ಮುಂಬೈ| ನೌಕಾಪಡೆಯ ಸ್ಪೀಡ್‌ ಬೋಟ್‌ ಡಿಕ್ಕಿ; 13 ಸಾವು, 99 ಮಂದಿ ರಕ್ಷಣೆ

Date:

Advertisements

ಮುಂಬೈನ ಗೇಟ್‌ವೇ ಆಫ್‌ ಇಂಡಿಯಾದ ಕರಾವಳಿಯಲ್ಲಿ ನೌಕಾಪಡೆಯ ಸ್ಪೀಡ್‌ ಬೋಟ್‌ ಪ್ರಯಾಣಿಕರ ದೋಣಿಗೆ ಡಿಕ್ಕಿಯೊಡೆದ ಪರಿಣಾಮ 13 ಮಂದಿ ಮೃತಪಟ್ಟಿದ್ದು, 99 ಮಂದಿಯನ್ನು ಸಮುದ್ರದಿಂದ ರಕ್ಷಿಸಲಾಗಿದೆ.

ಪ್ರಯಾಣಿಕರ ದೋಣಿಯು 110 ಮಂದಿಯನ್ನು ಕರೆದೊಯ್ಯುತ್ತಿತ್ತು. ನೀಲ್‌ಕಮಲ್‌ ಎಂಬ ಹೆಸರಿನ ಬೋಟ್ ಮುಂಬೈನ ಪ್ರವಾಸಿ ತಾಣವಾದ ಎಲಿಫೆಂಟಾ ದ್ವೀಪದಿಂದ ಆಗಮಿಸುತ್ತಿದ್ದಾಗ ಗೇಟ್‌ ವೇ ಆಫ್‌ ಇಂಡಿಯಾ ಬಳಿಯ ಕರಾವಳಿಯಲ್ಲಿ ನೌಕಾಪಡೆಯ ಬೋಟ್‌ ಡಿಕ್ಕಿಯೊಡೆದಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವಾಲಯ ಪ್ರವೇಶಕ್ಕೆ ಅಂಗಲಾಚುವ ದಲಿತರಿಗೆ ಬಾಬಾಸಾಹೇಬರು ಹೇಳಿದ್ದ ಪಾಠಗಳೇನು?

Advertisements

ನೌಕಾಪಡೆಯ ಮೂಲಗಳ ಪ್ರಕಾರ, ಸ್ಪೀಡ್‌ ಬೋಟ್ ಎಂಜಿನ್ ಸಮಸ್ಯೆಯಿಂದ ಇದು ಅಪಘಾತಕ್ಕೆ ಕಾರಣವಾಗಿದೆ. ರಕ್ಷಣಾ ಕವಚಗಳನ್ನು ಧರಿಸಿದ ಪ್ರಯಾಣಿಕರನ್ನು ರಕ್ಷಿಸಿ ಮತ್ತೊಂದು ದೋಣಿಗೆ ಕರೆದೊಯ್ಯುತ್ತಿರುವುದನ್ನು ದೃಶ್ಯಗಳಲ್ಲಿ ಕಂಡುಬರುತ್ತಿದೆ. ಬೃಹತ್ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಇದರ ಭಾಗವಾಗಿ ನೌಕಾಪಡೆಯ 11 ಬೋಟ್‌ಗಳು, ಪೊಲೀಸರ ಮೂರು ಬೋಟ್‌ಗಳು ಮತ್ತು ನೌಕಾಪಡೆಯ ಬೋಟ್‌ಅನ್ನು ಈ ಪ್ರದೇಶದಲ್ಲಿ ನಿಯೋಜಿಸಲಾಗಿದೆ.

ಹೆಚ್ಚುವರಿಯಾಗಿ, ನಾಲ್ಕು ಹೆಲಿಕಾಪ್ಟರ್‌ಗಳು, ಜವಾಹರಲಾಲ್ ನೆಹರು ಬಂದರು ಪ್ರಾಧಿಕಾರದ ಸಿಬ್ಬಂದಿ ಮತ್ತು ಸ್ಥಳೀಯ ಮೀನುಗಾರರು ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿದ್ದಾರೆ. ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X