ, ದೇಹವನ್ನು ಮೂರು ತುಂಡುಗಳಾಗಿ ಕತ್ತರಿಸಿ ಕಸದ ಬುಟ್ಟಿಯಲ್ಲಿ ಎಸೆದಿರುವ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದಿದೆ.

ಪ್ರಕರಣದ ಸಂಬಂಧ ಮಹಿಳೆಯ ಸೋದರ ಮಾವ ಅತಿಯುರ್ ರೆಹಮಾನ್ ಲಸ್ಕರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವಿಚರಣೆ ವೇಳೆ, ತಾನೇ ಕೃತ್ಯ ಎಸಗಿರುವುದಾಗಿ ಲಸ್ಕರ್ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

30 ವರ್ಷದ ಮಹಿಳೆಗೆ ವಿವಾಹವಾಗಿತ್ತು. ಎರಡು ವರ್ಷಗಳ ಹಿಂದೆ ಆಕೆ ತನ್ನ ಪತಿಯಿಂದ ದೂರವಾಗಿದ್ದರು. ಪ್ರತ್ಯೇಕವಾಗಿ ವಾಸಿಸುತ್ತಿದ್ದ ಮಹಿಳೆ, ಮನೆ ಸಹಾಯಕಿಯಾಗಿ ಕೆಲಸ ಮಾಡುತ್ತಾ ಬದುಕು ಸಾಗಿಸುತ್ತಿದ್ದರು. ಆಕೆಯನ್ನು ವಿವಾಹೇತರ ಸಂಬಂಧಕ್ಕಾಗಿ ಲಸ್ಕರ್ ಒತ್ತಾಯಿಸುತ್ತಿದ್ದ. ಆತನ ವರ್ತನೆಯಿಂದ ಬೇಸತ್ತಿದ್ದ ಮಹಿಳೆ, ಆತನಿಂದ ದೂರ ಉಳಿದಿದ್ದರು ಎಂದು ಪೊಲೀಸರು ಹೇಳಿದ್ದಾರೆ.

Advertisements

“ತನ್ನನ್ನು ಪದೇ-ಪದೇ ತಿರಸ್ಕರಿಸಿದ್ದಕ್ಕಾಗಿ ಕುಪಿತಗೊಂಡಿದ್ದ ಲಸ್ಕರ್ ಆಕೆಯನ್ನು ಕತ್ತು ಹಿಸುಕಿ ಕೊಂದಿದ್ದಾನೆ. ಬಳಿಕ, ಶಿರಚ್ಛೇದ ಮಾಡಿದ್ದಾನೆ. ಮೃತದೇಹವನ್ನು ಮೂರು ತುಂಡುಗಳಾಗಿ ಕತ್ತರಿಸಿ, ಬ್ಯಾಗ್‌ನಲ್ಲಿ ತುಂಬಿ ಕಸದ ತೊಟ್ಟಿಗೆ ಎಸೆದಿದ್ದಾನೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

“ಮಹಿಳೆಯ ತಲೆ ಪತ್ತೆಯಾಗಿದ್ದರಿಂದ ಕೊಲೆ ಪ್ರಕರಣ ಬೆಳಕಿಗೆ ಬಂದಿತು. ಬಳಿಕ, ಸ್ನಿಫರ್ ಡಾಗ್‌ಗಳನ್ನು ಬಳಸಿ, ಮೃಹದೇಹ ಇತರ ಭಾಗಗಳನ್ನು ಪತ್ತೆ ಮಾಡಲಾಗಿದೆ. ಪ್ರದೇಶದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿ, ಆರೋಪಿಯನ್ನು ಪತ್ತೆ ಮಾಡಿದ್ದೇವೆ. ಬಂಧಿಸಿದ್ದೇವೆ” ಎಂದು ಪೊಲೀಸ್ ಉಪ ಕಮಿಷನರ್ ಬಿದಿಶಾ ಕಲಿತಾ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X