ಯಾದಗಿರಿ | ಪ್ರತಿಭಟನಾನಿರತ ರೈತ ಮುಖಂಡನೊಂದಿಗೆ ಅಮಾನವೀಯತೆಯಿಂದ ವರ್ತಿಸಿದ ಪೊಲೀಸರು

Date:

Advertisements

ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಆಗ್ರಹಿಸಿ ಯಾದಗಿರಿಯಲ್ಲಿ ಸಿಐಟಿಯು ನೇತೃತ್ವದಲ್ಲಿ ನಡೆಯುತ್ತಿರುವ ಧರಣಿಗೆ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಚನ್ನಪ್ಪ ಆನೇಗುಂದಿ ಬೆಂಬಲ ಸೂಚಿಸಿ, ಧರಣಿ ನಡೆಸಿದಾಗ ಪೊಲೀಸರು ಅಮಾನವೀಯತೆಯಿಂದ ನಡೆದುಕೊಂಡು, ಮನಬಂದಂತೆ ಎಳೆದಾಡಿ ಪೊಲೀಸ್ ಜೀಪಿನೊಳಗೆ ಹಾಕಿ ವಶಕ್ಕೆ ಪಡೆದ ಘಟನೆ ನಡೆದಿದೆ.

ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ICDS ಪ್ರತ್ಯೇಕ ನಿರ್ದೇಶನಾಲಯ ಮಾಡಿ, ಪೂರಕ ಪೌಷ್ಠಿಕ ಆಹಾರದ ಬದಲು ಸಂಪೂರ್ಣ ಆಹಾರ ನೀಡಿ, ಗ್ರಾಜ್ಯುವಿಟಿ ಅನುದಾನದ ಬಿಡುಗಡೆಗಾಗಿ ಒತ್ತಾಯಿಸಿ, 2018ರಿಂದ ಕೇಂದ್ರ ಸರ್ಕಾರದ ವೇತನ ಹೆಚ್ಚಿಸದ ಧೋರಣೆ ಖಂಡಿಸಿ ಮತ್ತು ಬಜೆಟ್‌ನಲ್ಲಿ ಅನುದಾನ ಹೆಚ್ಚಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(CITU) ವತಿಯಿಂದ ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಅಹೋರಾತ್ರಿ ಪ್ರತಿಭಟನಾ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಕೇಂದ್ರದಲ್ಲಿ ಸಿಐಟಿಯು ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಪ್ರತಿಭಟನಾ ಧರಣಿಗೆ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆಗೆ ಬೆಂಬಲ ಸೂಚಿಸಿ ರೈತ ಮುಖಂಡ ಚನ್ನಪ್ಪ ಆನೇಗುಂದಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡುತ್ತಿರುವಾಗ ಪೋಲಿಸ್ ಅಧಿಕಾರಿ (ಪಿಎಸ್ಐ) ಪ್ರತಿಭಟನಾನಿರತರೊಂದಿಗೆ ಅಮಾನವೀಯತೆಯಿಂದ ನಡೆದುಕೊಂಡು ಅವರನ್ನು ಮನಬಂದಂತೆ ಎಳೆದಾಡಿ ಪೋಲಿಸ್ ಜಿಪ್ ಕರೆದುಕೊಂಡು ಹೋಗಿದ್ದಾರೆ.

Advertisements

ಕೂಲಿ ಕಾರ್ಮಿಕ ಸಂಘದ ಜಿಲ್ಲಾ ಮುಖಂಡ ಮಾತನಾಡಿ, “ಪ್ರತಿಭಟನಾನಿರತರೊಂದಿಗೆ ಪಿಎಸ್ಐ ಅಸಭ್ಯವಾಗಿ ವರ್ತಿಸಿ ರೈತ ಮುಖಂಡ ಚನ್ನಪ್ಪ ಆನೇಗುಂದಿ ಅವರನ್ನು ಎಳೆದುಕೊಂಡು ಪೋಲಿಸ್ ಜಿಪ್ ನಲ್ಲಿ ಕರೆದುಕೊಂಡು ಹೊಗಿರುವುದನ್ನು ಖಂಡನೀಯ” ಎಂದರು.

“ಪ್ರತಿಭಟನಾನಿರತರೊಂದಿಗೆ ಅಮಾನವೀಯತೆಯಿಂದ ನಡೆದುಕೊಂಡ ಯಾದಗಿರಿ ಪಿಎಸ್ಐ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಕೂಡಲೇ ಅವರನ್ನುಅಮಾನತು ಮಾಡಬೇಕು ಇಲ್ಲವಾದಲ್ಲಿ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

Download Eedina App Android / iOS

X