ಒಂದು ದೇಶ- ಒಂದು ಚುನಾವಣೆ | ಲೋಕಸಭೆಗೆ ನಿಲುವಳಿ ಸೂಚನೆ ನೀಡಿದ ಕಾಂಗ್ರೆಸ್ ಸಂಸದ

Date:

Advertisements

ವಿವಾದಿತ ಒಂದು ದೇಶ- ಒಂದು ಚುನಾವಣೆ ಮಸೂದೆಯನ್ನು ಲೋಕಸಭೆಯಲ್ಲಿ ಇಂದು ಮಂಡಿಸಲು ಕೇಂದ್ರ ಸರ್ಕಾರವು ಸಜ್ಜಾಗಿದೆ. ಇದಕ್ಕೂ ಮುನ್ನ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಅವರು ಒಂದು ದೇಶ- ಒಂದು ಚುನಾವಣೆ ಮಸೂದೆ ವಿರುದ್ಧವಾಗಿ ಲೋಕಸಭೆಯಲ್ಲಿ ನಿಲುವಳಿ ಸೂಚನೆ ನೀಡಿದ್ದಾರೆ.

“ಈ ಮಸೂದೆಯು ರಾಜ್ಯ ಸ್ವಾಯತ್ತತೆಯನ್ನು ಕಳೆದುಕೊಳ್ಳುವ ಅಪಾಯವನ್ನುಂಟು ಮಾಡುತ್ತದೆ. ಸ್ಥಳೀಯ ಆಡಳಿತದ ಪ್ರಜಾಪ್ರಭುತ್ವವನ್ನು ಕುಗ್ಗಿಸುತ್ತದೆ. ಅಧಿಕಾರವನ್ನು ಕೇಂದ್ರಕ್ಕೆ ಸೀಮಿತಗೊಳಿಸುತ್ತದೆ” ಎಂದು ಕಾಂಗ್ರೆಸ್ ಸಂಸದ ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಲೋಕಸಭೆ | ಒಂದು ದೇಶ- ಒಂದು ಚುನಾವಣೆ ಮಸೂದೆ ಮಂಡನೆ ಮುಂದೂಡಿಕೆ

Advertisements

“ಭಾರತದ ಪ್ರಜಾಪ್ರಭುತ್ವದ ಮೂಲಾಧಾರವಾಗಿರುವ ಬಹುತ್ವ ಮತ್ತು ವೈವಿಧ್ಯತೆ ಎಂಬುದನ್ನು ಈ ಮಸೂದೆಯು ದುರ್ಬಲಗೊಳಿಸುತ್ತದೆ. ರಾಜ್ಯಗಳ ವಿಶಿಷ್ಟ ರಾಜಕೀಯ, ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂದರ್ಭಗಳನ್ನೂ ಈ ಕ್ರಮ ನಿರ್ಲಕ್ಷಿಸುತ್ತದೆ” ಎಂದು ಹೇಳಿದ್ದಾರೆ.

ಇನ್ನು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಸೇರಿದಂತೆ ಹಲವು ವಿಪಕ್ಷ ನಾಯಕರುಗಳು ಒಂದು ದೇಶ- ಒಂದು ಚುನಾವಣೆ ಮಸೂದೆಯನ್ನು ಖಂಡಿಸಿದ್ದಾರೆ. ಇದು ದೇಶವನ್ನು ಸರ್ವಾಧಿಕಾರದತ್ತ ಒಯ್ಯುತ್ತದೆ ಎಂದು ವಿಪಕ್ಷಗಳು ಹೇಳಿದೆ.

ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆಯನ್ನು – ಸಂವಿಧಾನ (129 ನೇ ತಿದ್ದುಪಡಿ) ಮಸೂದೆ (ಒಂದು ದೇಶ- ಒಂದು ಚುನಾವಣೆ) ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆಯನ್ನು ಸೋಮವಾರ ಲೋಕಸಭೆಯಲ್ಲಿ ಮಂಡಿಸಲು ನಿಗದಿಪಡಿಸಲಾಗಿತ್ತು. ಆದರೆ ಮುಂದೂಡಲಾಗಿದ್ದು ಇಂದು ಮಂಡಿಸುವ ಸಾಧ್ಯತೆಯಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X