20 ದಿನದ ಮಗು ಕೊಲ್ಲುತ್ತೇನೆಂದು ಬೆದರಿಕೆ; ಬಾವನನ್ನು ಕೊಂದ ಬಾಮೈದ

Date:

Advertisements

ತನ್ನ ಪತ್ನಿಯೊಂದಿಗೆ ಜಗಳ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬ ತನ್ನ 20 ದಿನದ ಮಗುವನ್ನು ಕೊಲ್ಲುವುದಾಗಿ ಚಾಕು ಹಿಡಿದು ಬೆದರಿಕೆ ಹಾಕಿದ್ಧಾನೆ. ಇದರಿಂದ ಆಕ್ರೋಶಗೊಂಡ ಆತನ ಪತ್ನಿಯ ಸಹೋದರರು ಆತನನ್ನೇ ಹತ್ಯೆಗೈದಿದ್ದಾರೆ. ಘಟನೆ ಬೆಂಗಳೂರಿನ ಸಿದ್ದಾಪುರದಲ್ಲಿ ನಡೆದಿದೆ.

ಸಿದ್ದಾಪುರ ನಿವಾಸಿ ಸಲ್ಮಾನ್ ಖಾನ್ (29) ಕೊಲೆಯಾದ ವ್ಯಕ್ತಿ. ಆತನ ಪತ್ನಿ ಆಯೆಷಾ ಅವರ ಸಹೋದರರಾದ ಉಮರ್, ಶೊಯೇಬ್ ಹಾಗೂ ಅನ್ವರ್ ಕೊಲೆಗೈದಿರುವ ಆರೋಪಿಗಳು ಎಂದು ತಿಳಿದುಬಂದಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆಯೆಷಾ ಅವರಿಗೆ 20 ದಿನಗಳ ಹಿಂದೆಯಷ್ಟೇ ಹೆರಿಗೆಯಾಗಿತ್ತು. ತನ್ನ ತವರು ಮನೆಯ ನೆರವಿನಿಂದ ಮಗುವನ್ನು ಸಲಹುತ್ತಿದ್ದರು. ಆದಾಗ್ಯೂ, ಸಲ್ಮಾನ್ ಹಲವು ದಿನಗಳಿಂದ ಕೆಲಸಕ್ಕೆ ಹೋಗುತ್ತಿರಲಿಲ್ಲ. ದುಡಿಮೆ ಇಲ್ಲದೆ ಕುಟುಂಬ ನಿರ್ವಹಣೆ ಕಷ್ಟವಾಗಿತ್ತು. ದಿನನಿತ್ಯ ಸಲ್ಮಾನ್ ತನ್ನ ಪತ್ನಿಯೊಂದಿಗೆ ಜಗಳ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.

Advertisements

ಮಂಗಳವಾರ ಸಂಜೆಯೂ ದಂಪತಿಗಳ ನಡುವೆ ಜಗಳವಾಗಿದೆ. ಈ ವೇಳೆ, ಚಾಕು ಹಿಡಿದು ಮಗುವನ್ನು ಕೊಲ್ಲುವುದಾಗಿ ಸಲ್ಮಾನ್ ಬೆದರಿಕೆ ಹಾಕಿದ್ದಾನೆ. ಇದರಿಂದ ಆತಂಕಗೊಂಡ ಆಯೆಷಾ ತನ್ನ ಸಹೋದರರಿಗೆ ಕರೆ ಮಾಡಿ, ಮನೆಗೆ ಕರೆಸಿಕೊಂಡಿದ್ದಾರೆ. ಆಗಲೂ ಸಲ್ಮಾನ್ ಮತ್ತೆ ಮಗುವನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದು, ಆಯೆಷಾ ಸಹೋದರರು ಆ ಚಾಕುವನ್ನು ಕಸಿದುಕೊಂಡು ಆತನಿಗೇ ಚುಚ್ಚಿದ್ದಾರೆ. ಬಳಿಕ, ಆಸ್ಪತ್ರೆಗೆ ರವಾಸಲಾಗಿದ್ದರೂ, ಚಿಕಿತ್ಸೆ ಫಲಿಸದೆ ಸಲ್ಮಾನ್ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಗೈದ ಆರೋಪದ ಮೇಲೆ ಆಯೆಷಾ ಅವರ ಮೂವರು ಸಹೋದರರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

Download Eedina App Android / iOS

X