ಮಂಡ್ಯ | ಕಸಾಪ ವತಿಯಿಂದ ಬೃಹತ್ ಬೈಕ್ ಜಾಥಾಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ

Date:

Advertisements

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಇಂದು ಕರ್ನಾಟಕ ಸರ್ಕಾರ, ಜಿಲ್ಲಾಡಳಿತ ಮಂಡ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರದ ಪ್ರಯುಕ್ತ ದ್ವಿಚಕ್ರ ವಾಹನಗಳ ಜಾಥಾಗೆ ಜಿಲ್ಲಾಧಿಕಾರಿಗಳು ಚಾಲನೆ ನೀಡಿದರು.

IMG 20241215 WA0008

ನಂತರ ಮಾತನಾಡಿದ ಅವರು ಡಿಸೆಂಬರ್ 20, 21, 22 ರಂದು ಮೂರು ದಿನಗಳ ಕಾಲ ನಮ್ಮ ಮಂಡ್ಯ ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ನಡೆಯಲಿದ್ದು, ಈ ನಿಟ್ಟಿನಲ್ಲಿ ಬೈಕ್ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲಾ ಕನ್ನಡಿಗ ಮನಸ್ಸುಗಳು ಒಂದಾಗಿ ಸೇರಿ ಜೊತೆಗೂಡಿ ಸಾಹಿತ್ಯದ ಹಬ್ಬವನ್ನು ಆಚರಿಸುವುದು ಇದರ ಉದ್ದೇಶವಾಗಿದೆ. ಎಲ್ಲಾ ಮಂಡ್ಯ ಜನತೆಯು ಸಹಕಾರದಿಂದ ಕೈಜೋಡಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಕಸಾಪ ಸಮ್ಮೇಳನ ಸಂಚಾಲಕಿ ಮೀರಾ ಶಿವಲಿಂಗಯ್ಯ ಮಾತನಾಡಿ, ಕರ್ನಾಟಕ ಸರ್ಕಾರ, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾಡಳಿತ ಸೇರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಹಮ್ಮಿಕೊಳ್ಳಲಾಗಿರುವ ವಿಷಯವು ಈಗಾಗಲೇ ಎಲ್ಲರಿಗೂ ತಿಳಿದಿದೆ. ಕನ್ನಡ ಪ್ರಜ್ಞೆ, ಕನ್ನಡದ ಒಲವು ಪ್ರತಿಯೊಬ್ಬರಲ್ಲಿಯೂ ಜಾಗೃತವಾಗಿ ಎಲ್ಲರೂ ಸಮ್ಮೇಳನದಲ್ಲಿ ಭಾಗವಹಿಸಬೇಕು. ಮಂಡ್ಯ ಜನತೆಗೆ ಜಾಗೃತಿ ಮೂಡಿಸಲು ಮೋಟಾರ್ ಬೈಕ್ ಜಾಥಾವನ್ನು ಆಯೋಜಿಸಲಾಗಿದೆ. ಎಲ್ಲರೂ ಸೇರಿ ಜಾಥಾವನ್ನು ಯಶಸ್ವಿಗೊಳಿಸಿ ಎಂದರು.

Advertisements

ಇದನ್ನು ಓದಿದ್ದೀರಾ? ಗೃಹಲಕ್ಷ್ಮಿ | ಯೋಜನೆ ಹಣ ಕೂಡಿಟ್ಟು ಕೊಳವೆಬಾವಿ ಕೊರೆಸಿದ ಅತ್ತೆ-ಸೊಸೆ!

ಕಸಾಪ ನಗರ ಘಟಕದ ಅಧ್ಯಕ್ಷೆ ಸುಜಾತ ಕೃಷ್ಣ ಮಾತನಾಡಿ, ಸಮ್ಮೇಳನದ ಅಂಗವಾಗಿ ಇಂದು ಬೈಕ್ ಜಾಥಾವನ್ನು ಹಮ್ಮಿಕೊಳ್ಳುವ ಮೂಲಕ ಪ್ರಚಾರ ಮಾಡುತ್ತಿದ್ದೇವೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಾಕಷ್ಟು ಮಹಿಳೆಯರು ಹಾಗೂ ಪುರುಷರು ಒಟ್ಟಿಗೆ ಪಾಲ್ಗೊಂಡು ನಗರದ ಎಲ್ಲಾ ಭಾಗಗಳಲ್ಲಿ ಸಮ್ಮೇಳನದ ಪ್ರಚಾರ ಮಾಡುತ್ತಿದ್ದಾರೆ. ಮಂಡ್ಯ ಜನರು ಸಮ್ಮೇಳನಕ್ಕೆ ಬರುವ ಪ್ರತಿಯೊಬ್ಬರಿಗೂ ಆಥಿತ್ಯ ನೀಡಿ ಜಿಲ್ಲೆಯ ಹೆಸರನ್ನು ಎಲ್ಲೆಡೆ ಪಸರಿಸುವಂತಾಗಬೇಕು ಎಂದರು.

ಜಾಥಾವು ಜಿಲ್ಲಾಧಿಕಾರಿಗಳ ಕಚೇರಿಯಿಂದ ಹೊರಟು ಬೆಂಗಳೂರು – ಮೈಸೂರು ಹೆದ್ದಾರಿ ಮಾರ್ಗವಾಗಿ ಹೊಳಲು ವೃತ್ತದ ಮೂಲಕ ಸಂಚರಿಸಿ ರೈತ ಸಭಾಂಗಣ ತಲುಪಿ ಸಮಾರೋಪ ಸಮಾರಂಭ ದೊಂದಿಗೆ ಅಂತ್ಯಗೊಂಡಿತು.

ಇದನ್ನು ನೋಡಿದ್ದೀರಾ? ಸಮ್ಮೇಳನದಲ್ಲಿ ಬಾಡೂಟ: 5 ರೂಪಾಯಿ ಡಾಕ್ಟರ್ ಹೇಳೋದೇನು?

ಇದೇ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಕಾರ್ಯದರ್ಶಿ ಹುಸ್ಕೂರು ಕೃಷ್ಣೆಗೌಡ, ಕೋಶಾಧ್ಯಕ್ಷ ಅಪ್ಪಾಜಪ್ಪ, ತಾಲ್ಲೂಕು ಅಧ್ಯಕ್ಷ ಚಂದ್ರಲಿಂಗು, ಪದಾಧಿಕಾರಿಗಳಾದ ರತ್ನಾಶ್ರೀ, ವಿಜಯಲಕ್ಷ್ಮಿ, ಲತಾ, ಪ್ರೊ ಎಂ ಎ ಪ್ರಮೀಳಾ, ಪುಷ್ಪ ಲತಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X