ರಾಯಚೂರು | ತೆಲಂಗಾಣಕ್ಕೆ ಭತ್ತ ಸಾಗಾಟ ನಿರ್ಬಂಧ; ರಾಜ್ಯ ರೈತ ಸಂಘ ಖಂಡನೆ

Date:

Advertisements

ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಾಟ ನಿರ್ಬಂಧಿಸಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ರಾಯಚೂರು ಜಿಲ್ಲಾ ಘಟಕದ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ನಿತಿಶ್ ಕೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಎಂ ಅವರಿಗೆ ಮನವಿ ಸಲ್ಲಿಸಿದರು.

ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಿಂದ ಭತ್ತದ ವ್ಯಾಪಾರಿಗಳು ತೆಲಂಗಾಣ ರಾಜ್ಯಕ್ಕೆ ಹೋಗುವಾಗ ಶಕ್ತಿನಗರ ಚೆಕ್‌ಪೋಸ್ಟ್ ನಲ್ಲಿ ಹಾಗೂ ಯಾದಗಿರಿ ಜಿಲ್ಲೆಯ ಜಲಾಲ್‌ಪೂರ ಚೆಕ್ ಪೋಸ್ಟ್ ನಲ್ಲಿ ಭತ್ತ ಲಾರಿಗಳನ್ನು ತಡೆದು ನಿಲ್ಲಿಸುತ್ತಿದ್ದಾರೆ. ಈಗಾಗಲೇ ಎರಡು ದಿನಗಳ ಹಿಂದೆ ಸುಮಾರು 5ರಿಂದ 6 ಲಾರಿಗಳನ್ನು ನಿಲ್ಲಿಸಿ ಕೃಷ್ಣ ಪೊಲೀಸ್ ಠಾಣೆಯಲ್ಲಿ ನಿಲ್ಲಿಸಿದ ಹಿನ್ನೆಲೆಯಲ್ಲಿ ರೈತರಿಗೆ ಭತ್ತದ ಸಾಗಾಣಿಕೆಗೆ ಸಮಸ್ಯೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

IMG 20241216 WA0009

ಪ್ರತಿದಿನ ತೆಲಂಗಾಣ ರಾಜ್ಯದಿಂದ ರಾಯಚೂರು ಮಾರುಕಟ್ಟೆಗೆ 30ರಿಂದ 40 ಸಾವಿರ ಭತ್ತವೂ ಯಾವುದೇ ನಿರ್ಬಂಧವಿಲ್ಲ ಆವಕವಾಗುತ್ತಿವೆ. ಇದರಿಂದ ಸ್ಥಳೀಯ ಮಾರುಕಟ್ಟೆಯ ಭತ್ತದ ದರ ಕಡಿಮೆಯಾಗಿ ರೈತರಿಗೆ ನಷ್ಟವಾಗುತ್ತಿದೆ ಎಂದು ಸಮಸ್ಯೆ ವಿವರಿಸಿದರು.ಕಾರಣ ತೆಲಂಗಾಣ ರಾಜ್ಯಕ್ಕೆ ಭತ್ತ ಸಾಗಿಸಲು ಹಾಕಿರುವ ನಿರ್ಬಂಧನೆಯನ್ನು ತೆರವುಗೊಳಿಸಬೇಕು, ಈ ಬಗ್ಗೆ ವಿಳಂಬ ನೀತಿ ಅನುಸರಿಸಿದರೆ, ಕೃಷ್ಣ ಸೇತುವೆ ಮೇಲೆ ರಸ್ತೆ ತಡೆ ಚಳುವಳಿ ನಡೆಸಲಾಗುವುದು ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಮುಂದುವರೆದ ಬಾಣಂತಿಯರ ಸಾವು; ಕಲಬುರಗಿಯಲ್ಲಿ ಮತ್ತೊಬ್ಬ ಬಾಣಂತಿ ಬಲಿ

ಸಂಘದ ರಾಜ್ಯ ಗೌರಾಧ್ಯಕ್ಷ ಚಾಮರಸ ಮಾಲಿಪಾಟೀಲ, ಜಿಲ್ಲಾ ಘಟಕದ ಅಧ್ಯಕ್ಷ ಪ್ರಭಾಕರ ಪಾಟೀಲ, ಕಾರ್ಯಾಧ್ಯಕ್ಷ ಬಸವರಾಜ ಪಾಟೀಲ, ಪದಾಧಿಕಾರಿಗಳಾದ ಮಲ್ಲಣ್ಣ ಗೌಡೂರು, ಮಲ್ಲಿಕಾರ್ಜುನರಾವ್, ವ್ಯಾಪಾರಿ ವೆಂಕಟೇಶ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X