ಮಣಿಪುರ | 40 ಶಂಕಿತ ಉಗ್ರರ ಹತ್ಯೆ

Date:

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಕಳೆದ 4 ದಿನಗಳ ಅಂತರದಲ್ಲಿ ರಾಜ್ಯ ಪೊಲೀಸ್ ಮತ್ತು ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಕುಕಿ ಉಗ್ರಗಾಮಿ ಸಂಘಟನೆಗೆ ಸೇರಿದ್ದಾರೆ ಎನ್ನಲಾದ 40 ಮಂದಿ ಹತರಾಗಿದ್ದಾರೆ ಎಂದು ಮುಖ್ಯಮಂತ್ರಿ ಬೀರೇನ್ ಸಿಂಗ್ ಹೇಳಿದ್ದಾರೆ.

ಬಂಧಿತ ಹಾಗೂ ಹತ್ಯೆಗೀಡಾದ ಉಗ್ರರ ಬಳಿಯಿಂದ ಎಕೆ 47, ಎಂ 16, ಸ್ನೈಪರ್ ರೈಫಲ್ ಸೇರಿದಂತೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಅಪಾರ ಪ್ರಮಾಣದ ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಂಗ್ ಹೇಳಿದ್ದಾರೆ.

ಶಸ್ತ್ರ ಸಜ್ಜಿತ ಪ್ರತಿಭಟನಾಕಾರರ ಗುಂಪುಗಳು ಮತ್ತು ಭದ್ರತಾ ಪಡೆಗಳ ನಡುವೆ ಶನಿವಾರ ರಾತ್ರಿಯಿಂದ ಮತ್ತೆ ಸಂಘರ್ಷ ಭುಗಿಲೆದ್ದಿದೆ. ಹಲವು ಸ್ಥಳಗಳಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ನಾಗರಿಕರು ಮತ್ತು ಓರ್ವ ಪ್ಯಾರಾ ಮಿಲಿಟರಿ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮೂರು ದಿನಗಳ ಭೇಟಿಗಾಗಿ ಮೇ 29 ಸೋಮವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಣಿಪುರಕ್ಕೆ ಆಗಮಿಸಲಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಭದ್ರತಾ ಪಡೆಗಳು ಕೈಗೊಂಡಿರುವ ಕ್ರಮಗಳ ಪರಿಶೀಲನೆ ನಡೆಸಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರದಲ್ಲಿ ಕಾಂಗ್ರೆಸ್ ಬಂದ್ರೆ ಮನೆಯ ಯಜಮಾನಿಗೆ ರೂ. 1 ಲಕ್ಷ ಜಮೆ, ರೈತರ ಸಾಲ ಮನ್ನಾ: ಸಿಎಂ ಸಿದ್ದರಾಮಯ್ಯ

"ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ....

ಮೋದಿ ಸುಳ್ಳುಗಳು: ಭಾಗ 2 | ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವ ಮೋದಿ ಮಹಿಳೆಯರ ರಕ್ಷಣೆಗೆ ನಿಂತಿದ್ದಾರೆಯೇ?

ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೂವರು ಮಹಿಳೆಯರನ್ನು ಬೆತ್ತಲುಗೊಳಿಸಿ, ಲೈಂಗಿಕ ದೌರ್ಜನ್ಯ...

ಪ್ರಚಾರದ ಸಾಲು ಬದಲಿಸಲು ಹೇಳಿದ ಚುನಾವಣಾ ಆಯೋಗ; ಎಎಪಿ ಆಕ್ರೋಶ

ಲೋಕಸಭಾ ಚುನಾವಣೆಯ ಪ್ರಚಾರದ ಹಾಡಿನ ಸಾಲುಗಳನ್ನು ಮಾರ್ಪಡಿಸುವಂತೆ ಎಎಪಿ ಪಕ್ಷಕ್ಕೆ ಚುನಾವಣಾ...

ಹಾಸನ ಪೆನ್‌ಡ್ರೈವ್ ಪ್ರಕರಣ | ಎಸ್‌ಐಟಿ ತಂಡದ ಮುಖ್ಯಸ್ಥರಾಗಿ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ನೇಮಕ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ವಿಶೇಷ ತನಿಖಾ...