ರಾಯಚೂರು | ಆಶ್ರಯ ಕಾಲೋನಿ ನಿವಾಸಿಗಳಿಗೆ ಮನೆ ಹಕ್ಕುಪತ್ರ ನೀಡುವಂತೆ ಒತ್ತಾಯ

Date:

Advertisements

ರಾಯಚೂರು ನಗರದ ಚಂದ್ರಬಂಡಾ ರಸ್ತೆಯಲ್ಲಿರುವ ಆಶ್ರಯ ಕಾಲೋನಿಯ ಸರ್ವೇ ನಂಬರ್ 572, 573 ಮತ್ತು 574ರಲ್ಲಿ ವಾಸವಾಗಿರುವ ನಿವಾಸಿಗಳಿಗೆ ಮನೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಆಶ್ರಯ ಕಾಲೊನಿ ನಿವಾಸಿಗಳ ಸಂಘದಿಂದ ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

“199-92ನೇ ಸಾಲಿನಲ್ಲಿ ಆಶ್ರಯ ಕಾಲೋನಿ ಯೋಜನೆ ವತಿಯಿಂದ ಮನೆಗಳನ್ನು ನಿರ್ಮಿಸಿದ್ದು, ಯಾವುದೇ ಫಲಾನುಭವಿಗಳು ವಾಸವಿರಲಿಲ್ಲ. ಮನೆಗಳನ್ನು ದುರಸ್ತಿ ಮಾಡಿಕೊಂಡು ಜೀವನ ನಡೆಸುತ್ತಿದ್ದೇವೆ. ನೀರು ವಿದ್ಯುತ್, ರಸ್ತೆ, ಒಳಚರಂಡಿ, ಯಾವುದೇ ಮೂಲಸೌಲಭ್ಯವಿಲ್ಲ. ಈ ಹಿನ್ನೆಲೆಯಲ್ಲಿ ಮೂಲಸೌಲಭ್ಯ ಹಾಗೂ ಹಕ್ಕುಪತ್ರಕ್ಕಾಗಿ ಮನವಿ ಮಾಡಿದರೂ ಈವರೆಗೆ ಹಕ್ಕುಪತ್ರ ನೀಡಿಲ್ಲ” ಎಂದು ನಿವಾಸಿಗಳು ದೂರಿದರು.

“ಮನೆಯ ವಿದ್ಯುತ್ ರಶೀದಿ, ಆಧಾರ್ ಕಾರ್ಡ್, ಚುನಾವಣಾ ಐಡಿಕಾರ್ಡ್, ಬ್ಯಾಂಕ್, ರೇಷನ್ ಕಾ‌ರ್ಡ್‌ನಲ್ಲಿಯೂ ಮನೆಗಳ ನಂಬರ್, ವಿಳಾಸ ಸೇರ್ಪಡೆಯಾಗಿವೆ. ಚುನಾವಣೆಯಲ್ಲಿ ಮತ ಚಲಾಯಿಸಿಕೊಂಡು ಬೇಡಿಕೆ ಈಡೇರಿಸುತ್ತಿಲ್ಲ. ಹಕ್ಕುಪತ್ರ ನೀಡಬೇಕೆಂದು 2014-15ರಲ್ಲಿ ಸುತ್ತೋಲೆ ಹೊರಡಿಸಿದೆ, 2015-16ರಲ್ಲಿ ಶಾಸಕರು ಸಮಿತಿ ಮಾಡಿ ಸಭೆ ನಡೆಸಿದ್ದರು. ಆದರೆ ಇತ್ತೀಚೆಗೆ ಕೆಲವು ಗೂಂಡಾಗಳು ಹಕ್ಕುಪತ್ರ ತಂದು ಮನೆ ಖಾಲಿಮಾಡುವಂತೆ ದೌರ್ಜನ್ಯ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ಬೀದಿನಾಯಿಗಳ ದಾಳಿಗೆ ಯುವತಿ ಬಲಿ; ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡುವಂತೆ ಪ್ರತಿಭಟನೆ

“600 ಮನೆಗಳಲ್ಲಿ ವಾಸಿಸುತ್ತಿರುವ 600 ಅರ್ಹ ಫಲಾನುಭವಿಗಳಿಗೆ ಕೂಡಲೇ ಹಕ್ಕುಪತ್ರ ನೀಡಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನಿವಾಸಿಗಳಾದ ಗೋವಿಂದ ನಾಯಕ, ಆಶಪ್ಪ, ನಾಗೇಂದ್ರ, ಮೌನೇಶ, ಕೆ ಬಸವರಾಜ, ಕೆ ಮಲ್ಲೇಶ, ಅನ್ವರ್ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X