ಮಂಡ್ಯ | ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ವೈಭವದ ಸ್ವಾಗತ

Date:

Advertisements

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರು, ಜಾನಪದ ವಿದ್ವಾಂಸರು, ನಾಡೋಜ ಗೊ.ರು. ಚನ್ನಬಸಪ್ಪ ಅವರು ‘ಸಕ್ಕರೆ ನಾಡು ಜನಪದ ಬೀಡು’ ಮಂಡ್ಯಕ್ಕೆ ಆಗಮಿಸುತ್ತಿದ್ದಂತೆ ವೈಭವಯಾಗಿ ಸ್ವಾಗತಿಸಲಾಯಿತು.

IMG 20241219 WA0004 1

ಸಮ್ಮೇಳನ ನಡೆಯಲಿರುವ ಸ್ಯಾಂಜೋ ಆಸ್ಪತ್ರೆ ಹಾಗೂ ಅಮರಾವತಿ ಹೋಟೆಲ್ ಸಮೀಪ ಗೊ.ರು.ಚನ್ನಬಸಪ್ಪ ಅವರು ಆಗಮಿಸುತ್ತಿದ್ದಂತೆ ಪೂರ್ಣಕುಂಭದೊಂದಿಗೆ ನಾದಸ್ವರ, ಡೊಳ್ಳು ಕುಣಿತ, ಪೂಜಾ ಕುಣಿತ ಒಳಗೊಂಡಂತೆ ಜಾನಪದ ಕಲಾತಂಡಗಳಿಂದ ಬರಮಾಡಿಕೊಳ್ಳಲಾಯಿತು.

ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಚಲುವರಾಯಸ್ವಾಮಿ ಸಮ್ಮೇಳನಾಧ್ಯಕ್ಷರಿಗೆ ಮೈಸೂರು ಮಲ್ಲಿಗೆ ಹಾರ, ಕನ್ನಡದ ಶಾಲು ಹಾಕಿ, ಹೂಗುಚ್ಛ ನೀಡಿ ಸಕಲ ಗೌರವಗಳೊಂದಿಗೆ ಸ್ವಾಗತಿಸಲಾಯಿತು.

Advertisements

ಇದನ್ನು ಓದಿದ್ದೀರಾ? ರಾಮನಗರ | ಸಜ್ಜನಿಕೆಯ ರಾಜಕಾರಣ ಎಸ್.ಎಂ.ಕೃಷ್ಣ ಸಾವಿನೊಂದಿಗೆ ಕೊನೆಯಾಗಿದೆ: ಡಾ. ಎಂ.ಬೈರೇಗೌಡ

ಸಮೇಳನಾಧ್ಯಕ್ಷರು ಪುರ ಪ್ರವೇಶಿಸುವ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ್ ಜೋಶಿ, ಶಾಸಕರುಗಳಾದ ನರೇಂದ್ರಸ್ವಾಮಿ, ರವಿಕುಮಾರ್ ಗಣಿಗ, ರಮೇಶ್ ಬಾಬು ಬಂಡಿಸಿದ್ದೇಗೌಡ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷರಾದ ಮೀರಾ ಶಿವಲಿಂಗಯ್ಯ ಹೂಗುಚ್ಛ ನೀಡಿ ಸ್ವಾಗತಿಸಿದರು.

ಸಮ್ಮೇಳನಾಧ್ಯಕ್ಷರು ಮಂಡ್ಯ ನಗರ ಪ್ರವೇಶಿಸುತ್ತಿದ್ದಂತೆ ಬೆಂಗಳೂರು ಮೈಸೂರು ರಸ್ತೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಸಮ್ಮೇಳನಾಧ್ಯಕ್ಷರಿಗೆ ಹೂ ನೀಡಿ ಸ್ವಾಗತ ಕೋರಿದರು. ನಂತರ ಜಿಲ್ಲಾಧಿಕಾರಿ ನಿವಾಸಕ್ಕೆ ಕರೆದೊಯ್ದು ಅತಿಥಿ ಸತ್ಕಾರ ನೀಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X