ದಕ್ಷಿಣ ಕನ್ನಡ | ದಲಿತ ಕಾಲೋನಿಗಳಲ್ಲಿ ಕುಂದುಕೊರತೆ ಸಭೆ ನಡೆಸಲು ನಿರ್ಧಾರ: ಡಿಸಿಪಿ

Date:

Advertisements

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರದ ದಲಿತ ಕಾಲೋನಿಗಳಲ್ಲಿ ಶೀಘ್ರವೇ ಕುಂದುಕೊರತೆ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶುಕುಮಾರ್ ತಿಳಿಸಿದ್ದಾರೆ.

ಭಾನುವಾರ ನಡೆದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆಯಲ್ಲಿ ಮಾತನಾಡಿ, ಈಗಾಗಲೇ ನಗರ ಪೊಲೀಸ್ ಆಯುಕ್ತರ ಕಚೇರಿ ಮತ್ತು ಪೊಲೀಸ್ ಠಾಣೆಗಳಲ್ಲಿ ಸಭೆಗಳು ನಡೆಯುತ್ತಿವೆ. ಅಂತೆಯೇ, ಬೀಟ್ ಸಭೆಗಳನ್ನು ನಡೆಸಲಾಗುತ್ತಿದೆ. ಹಾಗಾಗಿ ಆ ಸಭೆಗಳಲ್ಲಿ ಕೆಲವೇ ಜನರು ಭಾಗವಹಿಸುತ್ತಾರೆ. ಆದ್ದರಿಂದ, ದಲಿತ ಕಾಲೋನಿಗಳಲ್ಲಿ ಕುಂದುಕೊರತೆ ಸಭೆಗಳನ್ನು ನಡೆಸಲು ನಿರ್ಧರಿಸಲಾಗಿದೆ. ಇದರಿಂದ ಸಮುದಾಯದ ಸಮಸ್ಯೆಗಳನ್ನು ಹಿರಿಯ ಅಧಿಕಾರಿಗಳು ತಕ್ಷಣ ಪರಿಹರಿಸಬಹುದು” ಎಂದು ತಿಳಿಸಿದರು.

“ಇನ್ಸ್‌ಪೆಕ್ಟರ್‌ಗಳು ಮತ್ತು ಸಬ್ ಇನ್ಸ್‌ಪೆಕ್ಟರ್‌ಗಳು ಸಭೆಗಳನ್ನು ನಡೆಸಲು ಕಾಲೋನಿಗಳಿಗೆ ಭೇಟಿ ನೀಡುತ್ತಾರೆ. ಒಂದು ಕಾಲೋನಿಯಲ್ಲಿ ಬಹುತೇಕ ಪ್ರಮುಖ ಸಮಸ್ಯೆಗಳಿದ್ದರೆ, ಡಿಸಿಪಿಗಳು ಮತ್ತು ಎಸಿಪಿಗಳೂ ಕೂಡ ಸಭೆಗಳಲ್ಲಿ ಭಾಗವಹಿಸುತ್ತಾರೆ. ಆಯ್ದ ಕಾಲೋನಿಯಲ್ಲಿ ವಾರಕ್ಕೊಮ್ಮೆ ಸಭೆ ನಡೆಸಲಾಗುವುದು. ಈ ಬಗ್ಗೆ ಶೀಘ್ರದಲ್ಲೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಸಚಿವರಿಗೆ ಖಾತೆ ಹಂಚಿದ ಸಿದ್ದರಾಮಯ್ಯ; ಯಾರಿಗೆ ಯಾವ ಖಾತೆ? ಇಲ್ಲಿದೆ ಮಾಹಿತಿ

ಕಳೆದ ಒಂದು ವರ್ಷದಿಂದ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಬೇಕಿದ್ದ ಎಸ್‌ಸಿ/ಎಸ್‌ಟಿ ಸಭೆಗಳ ಬಗ್ಗೆ ಸದಸ್ಯೆ ಅಮಲಾ ಜ್ಯೋತಿ ಅವರ ಪ್ರಶ್ನೆಗೆ ಉತ್ತರಿಸಿದ ಡಿಸಿಪಿ, ಈ ವಿಷಯವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.

ಕಂಕನಾಡಿಯ ಪ್ರೀತಿ ನಗರದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸುವಂತೆ ದಲಿತ ಸದಸ್ಯರು ಮಾಡಿದ ಮನವಿಗೆ ಪ್ರತಿಕ್ರಿಯಿಸಿದ ಡಿಸಿಪಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X