ಹಾಸನ | ಅಂಕಗಳಿಸುವ ಯಂತ್ರಗಳಂತೆ ಶಿಕ್ಷಣ ಕಲಿತರೆ ಸಾಲದು: ಶಿಕ್ಷಣಾಧಿಕಾರಿ ಕಾಂತರಾಜು

Date:

Advertisements

ಮಕ್ಕಳು ಕೇವಲ ಅಂಕಗಳಿಸುವ ಯಂತ್ರಗಳಂತೆ ಶಿಕ್ಷಣ ಕಲಿತರೆ ಸಾಲದು, ಸಮಗ್ರವಾಗಿ ಶೈಕ್ಷಣಿಕ, ಸಾಮಾಜಿಕ ಸೇರಿದಂತೆ ಎಲ್ಲ ರಂಗಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡು ಒಂದು ಉತ್ತಮ ಶಿಕ್ಷಣ ಕಲಿಯಬೇಕು ಎಂದು ಹಾಸನ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಕಾಂತರಾಜು ತಿಳಿಸಿದರು.

ಹಾಸನ ನಗರದ 80‌ ಫೀಟ್ ರಸ್ತೆ ಬಳಿ ಇರುವ ತಾಜ್ ಕನ್ವೆನ್ಷನ್ ಹಾಲ್‌ನಲ್ಲಿ ಬೆಂಗಳೂರಿನ ಕರ್ನಾಟಕ ಉರ್ದು ಅಕಾಡೆಮಿ, ಹಾಸನ ಜಿಲ್ಲಾ ಮಟ್ಟದ ಸರ್ಕಾರಿ ಹಾಗೂ ಸರ್ಕಾರೇತರ ಉರ್ದು ಶಾಲೆಗಳ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಅಖಿಲ ಭಾರತ ಮಟ್ಟದ ಕವಿಗೋಷ್ಠಿ ಮುಶಾಯಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣದ ಜತೆಗೆ ಸಂಸ್ಕಾರವನ್ನೂ ಕೂಡ ಕಲಿಯಬೇಕು. ಸಂಸ್ಕಾರದ ನಿಟ್ಟಿನಲ್ಲಿ ಮಕ್ಕಳು ಓದುವ ಅಭ್ಯಾಸ ಇಂದು ಕಡಿಮೆಯಾಗುತ್ತಿದೆ. ಪ್ರಾಪಂಚಿಕ ವಿಷಯಗಳ ಬಗ್ಗೆ ಅರಿವು ಹೊಂದಬೇಕು. ಸಮಾನತೆ, ಭ್ರಾತೃತ್ವದ ಜತೆಗೆ ಸಮಾಜದಲ್ಲಿ ಶಿಕ್ಷಣದಿಂದ ಉನ್ನತವಾದ ಹುದ್ದೆಗಳನ್ನು ಅಲಂಕರಿಸಿ ಸಮಾಜಕ್ಕೆ ಕೊಡುಗೆ ನೀಡಬೇಕು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಜನಪ್ರಿಯ ಆಸ್ಪತ್ರೆಯ ಮುಖ್ಯಸ್ಥ ಅಬ್ದುಲ್ ಬಶೀರ್ ಮಾತನಾಡಿ, “ಉರ್ದು ಕವಿಗೋಷ್ಠಿ ಕಾರ್ಯಕ್ರಮ ಆಯೋಜನೆಗೊಂಡಿರುವುದು ತುಂಬಾ ಸಂತೋಷದ ವಿಷಯ. ಹಾಗೆಯೇ ಮಕ್ಕಳು ಈ ಕಾರ್ಯಕ್ರಮದಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಬೇಕು ಮತ್ತು ಓದುವ ಅಭ್ಯಾಸವನ್ನು ಹೆಚ್ಚೆಚ್ಚು ಬೆಳೆಸಿಕೊಳ್ಳಬೇಕು” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ವಿಜಯನಗರ | ʼತಿಂಡಿಗೆ ಬಂದ ತುಂಡೇರಾಯʼ ನಾಟಕ ಪ್ರದರ್ಶನ

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಬೆಂಗಳೂರಿನ ಕರ್ನಾಟಕ ಉರ್ದು ಅಕಾಡೆಮಿ ಸಂಯೋಜಕ ಮತ್ತು ಸದಸ್ಯ ಡಾ. ಅಕ್ಟರ್ ಸೈಯಿದಾ ಕಾನಂ ಮಾತನಾಡಿ, “ಈ ರೀತಿಯ ಕಾರ್ಯಕ್ರಮಗಳನ್ನು ಜಿಲ್ಲಾಮಟ್ಟದಲ್ಲಿ ಆಯೋಜನೆ ಮಾಡಿರುವುದು ನಮಗೆ ತುಂಬಾ ಸಂತೋಷ ತಂದಿದೆ. ಇಂತಹ ಕಾರ್ಯಕ್ರಮಗಳಿಂದ ಮಕ್ಕಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಉಪಯುಕ್ತವಾಗಿದೆ. ಈ ನಿಟ್ಟಿನಲ್ಲಿ ಮಕ್ಕಳು ಕಾರ್ಯಕ್ರಮದ ಸಂಪೂರ್ಣ ಉಪಯೋಗ ಪಡೆದುಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು” ಎಂದು ಕೋರಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X