ಗದಗ | ಸಂವಿಧಾನ ಶಿಲ್ಪಿ ದಿನದರ್ಶಿಕೆ ಬಿಡುಗಡೆ

Date:

Advertisements

ಸಂವಿಧಾನ ಶಿಲ್ಪಿ ದಿನದರ್ಶಿಕೆ ವಿಶೇಷವೆಂದರೆ ಪ್ರತಿ ಆಯಾ ದಿನದ ದಿನಾಂಕದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ಮಾಹಿತಿ ಇದರಲ್ಲಿದೆ ಎಂದು ದಲಿತ ಕಲಾ ಮಂಡಳಿ ಮುಖಂಡ ಮುತ್ತು ಬಿಳಿಯಲಿ ಹೇಳಿದರು.

ಗದಗ ಪಟ್ಟಣದಲ್ಲಿ ದಲಿತ ಕಲಾ ಮಂಡಳಿಯ ಗೆಳೆಯರು ಸೇರಿ “ಸಂವಿಧಾನ ಶಿಲ್ಪಿ” ದಿನದರ್ಶಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

“ಲಡಾಯಿ ಪ್ರಕಾಶನ ಪ್ರಕಟಿಸಿರುವ 2025ರ ರಾಜ್ಯದಲ್ಲಿ ಲಡಾಯಿ ಪ್ರಕಾಶನ ವೈಚಾರಿಕ ಪುಸ್ತಕಗಳಿಗೆ ಹೆಸರು ವಾಸಿಯಾಗಿದೆ. ಇಂತಹ ಪ್ರಕಾಶನದಿಂದ ಪ್ರತಿವರ್ಷ ಸಂವಿಧಾನ ಶಿಲ್ಪಿ ದಿನದರ್ಶಿಯನ್ನು ಹೊರತಂದು ಸಮಾಜಕ್ಕೆ ವೈಚಾರಿಕತೆಯನ್ನು ಬಿತ್ತುತ್ತಿದ್ದಾರೆ” ಎಂದು ಹೇಳಿದರು.

Advertisements

“ಬೇರೆ ಕ್ಯಾಲೆಂಡರ್‌ಗಳು ಬರೀ ಸನಾತನವಾದದಿಂದ ತುಂಬಿರುತ್ತವೆ. ಪಂಚಾಂಗ, ಭವಿಷ್ಯ ಇನ್ನೂ ಮುಂತಾದ ಮೂಢನಂಬಿಕೆಗಳಿಂದ ಕೂಡಿದ್ದು, ಜನರನ್ನು ಮತ್ತಷ್ಟು ಮೌಢ್ಯರನ್ನಾಗಿ ಮಾಡುತ್ತಿವೆ” ಎಂದು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಕಳಪೆ ಕಾಮಗಾರಿ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕೆಆರ್‌ಎಸ್ ಆಗ್ರಹ

“ಪ್ರತಿಯೊಬ್ಬರ ಮನೆಯಲ್ಲೂ ಇಂತಹ ಸಂವಿಧಾನ ಶಿಲ್ಪಿ ದಿನದರ್ಶಿಯನ್ನು ಪ್ರತಿಯೊಬ್ಬರ ಮನೆಯಲ್ಲೂ ಹಾಕಿಕೊಳ್ಳಬೇಕು. ಲಡಾಯಿ ಪ್ರಕಾಶನದ ಬಸೂ(ಬಸವರಾಜ್‌ ಸೂಳಿಬಾವಿ) ಸರ್ ಅವರು ಈ ದಿನದರ್ಶಿಕೆ ಎಲ್ಲರ ಮನೆಗೂ ತಲುಪಬೇಕೆಂಬ ಕಾರಣಕ್ಕೆ ರಿಯಾಯಿತಿ ದರದಲ್ಲಿ ಕೊಡುತ್ತಿದ್ದಾರೆ. ಕೂಡಲೇ ಈ ದಿನದರ್ಶಿಕೆಯನ್ನು ತರಸಿಕೊಳ್ಳಿ” ಎಂದು ಮುತ್ತು ಬಿಳಿಯಲಿ ಮನವಿ ಮಾಡಿದರು.

ಈ ಸಮಯದಲ್ಲಿ ದಲಿತ ಕಲಾ ಮಂಡಳಿ ಮುಖಂಡರಾದ ಆನಂದ ಶಿಂಗಾಡಿ, ಶರೀಫ್ ಬಿಳಿಯಲಿ, ಪರಶು ಕಾಳೆ, ಅನಿಲ್ ಕಾಳೆ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X