ಬೀದರ್‌ | ಮೆಕಾಲೆ ಶಿಕ್ಷಣದಿಂದ ಸಂಸ್ಕೃತಿಗೆ ಧಕ್ಕೆ : ತಡೋಳಾ ಶ್ರೀ

Date:

Advertisements

ಮೆಕಾಲೆ ಶಿಕ್ಷಣ ಮಕ್ಕಳಲ್ಲಿ ಬದುಕಿನ ಮೌಲ್ಯಗಳು ಕುಸಿಯುತ್ತಿವೆ ಎಂದು ತಡೋಳಾ ರಾಜೇಶ್ವರ ಶಿವಚಾರ್ಯ ಸ್ವಾಮೀಜಿ ಹೇಳಿದರು.

ರಾಷ್ಟ್ರೋತ್ಥಾನ ಪರಿಷತ್ ಬೆಂಗಳೂರು, ಪ್ರಶಿಕ್ಷಣ ಭಾರತಿ ಹಾಗೂ ಸ್ಪರ್ಧಾ ಸಂಕಲ್ಪ ಅಕಾಡೆಮಿ ವತಿಯಿಂದ ನಗರದ ಡಾ.ಚೆನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಆಯೋಜಿಸಿದ್ದ ಶಿಕ್ಷಕರ ಸಹಮಿಲನ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.

ಇಂದು ದೇಶದಲ್ಲಿ ಅನ್ನ, ವಸ್ತ್ರಕ್ಕೆ ಬರವಿಲ್ಲ. ಜ್ಞಾನ, ಸಂಸ್ಕಾರದ ಕೊರತೆ ಕಂಡು ಬರುತ್ತಿದೆ. ಮೆಕಾಲೆ ಶಿಕ್ಷಣ ನಮ್ಮ ಸಂಸ್ಕೃತಿಗೆ ದಕ್ಕೆ ಬರುತ್ತಿದೆ. ಕುಟುಂಬ ಪ್ರೀತಿ ಮಾಯಾವಾಗುತ್ತಿದೆ. ವಿಲಾಸ ಬದುಕಿಗೆ ದಾರಿ ಮಾಡಿಕೊಡುತ್ತಿದೆ. ಇದರಿಂದ ಆದರ್ಶ ಮಕ್ಕಳನ್ನು ಕಳೆದುಕೊಳ್ಳುತ್ತಿದ್ದೇವೆ. ಪಾಲಕರು ನಮ್ಮ ಮಕ್ಕಳಿಗೆ ದುಡಿಮೆಯ ಸಂಸ್ಕಾರವನ್ನು ಕಲಿಸಬೇಕು ಎಂದು ಹೇಳಿದರು.

Advertisements

ಮಕ್ಕಳಿಗೆ ಕಷ್ಟದ ಅರಿವು, ಬದುಕಿನ ಮೌಲ್ಯವನ್ನು ತಿಳಿಸಬೇಕು. ಪೋಷಕರು ಹಣ ಗಳಿಸುತ್ತಿದ್ದಾರೆ. ಆದರೆ ಸಂಸ್ಕೃತಿಯನ್ನು ದೂರುತ್ತಿದ್ದಾರೆ. ನಮ್ಮ ಪರಂಪರೆ, ಜ್ಞಾನ, ಸಂಸ್ಕೃತಿಯನ್ನು ಮಕ್ಕಳಿಗೆ ತಿಳಿಸಲು ಮುಂದಾಗಬೇಕು. ಮಕ್ಕಳಲ್ಲಿ ಬುದ್ಧಿ ಕೌಶಲ್ಯಗಳನ್ನು ಹೊರತರುವ ಶಿಕ್ಷಣ ವ್ಯವಸ್ಥೆ ನಾವು ರೂಪಿಸಿಕೊಳ್ಳಬೇಕಾಗಿದೆ. ದೇಶವನ್ನು ನಾವು ಹೇಗೆ ಉಳಿಸಿಕೊಳ್ಳಬೇಕೆಂಬ ಜವಾಬ್ದಾರಿ ನಮ್ಮ ನಮ್ಮೆಲ್ಲರ ಮೇಲಿದೆʼ ಎಂದರು.

ಪ್ರಚಲಿತ ವಿದ್ಯಮಾನದಲ್ಲಿ ಶಿಕ್ಷಣದ ವ್ಯವಸ್ಥೆ ಕುರಿತು ಅಶೋಕ್ ಹಂಚಲಿ ತಾಳಿಕೋಟೆ ಮಾತನಾಡಿ, ʼದೇಶ ಕಟ್ಟುವಲ್ಲಿ ಶಿಕ್ಷಕನ ಪಾತ್ರ ಬಹುಮುಖ್ಯವಾಗಿರುವುದು. ಸಮೃದ್ಧ ಭಾರತ ನಿರ್ಮಿಸಲು ಶಿಕ್ಷಕರು ಪ್ರಮಾಣಿಕ ಪ್ರಯತ್ನ ಅತ್ಯಮೂಲ್ಯವಾದದ್ದುʼ ಎಂದರು.

ಪಂಚಮುಖಿ ಶಿಕ್ಷಣ ಕುರಿತು ವಿನಾಯಕ ಭಟ್ ಶೇಡಿಮನೆ ಧಾರವಾಡ ಹಾಗೂ ಆದರ್ಶ ಶಿಕ್ಷಕ ವಿಷಯ ಕುರಿತು ಪ್ರೊ. ಎಂ.ಎನ್. ಹೆಗಡೆ ಹಳವಳ್ಳಿ ವಿಶೇಷ ಉಪನ್ಯಾಸ ನೀಡಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ| ವಿವಿಧ ಬೇಡಿಕೆ ಈಡೇರಿಕೆಗೆ ಅಂಗನವಾಡಿ ಕಾರ್ಯಕರ್ತರಿಂದ ಅಹೋರಾತ್ರಿ ಧರಣಿ

ಕಾರ್ಯಕ್ರಮದಲ್ಲಿ ವೀಣಾ ಎಸ್.ಜಲಾದೆ ಅಧ್ಯಕ್ಷತೆ ವಹಿಸಿದ್ದರು. ಬೀದರ್‌ ವಿಶ್ವವಿದ್ಯಾಲಯ ಕುಲಸಚಿವೆ ಸುರೇಖಾ ಉದ್ಘಾಟಿಸಿದರು. ವಿಕಾಸ ಅಕಾಡೆಮಿ ಜಿಲ್ಲಾ ಸಂಚಾಲಕ ರೇವಣಸಿದ್ದಪ್ಪ ಜಲಾದೆ ಸೇರಿದಂತೆ ರಾಮಕೃಷ್ಣನ್ ಸಾಳೆ, ಓಂಕಾರ ಮಾಶೆಟ್ಟಿ
ರಾಷ್ಟ್ರೋತ್ಥಾನ ಪರಿಷತ್ ಜಿಲ್ಲಾ ಸಂಯೋಜಕ ಶಿವಶರಣು ಚಾಂಬೋಳೆ, ಸ್ಪರ್ಧಾ ಸಂಕಲ್ಪ ಅಕಾಡೆಮಿಯ ಅಧ್ಯಕ್ಷ ನಾಗೇಶ ಸ್ವಾಮಿ ಉಪಸ್ಥಿತರಿದ್ದರು. ಡಾ. ಪ್ರಿಯಾ ಮಹೇಂದ್ರಕರ್‌ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X