ಪ್ರತಿಭಟನೆಯಲ್ಲಿ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಸಾವು; ಪೊಲೀಸರ ದೌರ್ಜನ್ಯ ಆರೋಪ

Date:

Advertisements

ಉತ್ತರ ಪ್ರದೇಶ ಮತ್ತು ಅಸ್ಸಾಂನಲ್ಲಿ ಬುಧವಾರ ಪ್ರತಿಭಟನೆಯ ವೇಳೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಸಾವನ್ನಪ್ಪಿದ್ದು, ಪೊಲೀಸರ ದೌರ್ಜನ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಮೃತರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಮೃತರನ್ನು ಪ್ರಭಾತ್ ಪಾಂಡೆ ಮತ್ತು ಮೃದುಲ್ ಇಸ್ಲಾಂ ಎಂದು ಗುರುತಿಸಲಾಗಿದ್ದು, ವಿವಿಧ ಸಮಸ್ಯೆಗಳ ವಿರುದ್ಧ ನಡೆದ ಪ್ರತಿಭಟನೆ ನಡೆಸುತ್ತಿದ್ದಾಗ ಸಾವನ್ನಪ್ಪಿದ್ದಾರೆ. “ಪೊಲೀಸ್ ದೌರ್ಜನ್ಯದಿಂದಾಗಿ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ. ಅಶ್ರುವಾಯುವಿನಿಂದ ಗಾಯಗೊಂಡಿದ್ದರು” ಎಂದು ಕಾಂಗ್ರೆಸ್ ಆರೋಪಿಸಿದೆ.

ಇದನ್ನು ಓದಿದ್ದೀರಾ? ಅಕ್ರಮ ಗಣಿಗಾರಿಕೆ | ಲೂಟಿಕೋರರ ಪರ ನಿಂತಿರುವ ಕಾಂಗ್ರೆಸ್ ಸರ್ಕಾರ: ಎಎಪಿ ಆರೋಪ

Advertisements

ಉತ್ತರ ಪ್ರದೇಶ ವಿಧಾನಸಭೆ ಬಳಿ ಕಾಂಗ್ರೆಸ್ ಪ್ರತಿಭಟನೆಯ ವೇಳೆ ಕಾಂಗ್ರೆಸ್ ಕಾರ್ಯಕರ್ತ ಪ್ರಭಾತ್ ಪಾಂಡೆ ‘ಪೊಲೀಸ್ ದೌರ್ಜನ್ಯದಿಂದ’ ಸಾವನ್ನಪ್ಪಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ ದೂರಿದ್ದಾರೆ.

ಗೋರಖ್‌ಪುರ ಮೂಲದ 28 ವರ್ಷದ ಪ್ರಭಾತ್ ಪಾಂಡೆ ಅವರು ಪ್ರತಿಭಟನೆ ಬಳಿಕ ತೀವ್ರ ಆಯಾಸಗೊಂಡು ಕಾಂಗ್ರೆಸ್ ಕಚೇರಿಯಲ್ಲಿದ್ದು. ಅಲ್ಲಿಂದ ಅವರನ್ನು ಆಸ್ಪತ್ರೆಗೆ ಕರೆತರಲಾಗಿದೆ. ಆಸ್ಪತ್ರೆಯಲ್ಲಿ ಪ್ರಭಾತ್ ಸಾವನ್ನಪ್ಪಿರುವುದಾಗಿ ಪೊಲೀಸರು ದೃಢಪಡಿಸಿದ್ದಾರೆ.

ಇನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ಮೃತರ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಆರ್ಥಿಕ ನೆರವು ನೀಡಬೇಕು ಮತ್ತು ಕುಟುಂಬದ ಓರ್ವ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಅಜಯ್ ರೈ ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಉಡುಪಿ | ಮೋದಿ ಸರ್ಕಾರದ ನೂತನ ಸಂಹಿತೆ ಕಾಂಗ್ರೆಸ್ ಜಾರಿ ಮಾಡಿದರೆ ವಿಧಾನಸೌಧಕ್ಕೆ ಲಗ್ಗೆ – ಸಿಐಟಿಯು

“ವೈದ್ಯರ ಪ್ರಕಾರ ದೇಹದಲ್ಲಿ ಯಾವುದೇ ಗಾಯದ ಗುರುತು ಇರಲಿಲ್ಲ. ಹೆಚ್ಚಿನ ತನಿಖೆ ನಡೆಸಲಾಗುವುದು” ಎಂದು ಸೆಂಟ್ರಲ್ ಲಕ್ನೋ ಡಿಸಿಪಿ ರವೀನಾ ತ್ಯಾಗಿ ಹೇಳಿದ್ದಾರೆ.

ಅಸ್ಸಾಂನಲ್ಲೂ ಕಾಂಗ್ರೆಸ್ ಕಾರ್ಯಕರ್ತ ಸಾವು

ಪ್ರತಿಭಟನೆಯ ವೇಳೆ ಅಶ್ರುವಾಯು ಹೊಗೆಯಿಂದ ಪಕ್ಷದ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಸ್ಸಾಂ ಕಾಂಗ್ರೆಸ್ ಹೇಳಿದೆ. ಕಾಂಗ್ರೆಸ್ ಲೀಗಲ್ ಸೆಲ್ ಸದಸ್ಯ ಮೃದುಲ್ ಇಸ್ಲಾಂ ಅವರ ಬಳಿ ಅಶ್ರುವಾಯು ಬಿದ್ದಿದೆ. ಇದರಿಂದಾಗಿ ಅವರು ಉಸಿರುಗಟ್ಟಿ ಸಾವನ್ನಪ್ಪಿದರು ಎಂದು ಕಾಂಗ್ರೆಸ್ ವಕ್ತಾರ ಬೇಡಬ್ರತ್ ಬೋರಾ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಈ ಎರಡು ಘಟನೆಗಳ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಬಿಜೆಪಿ ಆಡಳಿತವಿರುವ ಅಸ್ಸಾಂ ಮತ್ತು ಉತ್ತರ ಪ್ರದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಮತ್ತೆ ಕೊಲೆ ಮಾಡಲಾಗಿದೆ. ದೇಶಾದ್ಯಂತ ಬಾಬಾಸಾಹೇಬ್ ಮತ್ತು ಸಂವಿಧಾನವನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷ ಸತ್ಯಾಗ್ರಹ ನಡೆಸುತ್ತಿದೆ. ಈ ಸಮಯದಲ್ಲಿ, ಗುವಾಹಟಿಯಲ್ಲಿ ಮೃದುಲ್ ಇಸ್ಲಾಂ ಮತ್ತು ಲಕ್ನೋದಲ್ಲಿ ಪ್ರಭಾತ್ ಪಾಂಡೆ ಎಂಬ ನಮ್ಮ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಬಲದಿಂದಾಗಿ ಸಾವಿಗೀಡಾಗಿರುವುದು ತುಂಬಾ ದುಃಖಕರ ಮತ್ತು ಖಂಡನೀಯ” ಎಂದಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X