ದಾವಣಗೆರೆ | ಪೊಲೀಸರು ಬಂಧಿಸಿ ಕರೆತರುವಾಗ ಸೇತುವೆಯಿಂದ ಬಿದ್ದು ಆರ್‌ಟಿಐ ಕಾರ್ಯಕರ್ತ ಸಾವು

Date:

Advertisements
  • ಪೊಲೀಸರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಪತ್ನಿ ದೂರು
  • ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು

ಪೊಲೀಸರು ಬಂಧಿಸಿ ಕರೆತರುವಾಗ ತಪ್ಪಿಸಿಕೊಳ್ಳುವ ಯತ್ನದಲ್ಲಿ ಫ್ಲೈ ಓವರ್ ಮೇಲಿಂದ ಬಿದ್ದು ಆರ್‌ಟಿಐ ಕಾರ್ಯಕರ್ತ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಆದರೆ, ಆತನ ಕುಟುಂಬ ಪೊಲೀಸರ ಮೇಲೆ ಕೊಲೆ ಆರೋಪ ಮಾಡಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಬ್ಬಳ ಗ್ರಾಮದ ನಿವಾಸಿಯಾದ ಹರೀಶ್ ಮೃತ ಆರ್‌ಟಿಐ ಕಾರ್ಯಕರ್ತ. ನಕಲಿ ದಾಖಲೆ ಸೃಷ್ಠಿಸಿ ಬೇರೊಬ್ಬರ ಸೈಟ್ಅನ್ನು ಹರೀಶ್ ತನ್ನ ಹೆಸರಿಗೆ ಮಾಡಿಕೊಂಡಿದ್ದಾರೆಂಬ ಆರೋಪ ಇತ್ತು.

ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಆವರಗೆರೆ ಗ್ರಾಮದ ಸರ್ವೇ ನಂ 240/2ಬಿರಲ್ಲಿರುವ ಮೂರು ನಿವೇಶನಗಳ ನಕಲಿ ದಾಖಲೆಗಳನ್ನು ಸೃಷ್ಠಿಸಿದ್ದಲ್ಲದೆ, ಬೇರೊಬ್ಬ ಮಹಿಳೆಯೊಬ್ಬರಿಂದ ನಕಲಿ ಕ್ರಯದ ಕರಾರು ಪತ್ರ ನೋಂದಣಿ ಮಾಡಿಸಿದ್ದಾರೆ ಎಂಬ ಆರೋಪ ಹರೀಶ್ ವಿರುದ್ಧ ಕೇಳಿ ಬಂದಿತ್ತು. ಈ ಸಂಬಂಧ ಈಚೆಗೆ ಆಸ್ತಿ ಮೂಲ ಮಾಲೀಕ ಎಂದು ಕೆ ಬಾಬುರಾವ್ ಎಂಬುವರು ಸುದ್ದಿಗೋಷ್ಠಿ‌ ಸಹ ನಡೆಸಿದ್ದರು.

Advertisements

ಹರೀಶ್‌ಗೆ ಇತನ ಪತ್ನಿಯ ಊರಾದ ಚನ್ನಗಿರಿ ಕಾಕನೂರ ಗ್ರಾಮದಿಂದ ಪೊಲೀಸರು ಶನಿವಾರ ಕರೆ ತಂದಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಪೊಲೀಸರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಮೃತ ಸುರೇಶ್​ ಪತ್ನಿಯಿಂದ ಎಸ್ ಐ ಹಾಗೂ ಇಬ್ಬರು ಕಾನ್‌ಸ್ಟೆಬಲ್‌ಗಳ ವಿರುದ್ಧ ದೂರು ನೀಡಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ದಾವಣಗೆರೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಕೆ ಅರುಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹರೀಶ್ ಕುಟುಂಬದ ಸದಸ್ಯರು ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿ, ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ಅವಸಾನದ ಅಂಚಿನಲ್ಲಿರುವ ಯುರೋಪಿಯನ್ನರ ಸ್ಮಶಾನ

ಹರೀಶ್ ಹಳ್ಳಿ ವಿರುದ್ಧ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಶನಿವಾರ ರಾತ್ರಿ ಬಂಧಿಸಿ ಕರೆತರುವಾಗ ತಪ್ಪಿಸಿಕೊಳ್ಳುವ ಯತ್ನದಲ್ಲಿ ತೋಳಹುಣಸೆ ಸಮೀಪ ಫ್ಲೈ ಓವರ್ ಮೇಲಿಂದ ಬಿದ್ದು ಗಂಭೀರ ಗಾಯವಾಗಿತ್ತು, ಬಳಿಕ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು ಆದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದ ಎಂದು ಹೇಳಲಾಗಿತ್ತು.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಹರೀಶ್‌, ಚನ್ನಗಿರಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X