ಅನ್ವರ್ ಮಾಣಿಪ್ಪಾಡಿ ವರದಿ ಸ್ವೀಕರಿಸಿ, ಸಿಎಂ ಅವರೇ ಸಿಬಿಐ ತನಿಖೆಗೆ ಕೊಡಲಿ: ವಿಜಯೇಂದ್ರ

Date:

Advertisements

ಮೈಸೂರಿನ ಮುಡಾ ಹಗರಣ, ವಕ್ಫ್ ಅವ್ಯವಹಾರ ಸಂಬಂಧಿಸಿದ ಅನ್ವರ್ ಮಾಣಿಪ್ಪಾಡಿ ಅವರ ವರದಿ ಹಾಗೂ ನನ್ನ ಮೇಲಿನ 150 ಕೋಟಿಯ ಆರೋಪ- ಇವೆಲ್ಲವುಗಳ ಸಮಗ್ರ ಸಿಬಿಐ ತನಿಖೆಗೆ ಸಿಎಂ ಸಿದ್ದರಾಮಯ್ಯ ಅವರೇ ಆದೇಶ ಮಾಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ ವೈ ವಿಜಯೇಂದ್ರ ಒತ್ತಾಯಿಸಿದರು.

ಬೆಳಗಾವಿ ಸುವರ್ಣ ಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು (ಡಿ.16) ಮಾತನಾಡಿದ ಅವರು, “ನನ್ನ ಮೇಲಿನ 150 ಕೋಟಿಯ ಆರೋಪವನ್ನೂ ಸಿಬಿಐ ತನಿಖೆಗೆ ಕೊಡಿ, ಅನ್ವರ್ ಮಾಣಿಪ್ಪಾಡಿಯವರ ವರದಿ ಸ್ವೀಕರಿಸಿ ಅದರ ಬಗ್ಗೆಯೂ ಸಿಬಿಐ ತನಿಖೆ ಮಾಡಿಸಿ. ವಕ್ಫ್ ಜಾಗದ ವಿಚಾರದಲ್ಲಿ ಲಕ್ಷ ಲಕ್ಷ ಕೋಟಿಯ ಅವ್ಯವಹಾರ ಆಗಿದೆ ಎಂಬ ವರದಿ ಇದ್ದು ಅದರ ಸಮಗ್ರ ತನಿಖೆಯೂ ಆಗಲಿ” ಎಂದು ಆಗ್ರಹಿಸಿದರು.

“ಆಡಳಿತ ಪಕ್ಷದವರು ಕೆಲಸಕ್ಕೆ ಬಾರದ ಸಂಗತಿಗಳನ್ನು ಇವತ್ತು ಸದನದಲ್ಲಿ ಪ್ರಸ್ತಾಪ ಮಾಡುತ್ತಿದ್ದಾರೆ. ಬಾಣಂತಿಯರ ಸಾವು, ಹಸುಗೂಸುಗಳ ಮರಣ, ಉತ್ತರ ಕರ್ನಾಟಕದ ವಿಚಾರಗಳು ಸದನದಲ್ಲಿ ಚರ್ಚೆ ಆಗಬಾರದೆಂಬ ಉದ್ದೇಶ ಇದರ ಹಿಂದಿದೆ. ಯಡಿಯೂರಪ್ಪ ಅವರು ಕೋವಿಡ್ ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸಿದ್ದರು. ಆದರೆ, ಅವರನ್ನೇ ಗುರಿಯಾಗಿ ಇಟ್ಟುಕೊಂಡು ರಾಜಕೀಯವಾಗಿ ಮುಗಿಸುವ ದುರುದ್ದೇಶದಿಂದ ಅರೆಬರೆ ಬೆಂದ ಜಸ್ಟಿಸ್ ಕುನ್ಹ ಮಧ್ಯಂತರ ವರದಿಯನ್ನು ಇಟ್ಟುಕೊಂಡು ಎಫ್‍ಐಆರ್ ದಾಖಲಿಸಿದ್ದಾರೆ. ಇದರ ಜೊತೆಗೆ ಮುನಿರತ್ನ ವಿಚಾರವನ್ನೂ ಚರ್ಚಿಸಲು ಮುಂದಾಗಿದ್ದಾರೆ” ಎಂದು ಟೀಕಿಸಿದರು.

Advertisements

“ಸಿದ್ದರಾಮಯ್ಯನವರೇ ಈ ರೀತಿ ಗೊಡ್ಡು ಬೆದರಿಕೆಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ. ಇದ್ಯಾವುದೂ ಹೊಸದಲ್ಲ. ಹಿಂದೆ ಯಡಿಯೂರಪ್ಪ ಅವರ ವಿರುದ್ಧ ಸಿಎಜಿ ವರದಿ ಸಂಬಂಧ 25 ಪ್ರಕರಣಗಳನ್ನು ಸಿದ್ದರಾಮಯ್ಯರ ಸರಕಾರವು ದಾಖಲಿಸಿ ಯಡಿಯೂರಪ್ಪ, ಬಿಜೆಪಿಯನ್ನು ಮುಗಿಸಲು ಪಿತೂರಿ ಮಾಡಲಾಗಿತ್ತು. ಯಡಿಯೂರಪ್ಪನವರು ಬಿಜೆಪಿ ರಾಜ್ಯಾಧ್ಯಕ್ಷರಾದರೆ ತಾವು ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಾಗದೆಂದು ಯೋಚಿಸಿ ಈ ಕೆಲಸ ಮಾಡಿದ್ದರು” ಎಂದು ಆರೋಪಿಸಿದರು.

“ಸಿದ್ದರಾಮಯ್ಯನವರು ಮುಡಾ, ವಾಲ್ಮೀಕಿ ನಿಗಮದ ಹಗರಣಗಳು, ಅಬಕಾರಿ ಇಲಾಖೆ ಹಗರಣದಲ್ಲಿ ಸಿಲುಕಿ ಹಾಕಿಕೊಂಡಿದ್ದು, ವಿಲವಿಲ ಒದ್ದಾಡುತ್ತಿದ್ದಾರೆ. ಪ್ರಿಯಾಂಕ್ ಖರ್ಗೆಯವರು ನನ್ನ ಮೇಲೆ ಆರೋಪ ಮಾಡಿದ್ದು, ಇತ್ತೀಚೆಗೆ ಅವರ ಬಂಡವಾಳವೂ ಬಯಲಾಗಿದೆ. ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನೂರಾರು ಕೋಟಿÉ ಬೆಲೆಬಾಳುವ 5 ಎಕರೆ ನಿವೇಶನವನ್ನು ರಾಹುಲ್ ಖರ್ಗೆಯವರಿಗೆ ಅಕ್ರಮವಾಗಿ ಮಂಜೂರು ಮಾಡಿದ್ದರು. ಪ್ರಿಯಾಂಕ್ ಖರ್ಗೆಯವರೇ ನೀವು ಅದನ್ನು ಹಿಂತಿರುಗಿಸಿಲ್ಲವೇ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X