ಗೃಹಲಕ್ಷ್ಮಿ | ಯೋಜನೆ ಹಣ ಕೂಡಿಟ್ಟು ಕೊಳವೆಬಾವಿ ಕೊರೆಸಿದ ಅತ್ತೆ-ಸೊಸೆ!

Date:

Advertisements

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕವಾಗಿ ಬಂದ ಹಣವನ್ನು ಕೂಡಿಟ್ಟು, ಅತ್ತೆ-ಸೊಸೆ ಇಬ್ಬರು ತಮ್ಮ ಜಮೀನಿನಲ್ಲಿ ಕೊಳವೆಬಾವಿ ಕೊರೆಸಿದ್ದಾರೆ. ಅತ್ತೆ-ಸೊಸೆಯ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.

ಗದಗ ಜಿಲ್ಲೆಯ ಗಜೇಂದ್ರಗಡದ ಮಾಲಾದಾರದ ನಿವಾಸಿಗಳಾದ ಮಾಬುಬೀ ಮತ್ತು ಅವರ ಸೊಸೆ ರೋಷನ್ ಬೇಗಂ ಅವರು ತಮಗೆ ಪ್ರತಿ ತಿಂಗಳು ಬರುತ್ತಿದ್ದ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟಿದ್ದಾರೆ. ಇದೀಗ, ಆ ಹಣದಲ್ಲಿ ತಮ್ಮ ಕೈಷಿ ಭೂಮಿಯಲ್ಲಿ ಕೊಳವೆಬಾವಿ ಕೊರೆಸಿದ್ದಾರೆ. ಬಾವಿಯಲ್ಲಿ ಉತ್ತಮ ನೀರು ಬಂದಿದೆ.

ಅತ್ತೆ-ಸೊಸೆಯ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ನಮ್ಮ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ-ಸೊಸೆಯ ಮಾತು ಕೇಳಿ ಖುಷಿಯಾಯಿತು. ನಾಡಿನ ಬಡ ಕುಟುಂಬಗಳಿಗೆ ಆರ್ಥಿಕ ಶಕ್ತಿ ತುಂಬಿ, ಅವರನ್ನು ಸ್ವಾವಲಂಬಿಗಳನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯ ಉದ್ದೇಶ ಯಶಸ್ವಿಯಾಗಿ ಈಡೇರುತ್ತಿದೆ. ಯೋಜನೆಯನ್ನು ಜಾರಿಗೆ ತಂದದ್ದು ನನ್ನಲ್ಲಿ ಸಂತೃಪ್ತಭಾವ ಮೂಡಿಸಿದೆ” ಹೇಳಿದ್ದಾರೆ.

Advertisements

“ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಅತ್ತೆ-ಸೊಸೆಯ ನಡುವೆ ಜಗಳ ಆರಂಭವಾಗುತ್ತದೆ, ಸಂಸಾರಗಳು ಒಡೆಯುತ್ತವೆ ಎಂದು ಟೀಕಿಸಿದ ಜನರಿಗೆ ಬಾರಿಸಿದ ತಪರಾಕಿ ಇದು. ಬೆಳಕಿಗೆ ಬಾರದ ಇಂತಹ ಇನ್ನೂ ಸಾವಿರಾರು ಯಶೋಗಾಥೆಗಳಿವೆ, ಗೃಹಲಕ್ಷ್ಮಿ ನಾಡಿನ ತಾಯಂದಿರ ಬಾಳಿಗೆ ಅಕ್ಷರಶಃ ಭಾಗ್ಯಲಕ್ಷ್ಮಿಯಾಗಿದೆ ಎನ್ನುವುದರಲ್ಲಿ ಯಾವ ಸಂಶಯವೂ ಇಲ್ಲ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X