ಐಪಿಎಲ್‌ 2023 | ಗುಜರಾತ್‌ vs ಚೆನ್ನೈ: ಉಭಯ ತಂಡಗಳ ಫೈನಲ್‌ವರೆಗಿನ ಪಯಣ

Date:

Advertisements

ಐಪಿಎಲ್‌ 16ನೇ ಆವೃತ್ತಿಯು ಫೈನಲ್‌ ಫೈಟ್‌ಗೆ ಸಜ್ಜಾಗಿದೆ. ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ಮತ್ತು ನಾಲ್ಕು ಬಾರಿಯ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳು ʻಐಪಿಎಲ್ 2023ʼ ಚಾಂಪಿಯನ್‌ ಪಟ್ಟಕ್ಕಾಗಿ ಭಾನುವಾರ ಅಹಮದಾಬಾದ್‌ನಲ್ಲಿ ಅಖಾಡಕ್ಕಿಳಿಯಲಿದೆ.

ಪ್ರಶಸ್ತಿಯನ್ನು ತನ್ನಲ್ಲೇ ಉಳಿಸಿಕೊಳ್ಳುವ ಹುಮ್ಮಸ್ಸಿನಲ್ಲಿರುವ ಟೈಟನ್ಸ್‌ ಒಂದು ಕಡೆಯಾದರೆ, ದಿಗ್ಗಜ ನಾಯಕ ಧೋನಿಗೆ ಚಾಂಪಿಯನ್‌ ಬೀಳ್ಕೊಡುಗೆ ನೀಡಲು ಸಿಎಸ್‌ಕೆ ಕಠಿಣ ತಾಲೀಮು ನಡೆಸಿದೆ. ಮಾರ್ಚ್‌ 31 ರಂದು 10 ತಂಡಗಳೊಂದಿಗೆ ಆರಂಭವಾಗಿದ್ದ ಟೂರ್ನಿಯಲ್ಲಿ ಇದೀಗ ಅಂತಿಮವಾಗಿ ಎರಡು ತಂಡಗಳು ಚಾಂಪಿಯನ್‌ ಪಟ್ಟದ ಹೋರಾಟಕ್ಕೆ  ಸಜ್ಜಾಗಿವೆ.

ಗುಜರಾತ್‌ ಟೈಟನ್ಸ್‌

Advertisements

ಪ್ರಸಕ್ತ ಆವೃತ್ತಿಯ ಟೂರ್ನಿಯ ಲೀಗ್‌ ಹಂತದ 14 ಪಂದ್ಯಗಳಲ್ಲಿ 10ರಲ್ಲಿ ಗೆಲುವು ಸಾಧಿಸಿ 20 ಅಂಕಗಳೊಂದಿಗೆ ಮೊದಲ ತಂಡವಾಗಿ ಗುಜರಾತ್‌ ಟೈಟನ್ಸ್‌ ಪ್ಲೇ ಆಫ್‌ ಪ್ರವೇಶಿಸಿತ್ತು. ಆದರೆ  ಚೆನ್ನೈನಲ್ಲಿ ನಡೆದ ಕ್ವಾಲಿಪೈಯರ್​-1 ಪಂದ್ಯದಲ್ಲಿ ಧೋನಿ ಬಳಗಕ್ಕೆ 15 ರನ್‌ಗಳ ಅಂತರದಲ್ಲಿ  ಶರಣಾಗಿತ್ತು.

ಅತಿಹೆಚ್ಚು ರನ್‌ ಗಳಿಸಿದ ಬ್ಯಾಟರ್‌ ಮತ್ತು ಅತಿಹೆಚ್ಚು ವಿಕೆಟ್‌ ಪಡೆದ ಬೌಲರ್‌ಗೆ ನೀಡಲ್ಪಡುವ ಆರೆಂಜ್‌ ಕ್ಯಾಪ್‌ ಮತ್ತು ಪರ್ಪಲ್‌ ಕ್ಯಾಪ್‌, ಟೈಟನ್ಸ್‌ ತಂಡದ ಆಟಗಾರರ ಬಳಿ ಇರುವುದು ವಿಶೇಷ.

4 ಪಂದ್ಯಗಳಲ್ಲಿ 3 ಶತಕ ಸೇರಿದಂತೆ ಒಟ್ಟಾರೆಯಾಗಿ 16ನೇ ಆವೃತ್ತಿಯಲ್ಲಿ 16 ಪಂದ್ಯಗಳಿಂದ 851 ರನ್​ ಒಟ್ಟುಗೂಡಿಸಿರುವ ಶುಭಮನ್‌ ಗಿಲ್‌ ಆರೆಂಜ್​ ಕ್ಯಾಪ್‌ ಹೊಂದಿದ್ದಾರೆ. ಫೈನಲ್‌ನಲ್ಲೂ ಗಿಲ್‌ ತಂಡದ ʻಟ್ರಂಪ್‌ ಕಾರ್ಡ್‌ʼ ಆಗಿದ್ದಾರೆ. ಬೌಲಿಂಗ್‌ನಲ್ಲಿ ಅನುಭವಿ ವೇಗಿ ಮುಹಮ್ಮದ್‌ ಶಮಿ 16 ಪಂದ್ಯಗಳಲ್ಲಿ 28 ವಿಕೆಟ್‌ ಪಡೆಯುವ ಮೂಲಕ ಅಗ್ರಸ್ಥಾನದಲ್ಲಿದ್ದರೆ, 27 ವಿಕೆಟ್‌ ಹೊಂದುವ ಮೂಲಕ ಅದೇ ತಂಡದ ರಶೀದ್‌ ಖಾನ್‌ ಎರಡನೇ ಸ್ಥಾನದಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ?: ನಾಲ್ಕು ವರ್ಷಗಳ ಹಿಂದೆ ಟೆನಿಸ್‌ ಬಾಲ್‌ ಕ್ರಿಕೆಟ್‌ ಆಡುತ್ತಿದ್ದ ಆಕಾಶ್‌ ಮಧ್ವಾಲ್‌ ಈಗ ಐಪಿಎಲ್‌ ಹೀರೋ!

ಚೆನ್ನೈ ಸೂಪರ್‌ ಕಿಂಗ್ಸ್‌

ಬಲಿಷ್ಠ ಬ್ಯಾಟಿಂಗ್‌ ಪಡೆ ಹೊಂದಿದ್ದರೂ ಸಹ ಅನುನುಭವಿ ಬೌಲಿಂಗ್‌ ವಿಭಾಗ ಹೊಂದಿರುವ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ, ಟೂರ್ನಿಯ ಇತಿಹಾಸದಲ್ಲೇ ದಾಖಲೆಯ 10ನೇ ಬಾರಿಗೆ ಫೈನಲ್‌ ಪ್ರವೇಶಿಸಿದೆ.

ಲೀಗ್‌ ಹಂತದಲ್ಲಿ 14 ಪಂದ್ಯಗಳ ಪೈಕಿ 8 ಗೆಲುವು 5 ಸೋಲು ಕಂಡಿದ್ದ ಚೆನ್ನೈ 17 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿತ್ತು. ಲಖನೌ ಸೂಪರ್‌ ಜೈಂಟ್ಸ್‌ ವಿರುದ್ಧದ ಪಂದ್ಯ ಮಳೆಯಿಂದಾಗಿ ರದ್ದಾದ ಕಾರಣ ಉಭಯ ತಂಡಗಳು ತಲಾ 1 ಅಂಕಗಳನ್ನು ಹಂಚಿಕೊಂಡಿದ್ದವು.

ಮಾರ್ಚ್‌ 31ರಂದು ಅಹಮದಾಬಾದ್‌ನಲ್ಲಿ ನಡೆದಿದ್ದ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಗುಜರಾತ್‌ ಟೈಟನ್ಸ್‌ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆತಿಥೇಯ ಟೈಟನ್ಸ್‌ 5 ವಿಕೆಟ್‌ಗಳ ಅಂತರದಲ್ಲಿ ಗೆಲುವು ಸಾಧಿಸಿತ್ತು. ಆದರೆ ಈ ಸೋಲಿಗೆ ಕ್ವಾಲಿಪೈಯರ್​-1 ಪಂದ್ಯದಲ್ಲಿ ಧೋನಿ ಬಳಗ  ತವರು ನೆಲದಲ್ಲೇ ಸೇಡು ತೀರಿಸಿಕೊಂಡಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X