ರಾಜ್ಯದ ಐದು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ; ಶೀತ ಗಾಳಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Date:

Advertisements

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗುತ್ತಿದೆ. ಈ ನಡುವೆ ಇಂದು ರಾಜ್ಯದ ಹಲವೆಡೆ ಮಂಜು ಆವರಿಸಲಿದೆ. ಡಿಸೆಂಬರ್ 19ರಂದು ಐದು ಜಿಲ್ಲೆಗಳಲ್ಲಿ ಲಘುವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೊತೆಗೆ ಶೀತ ಗಾಳಿಯ ಎಚ್ಚರಿಕೆಯನ್ನು ನೀಡಿದೆ.

ರಾಜ್ಯದಲ್ಲಿ ನಿನ್ನೆ ಒಣ ಹವೆ ಇತ್ತು. ಮುಂಜಾನೆ ಮೈಕೊರೆಯುವಂತಿದ್ದ ಚಳಿ, ಸಂಜೆಯ ವೇಳೆಗೆ ತಾಪಮಾನ ಕೊಂಚ ಏರಿಕೆಯಿಂದಾಗಿ ಕಡಿಮೆಯಾಯಿತು.

ಇದನ್ನು ಓದಿದ್ದೀರಾ? ರಾಜ್ಯದಲ್ಲಿ ಚಳಿ ಹೆಚ್ಚಳ; ಡಿಸೆಂಬರ್ 17ರಿಂದ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Advertisements

ರಾಜ್ಯದಲ್ಲಿಂದು ಒಣ ಹವಾಮಾನ ಇರುವ ಸಾಧ್ಯತೆಯಿದೆ. ಉತ್ತರ ಆಂತರಿಕ ಕರ್ನಾಟಕದ ಬೀದರ್, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಶೀತ ಗಾಳಿ ಹೆಚ್ಚಾಗಲಿದೆ. ಹಾಗೆಯೇ ರಾಜ್ಯದ ಒಳಭಾಗದ ಪ್ರತ್ಯೇಕ ಸ್ಥಳಗಳಲ್ಲಿ ಆಳವಾದ ಮಂಜು ಆವರಿಸಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಹಾಗೆಯೇ ಹವಾಮಾನ ಇಲಾಖೆಯು ಶೀತ ಗಾಳಿಯ ಎಚ್ಚರಿಕೆಯನ್ನು ನೀಡಿದೆ. ಇಂದು ಉತ್ತರ ಒಳನಾಡಿನ ಉತ್ತರ ಭಾಗದಲ್ಲಿ ತೀವ್ರವಾದ ಶೀತ ಗಾಳಿ ಬೀಸುವ ಸಾಧ್ಯತೆಯಿದೆ. ತಾಪಮಾನವು ಸುಮಾರು 5-6 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದೆ.

ಇದನ್ನು ಓದಿದ್ದೀರಾ? ಮಳೆ ಅಬ್ಬರ | ಪ್ರವಾಹದಲ್ಲಿ ಕೊಚ್ಚಿಹೋದ ಆನೆ

ಡಿಸೆಂಬರ್ 19ರಂದು ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಹೆಚ್ಚಾಗಲಿದೆ. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳ ಕರ್ನಾಟಕದಲ್ಲಿ ಒಣ ಹವೆ ಹೆಚ್ಚಾಗಲಿದೆ. ಕರ್ನಾಟಕದ ಒಳಭಾಗದ ಅಲ್ಲಲ್ಲಿ ಮಂಜು ಆವರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X