ಮಾನವ ಕಳ್ಳಸಾಗಣೆ | 22 ವರ್ಷದ ಬಳಿಕ ಪಾಕ್‌ನಿಂದ ಭಾರತಕ್ಕೆ ಮರಳಿದ ಮಹಿಳೆ

Date:

Advertisements

ಏಜೆಂಟ್‌ವೊಬ್ಬ ನೀಡಿದ್ದ ದುಬೈನಲ್ಲಿ ಉದ್ಯೋಗ ಕೊಡಿಸುವ ಆಮಿಷಕ್ಕೆ ತುತ್ತಾಗಿ, ಮಾನವ ಕಳ್ಳಸಾಗಣೆ ಜಾಲಕ್ಕೆ ಸಿಕ್ಕಿಕೊಂಡಿದ್ದ ಮಹಿಳೆಯೊಬ್ಬರು 22 ವರ್ಷದ ಬಳಿಕ ತನ್ನೂರಿಗೆ ಮರಳಿಸಿದ್ದಾರೆ. ಮಾನವ ಕಳ್ಳಸಾಗಣೆಗೆ ತುತ್ತಾಗಿ ಪಾಕಿಸ್ತಾನದ ಕರಾಚಿಯಲ್ಲಿದ್ದ ಮಹಿಳೆ ಇದೀಗ ಭಾರತಕ್ಕೆ ಮರಳಿದ್ದಾರೆ.

ಭಾರತದ ಮುಂಬೈ ಮೂಲದ ಹಿಮೀದಾ ಬಾನು ಅವರನ್ನು 22 ವರ್ಷಗಳ ಹಿಮದೆ ಮಾನವ ಕಳ್ಳಸಾಗಣೆ ಜಾಲವು ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಕರಾಚಿಗೆ ಕರೆದೊಯ್ಡಿತ್ತು. ಕರಾಚಿಯಲ್ಲಿ 22 ವರ್ಷ ಬದುಕಿನ ಹೋರಾಟ ನಡೆಸಿದ ಮಹಿಳೆ ಇದೀಗ ಲಾಹೋರ್‌ನ ವಾಘಾ ಗಡಿಯ ಮೂಲಕ ಭಾರತಕ್ಕೆ ಮರಳಿ ಬಂದಿದ್ದಾರೆ. ತನ್ನ ಕುಟುಂಬವನ್ನು ಸೇರಿಕೊಂಡಿದ್ದಾರೆ.

ನಾಲ್ಕು ಮಕ್ಕಳ ತಾಯಿಯಾಗಿದ್ದ ಹಮೀದಾ, “ತನ್ನ ಮಕ್ಕಳಿಗೆ ಉತ್ತಮ ಜೀವನವನ್ನು ಒದಗಿಸಬೇಕೆಂದು ವಿದೇಶದಲ್ಲಿ ಉದ್ಯೋಗ ಮಾಡಲು ನಿರ್ಧರಿಸಿದೆ. 2002ರಲ್ಲಿ, ವಿದೇಶಗಳಲ್ಲಿ ಉದ್ಯೋಗ ಕೊಡುವ ಏಜೆಂಜ್‌ ತನಗೆ ದುಬೈನಲ್ಲಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದರು. ಆದರೆ, ನನ್ನನ್ನು ಕರಾಚಿಗೆ ಕರೆದೊಯ್ದರು. ಅಲ್ಲಿಯೂ ಯಾವುದೇ ಉದ್ಯೋಗವನ್ನು ಕೊಡಿಸಲಿಲ್ಲ. ಕೆಲ ದಿನಗಳ ಕಾಲ ಬೀದಿಗಳಲ್ಲಿ ವಾಸಿಸಿದ್ದೇನೆ. ಬಳಿಕ, ಸಣ್ಣ ಅಂಗಡಿಯೊಂದನ್ನು ತೆರೆದಿದ್ದೆ” ಎಂದು ಹೇಳಿಕೊಂಡಿದ್ದಾರೆ.

Advertisements

ಹಮೀದಾ ಅವರನ್ನು 2022ರಲ್ಲಿ ಯೂಟ್ಯೂಬರ್‌ ವಲ್ಲಿಯುಲ್ಲಾ ಮರೂಫ್ ಎಂಬವರು ಸಂದರ್ಶನ ಮಾಡಿದ್ದರು. ಆಗ ಹಮೀದಾ ತಾವು ಕಳ್ಳಸಾಗಣೆ ಜಾಲಕ್ಕೆ ಸಿಲುಕಿ ಕರಾಚಿಗೆ ಬಂದಿದ್ದಾಗಿ ಹೇಳಿಕೊಂಡಿದ್ದರು. ಆ ಸಂದರ್ಶನದ ವಿಡಿಯೋ ವೈರಲ್ ಆಗಿತ್ತು. ಬಳಿಕ, ಆಕೆಯ ಹಿನ್ನೆಲೆ ಮತ್ತು ಗುರುತನ್ನು ಪರಿಶೀಲಿಸಿದ ಪಾಕಿಸ್ತಾನದಲ್ಲಿರುವ ಭಾರತೀಯ ಹೈಕಮಿಷನ್‌ ಅಧಿಕಾರಿಗಳು ಆಕೆಯ ಕುಟುಂಬಸ್ತರನ್ನು ಸಂಪರ್ಕಿಸಿದ್ದಾರೆ. ಬಳಿಕ, ಅಕೆಯನ್ನು ಭಾರತಕ್ಕೆ ಮರಳಿ ಬರಲು ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X