ಬೀದರ್‌ | ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಆಗ್ರಹಿಸಿ ಧರಣಿ

Date:

Advertisements

ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ, ಐಸಿಡಿಎಸ್ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿಯಿಂದ ನಗರದಲ್ಲಿ ಮಂಗಳವಾರ ಅಹೋರಾತ್ರಿ ಧರಣಿ ಆರಂಭಿಸಿದರು.

ಬೀದರ್‌ ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯ ಮುಂಭಾಗದಲ್ಲಿ ಜಮಾಯಿಸಿದ ನೂರಾರು ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರು ಬೇಡಿಕೆಗಳು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ಅಂಗನವಾಡಿಗಳಲ್ಲಿ ಪೂರಕ ಪೌಷ್ಠಿಕ ಆಹಾರದ ಬದಲು ಸಂಪೂರ್ಣ ಆಹಾರ ನೀಡಬೇಕು. ಗ್ರಾಜ್ಯುಟಿ ಅನುದಾನದ ಬಿಡುಗಡೆ, ಅನುದಾನ ಹೆಚ್ಚಳ, ಗುಜರಾತ್ ಹೈಕೊರ್ಟ್ ತೀರ್ಪಿನಂತೆ ಕಾರ್ಯಕರ್ತೆ, ಸಹಾಯಕಿಯರನ್ನು ವರ್ಗ 3 ಮತ್ತು 4 ಎಂದು ಪರಿಗಣಿಸಿ ಖಾಯಂಗೊಳಿಸಬೇಕು. 2018ರಿಂದ ಕೇಂದ್ರ ಸರಕಾರ ಯಾವುದೇ ಗೌರವಧನ ಹೆಚ್ಚಳ ಮಾಡದೇ ಇರುವುದರಿಂದ ಕೂಡಲೇ ₹26 ಸಾವಿರ ಗೌರವಧನ ಹೆಚ್ಚಿಸಬೇಕು. 2023ರ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ಪಕ್ಷ ಘೋಷಿಸಿದಂತೆ ₹15 ಸಾವಿರ ಗೌರವಧನ ಹೆಚ್ಚಿಸಬೇಕುʼ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Advertisements

ʼನಿವೃತ್ತಿಯಾದವರಿಗೆ ಇಡಿಗಂಟು ₹10 ಸಾವಿರ ಮಾಸಿಕ ಪಿಂಚಣಿ, ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಎಲ್‌ಕೆಜಿ ಯುಕೆಜಿ ಪ್ರಾರಂಭಿಸಬೇಕು. ಸಾಮೂಹಿಕ ಆರೋಗ್ಯ ವಿಮೆಯನ್ನು ಕೂಡಲೇ ಜಾರಿಗೊಳಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡಬೇಕು. ಖಾಲಿ ಹುದ್ದೆಗಳಿಗೆ 3 ತಿಂಗಳೊಳಗೆ ನೇಮಕಾತಿ ಮಾಡುವುದು ಸೇರಿದಂತೆ 20 ಬೇಡಿಕೆಗಳ ಈಡೇರಿಸಲು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ₹17 ಸಾವಿರ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಪಿಡಿಒ

ಪ್ರತಿಭಟನೆಯಲ್ಲಿ ಸಿಐಟಿಯು ಬೀದರ್ ಜಿಲ್ಲಾಧ್ಯಕ್ಷೆ ಸುಶೀಲಾ ಹತ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಶ್ರೀ, ಕಾರ್ಯಧ್ಯಕ್ಷೆ ಶ್ರೀದೇವಿ ಚುಡೇ, ಖಜಾಂಚಿ ಮಹಾದೇವಮ್ಮ, ಪದ್ಮಾವತಿ ಸ್ವಾಮಿ, ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಅಂಬುಬಾಯಿ ಮಾಳಗೆ, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಮಾಳಗೆ ಸೇರಿದಂತೆ ಸಂಘದ ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X