ಹಾಸನ l ಅಕ್ರಮ ಮದ್ಯ ಮಾರಾಟ ನಿಲ್ಲಿಸುವಂತೆ ಮಹಿಳಾ ಸಂಘದಿಂದ ಮನವಿ 

Date:

Advertisements

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ವಳಂಬಿಗೆ ಗ್ರಾಮದಲ್ಲಿ ನಡೆಯುತ್ತಿರುವ, ಅಕ್ರಮ ಮದ್ಯ ಮಾರಾಟ ನಿಲ್ಲಿಸುವಂತೆ, ಸ್ತ್ರೀ ಶಕ್ತಿ ಸಂಘದ ಮಹಿಳೆಯರು ಬುಧವಾರ ಹಾಸನ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಗ್ರಾಮದಲ್ಲಿ ಸುಮಾರು 600 ಮನೆಗಳಿದ್ದು, ಸುಮಾರು 12 ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಗ್ರಾಮೀಣ ಭಾಗದ ಜನರು ಕುಡಿತಕ್ಕೆ ದಾಸರಾಗಿದ್ದಾರೆ ಎಂದು ಗ್ರಾಮದ ಮಂಜುಳ ಅವರು ತಿಳಿಸಿದರು.

ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದಿಂದ ಚಿಕ್ಕ ಚಿಕ್ಕ ವಯಸ್ಸಿಗೆ ಮಕ್ಕಳೂ ಕುಡಿತಕ್ಕೆ ದಾಸರಾಗಿ ಶಾಲೆ ತೊರೆದು ಕುಳಿತಿದ್ದಾರೆ.  ಅಲ್ಲದೆ ಕುಡಿದು ಬಂದ ಗಂಡಸರು ಮಹಿಳೆಯರು ಹಾಗೂ ಮಕ್ಕಳ ಮೇಲೆ ಹಲ್ಲೆ, ದೌರ್ಜನ್ಯ ಮಾಡುವ ಪ್ರಕರಣಗಳು ಹೆಚ್ಚಾಗಿವೆ. ಕೂಡಲೇ ಅಕ್ರಮ ಮದ್ಯ ಮಾರಾಟ ತಡೆಗಟ್ಟಬೇಕು ಎಂದು ಗ್ರಾಮದ ಲಕ್ಷಿ ತಿಳಿಸಿದರು.

Advertisements

ಈ ಬಗ್ಗೆ ತಾಲೂಕು ಮಟ್ಟದ ಸಭಂದಿಸಿದ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು, ಈ ಬಗ್ಗೆ ಶಾಶ್ವತ ಪರಿಹಾರ ಕಲ್ಪಿಸಿಲ್ಲ, ಪೋಲಿಸರು ಒಮ್ಮೊಮ್ಮೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಾರೆ. ಆದರೆ ಅವರ ಜೊತೆಗೇ ಶಾಮೀಲಾಗಿ ಪ್ರಕರಣವನ್ನು ಅಲ್ಲಿಗೆ ಕೈ ಬಿಟ್ಟಿದ್ದಾರೆ ಎಂದು ಗ್ರಾಮದ ರುಕ್ಮಿಣಿ ಮಾಹಿತಿ ತಿಳಿಸಿದರು.

ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ ಇನ್ನು ಮದ್ಯ ಮಾರಾಟ ನಿಲ್ಲಿಸದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ದೊಡ್ಡ ಹೋರಾಟ ಮಾಡಲಾಗುವುದು ಎಂದು ಸ್ತ್ರೀ ಶಕ್ತಿ ಮಹಿಳಾ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಗ್ರಾಮದ ನೇತ್ರ, ಮಂಜುಳಾ, ಮಹಾಲಕ್ಷ್ಮಿ, ರಾಣಿ, ರೇಣುಕಾ, ಕಾಳಮ್ಮ, ರತ್ನಮ್ಮ, ಲಕ್ಷ್ಮಮ್ಮ, ಮಾದೇವಿ, ರುಕ್ಕಿಣಿ, ಪಾರ್ವತಿ, ಮಣಿ, ಇಂದ್ರಮ್ಮ, ರಾಣಿ ಇತರರು ಉಪಸ್ಥಿತಿಯಲ್ಲಿದ್ದರು.

ಇದನ್ನೂ ಓದಿದ್ದೀರಾ?ಹಾಸನ l ಶಾಸಕ ರೇವಣ್ಣ ಹುಟ್ಟುಹಬ್ಬ; ಶುಭಕೋರುವ ಬ್ಯಾನರ್‌ನಲ್ಲಿ ಪ್ರಜ್ವಲ್ ಫೋಟೋಗೆ ವಿರೋಧ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X