ರಾಯಚೂರು | ಸ್ಮಶಾನ ಕಾರ್ಮಿಕರನ್ನು ನೌಕರರಾಗಿ ನೇಮಕ ಮಾಡಿ; ಗ್ರಾ.ಪಂ ಕಚೇರಿ ಮುಂದೆ ಪ್ರತಿಭಟನೆ

Date:

Advertisements

ರಾಯಚೂರು ತಾಲ್ಲೂಕಿನ ಯರಗೇರಾ ಹೋಬಳಿಯ ಗೋಡಿಹಾಳ ಹಾಗೂ ಯರಗೇರಾ ಗ್ರಾಮಗಳ ಸ್ಮಶಾನ ಕಾರ್ಮಿಕರನ್ನು ಪಂಚಾಯಿತಿ ನೌಕರರು ಎಂದು ಘೊಷಣೆ ಮಾಡುವಂತೆ ಒತ್ತಾಯಿಸಿ ಯರಗೇರಾ ಗ್ರಾಮ ಪಂಚಾಯಿತಿ ಕಚೇರಿಯ ಬಳಿ ಮಂಗಳವಾರ ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘ ರಾಜ್ಯ ಹಾಗೂ ಯರಗೇರಾ ಹೋಬಳಿ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

ಯರಗೇರಾ ಸೇರಿ ಜಿಲ್ಲೆ ಹಾಗೂ ರಾಜ್ಯದ ಹಲವೆಡೆ ಬೇಕಾಬಿಟ್ಟಿ ಚಾಕರಿಯಲ್ಲಿ ತೊಡಗಿರುವ ಸ್ಮಶಾನ ಕಾರ್ಮಿಕರು ಶವಗಳನ್ನು ಹೂಳುವುದು, ಕುಣಿ( ಗುಂಡಿ) ತೋಡುವ ಕೆಲಸ ಮಾಡುತ್ತಿದ್ದು ಅಗತ್ಯ ಗೌರವ ಧನ ನೀಡುತ್ತಿಲ್ಲ ಸರ್ಕಾರಿ ಸೌಲಭ್ಯವೂ ಮರೀಚಿಕೆಯಾಗಿದೆ. ಪ್ರತಿ ಸಾರ್ವಜನಿಕ ಸ್ಮಶಾನಕ್ಕೆ ಒಬ್ಬರಂತೆ ಮಸಣ ಕಾರ್ಮಿಕರನ್ನು ಸ್ಥಳೀಯ ಸಂಸ್ಥೆಗಳ ಮಸಣ ನಿರ್ವಹಕರಾನ್ನಾಗಿ ನೇಮಿಸಿಕೊಳ್ಳಬೇಕು. ಎಲ್ಲಾ ಸ್ಮಶಾನಗಳಲ್ಲಿ ಪಾರಂಪಾರೀಕವಾಗಿ ಕಾರ್ಯನಿರ್ವಹಿಸುವ ಮಸಣ ಕಾರ್ಮಿಕರ ಕುಟುಂಬಗಳ ಗಣತಿ ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿ ಕುಣಿ ಅಗೆಯುವ ಮತ್ತು ಮುಚ್ಚುವ ಕೆಲಸವನ್ನು ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಪರಿಗಣಿಸಿ ಪ್ರತಿ ಕುಣಿಗೆ ಕನಿಷ್ಠ ₹3,000 ಕೂಲಿಯನ್ನು ಪಂಚಾಯತಿಯಿಂದ ಪಾವತಿಸಬೇಕು. ಅಗತ್ಯ ಸುರಕ್ಷತಾ ಕ್ರಮಗಳನ್ನು ಮತ್ತು ಕುಣಿ ಅಗೆಯುವ, ಮುಚ್ಚುವುದಕ್ಕೆ ಬೇಕಾಗುವ ಹಾರಿ, ಸಲಕಿ, ಪುಟ್ಟಿ, ಗುದ್ದಲಿ ಮತ್ತು ಸುರಕ್ಷತಾ ಕ್ರಮಗಳಿಗಾಗಿ ಕಾರ್ಮಿಕರಿಗೆ ಹ್ಯಾಂಡ್ ಗ್ಲೌಸ್ , ಹಾಗೂ ಹಲಗೆ ಬಾರುಸುವವರಿಗೆ ಹಲಗೆ, ಬೂಟೂ, ಮಾಸ್ಕ್ ಮತ್ತು ಸಾಬೂನು ನೀಡಬೇಕು ಎಂದು ಮನವಿ ಮಾಡಿದರು.

Advertisements

ಪ್ರತಿಭಟನೆಯಲ್ಲಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೆ.ಜಿ.ವಿರೇಶ, ಈ ರಂಗನಗೌಡ, ತಿಪ್ಪಯ್ಯ, ಈರೇಶ, ನಲ್ಲಾರೆಡ್ಡಿ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X