ಮಸೂದ್, ನೆಟ್ಟಾರು, ಫಾಸಿಲ್ ಕುಟುಂಬಕ್ಕೆ ಸಾಮಾಜಿಕ ನ್ಯಾಯ ಒದಗಿಸಿ; ಸರ್ಕಾರಕ್ಕೆ ಶಾಹಿದ್ ತೆಕ್ಕಿಲ್ ಮನವಿ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಕೋಮುವಾದಿಗಳ ಅಟ್ಟಹಾಸಕ್ಕೆ ಬಲಿಯಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಯವರಿಗೆ ಬಿಜೆಪಿ ಸರ್ಕಾರ ನೀಡಿದ್ದ ತಾತ್ಕಾಲಿಕ ನೆಲೆಯ ಗುತ್ತಿಗೆ ಆಧಾರದ ನೌಕರಿಯ ನೇಮಕವನ್ನು ಸಿದ್ದರಾಮಯ್ಯ ಅವರ ಸರ್ಕಾರ ಖಾಯಂಗೊಳಿಸುವಂತೆ ಕೆಪಿಸಿಸಿ ಮುಖ್ಯ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್ ಮನವಿ ಮಾಡಿದ್ದಾರೆ.

ಜೊತೆಗೆ ಬೆಳ್ಳಾರೆ ಮಸೂದ್, ಸುರತ್ಕಲ್ ಫಾಸಿಲ್ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ಮತ್ತು ಅವರ ಕುಟುಂಬದ ಸದಸ್ಯರಿಗೆ ಖಾಯಂ ಸರ್ಕಾರಿ ಉದ್ಯೋಗ ನೀಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ತೆಕ್ಕಿಲ್ ಒತ್ತಾಯಿಸಿದ್ದಾರೆ.

“ಕೋಮುವಾದಿಗಳ ಅಟ್ಟಹಾಸಕ್ಕೆ ಬಲಿಯಾದ ಮಸೂದ್ ಹಾಗೂ ಫಾಸಿಲ್ ಕುಟುಂಬಕ್ಕೆ ಬೊಮ್ಮಾಯಿ ಸರ್ಕಾರ ಅನ್ಯಾಯ ಮಾಡಿದೆ. ಅದನ್ನು ಯಾರು ಮರೆಯಲು ಅಸಾಧ್ಯ. ಸೌಜನ್ಯಕ್ಕಾದರು ಸಂತಾಪ ಸೂಚಿಸಲು ಆಗದ ಬಿಜೆಪಿ ನಾಯಕರ, ಜನಪ್ರತಿನಿಧಿಗಳ, ಸರ್ಕಾರಿ ಅಧಿಕಾರಿಗಳ ಹಾಗೂ ಸರ್ಕಾರದ ನಡವಳಿಕೆ ಮಾನವೀಯತೆಯನ್ನೇ ಪ್ರಶ್ನಿಸುವಂತೆ ಮಾಡಿತ್ತು” ಎಂದು ತೆಕ್ಕಿಲ್ ಕಿಡಿಕಾರಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ?: ಪ್ರವೀಣ್‌ ಪತ್ನಿಗೆ ಮತ್ತೆ ಉದ್ಯೋಗ ಕೊಡುತ್ತೇವೆ: ಸಿಎಂ ಸಿದ್ಧರಾಮಯ್ಯ

“ಪ್ರವೀಣ್ ನೆಟ್ಟಾರು, ಮಸೂದ್, ಫಾಸಿಲ್ ಸಹಿತ ಹಲವಾರು ಅಮಾಯಕ ಕುಟುಂಬದ ಶಾಪ ಬೊಮ್ಮಾಯಿ ಸರ್ಕಾರಕ್ಕೆ ತಟ್ಟಿದೆ. ಆಗಿನ ಮುಖ್ಯಮಂತ್ರಿ ಬೊಮ್ಮಾಯಿ ಸುರತ್ಕಲ್‌ಗೆ ಭೇಟಿ ನೀಡಿದರು ಸಮೀಪದ ಫಾಸಿಲ್ ಮನೆಗೆ ಭೇಟಿ ನೀಡಲಿಲ್ಲ. ಮಸೂದ್‌ ಕುಟುಂಬವನ್ನು ಭೇಟಿ ಮಾಡಲಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಲ್ಲರನ್ನು ಒಂದೇ ರೀತಿಯಲ್ಲಿ ಕಂಡು ಸಾಮಾಜಿಕ ನ್ಯಾಯ ಒದಗಿಸಲಿದೆ” ಎಂದು ಟಿ ಎಂ ಶಾಹಿದ್ ತೆಕ್ಕಿಲ್ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X