ಶ್ರೀರಂಗಪಟ್ಟಣದಲ್ಲಿ ಹನುಮ ಜಯಂತಿ ಅಂಗವಾಗಿ ಆಯೋಜಿಸಿದ್ದ ಸಂಕೀರ್ತನಾ ಯಾತ್ರೆಗೆ ತೆರಳುತ್ತಿದ್ದ ಮಾಲಾಧಾರಿಗಳು, ಮುಸ್ಲಿಂ ಯುವಕರನ್ನು ಅಡ್ಡಗಟ್ಟಿ ‘ಜೈಶ್ರೀರಾಮ್’ ಕೂಗುವಂತೆ ಒತ್ತಾಯಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಸಂಬಂಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ಮಂಡ್ಯ ತಾಲೂಕಿನ ಬೆಂಗಳೂರು ಮೈಸೂರು ಹೆದ್ದಾರಿಯ ಸುಂಡಹಳ್ಳಿ ಸಮೀಪ ಈ ಘಟನೆ ನಡೆದಿದ್ದು, ಹೆದ್ದಾರಿಯ ಅಂಡರ್ ಪಾಸ್ ಸರ್ವೀಸ್ ರಸ್ತೆಯ ಬಳಿ ಬೈಕ್ನಲ್ಲಿ ತೆರಳುತ್ತಿದ್ದ ಮೂವರು ಮುಸ್ಲಿಂ ಯುವಕರನ್ನು ಸಂಕೀರ್ತನಾ ಯಾತ್ರೆಗೆ ಹೋಗುತ್ತಿದ್ದ ಸಂಘಪರಿವಾರದ ಕಾರ್ಯಕರ್ತರು ಸುತ್ತುವರಿದು ‘ಜೈಶ್ರೀರಾಮ್’ ಕೂಗುವಂತೆ ಒತ್ತಾಯಿಸುತ್ತಿರುವುದು ವೈರಲ್ ವಿಡಿಯೋದಲ್ಲಿದೆ.
ಈ ಸುದ್ದಿ ಓದಿದ್ದೀರಾ? ಕಲಬುರಗಿ| ಪ್ರತಿಭಟನಾನಿರತ ರೈತರನ್ನು ರಾತ್ರೋರಾತ್ರಿ ವಶಕ್ಕೆ ಪಡೆದ ಪೊಲೀಸರು
ಈ ಕುರಿತು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹನುಮ ಮಾಲಾಧಾರಿಗಳ ವಿರುದ್ಧ ಸುಮೋಟೊ ಪ್ರಕರಣ ದಾಖಲಾಗಿದೆ. ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ದುಷ್ಕರ್ಮಿಗಳ ವಿರುದ್ಧ ಬಿಎನ್ಎಸ್ ಅಡಿಯಲ್ಲಿ 189(2), 126(2), 196, 352, ರೆ.ವಿ. 190 ಪ್ರಕರಣ ದಾಖಲಾಗಿದೆ. 8-10 ಅಪರಿಚಿತರು ಕೃತ್ಯ ಎಸಗಿದ್ದಾಗಿ ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.