ಸಿ ಟಿ ರವಿ ಬಿಡುಗಡೆಯಾದ ಸ್ಥಳದಿಂದಲೇ ಸುದ್ದಿಗೋಷ್ಠಿ, ಬಿಜೆಪಿ ನಾಯಕರು ಹೇಳಿದ್ದೇನು?

Date:

Advertisements

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ ಆರೋಪದಡಿ ಬಂಧನವಾಗಿದ್ದ ಬಿಜೆಪಿ ಎಂಎಲ್‌ಸಿ ಸಿ ಟಿ ರವಿ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಸೂಚಿಸಿದೆ.

ಹೀಗಾಗಿ ಬೆಳಗಾವಿಯಿಂದ ಬೆಂಗಳೂರು ಕೋರ್ಟ್​ಗೆ ಕರೆದುಕೊಂಡು ಬರುತ್ತಿದ್ದ ಪೊಲೀಸರು ಮಾರ್ಗ ಮಧ್ಯೆಯೇ ಸಿ ಟಿ ರವಿ ಅವರನ್ನು ತಮ್ಮ ವಶದಿಂದ ಬಿಡುಗಡೆ ಮಾಡಿದ್ದಾರೆ.

ಇದರ ಬೆನ್ನಲ್ಲೇ ಸಿ ಟಿ ರವಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್ ಅಶೋಕ್ ಅವರು ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

Advertisements

ಆರ್‌ ಅಶೋಕ್‌ ಹೇಳಿದ್ದೇನು?

ವಿಧಾನಸಭೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್‌ ಎಂದು ಹೇಳಿದವರನ್ನು ಈ ಕಾಂಗ್ರೆಸ್‌ ಸರ್ಕಾರ ಬಂಧಿಸಿಲ್ಲ. ಈಗ ಒಂದು ನೋಟಿಸ್ ಕೊಡದೇ ಪರಿಷತ್‌ ಸದಸ್ಯರನ್ನು ಅರೆಸ್ಟ್ ಮಾಡಿದ್ದಾರೆ. ರವಿ ಅವರನ್ನು ಕೊಲ್ಲಲು ಗೂಂಡಾಗಳು ಬಂದಿದ್ದರು. ನಾನು ದೂರು ಕೊಡಲು ಹೋದರೆ ನನ್ನನ್ನೇ ಒಳಗೆ ಬಿಡಲಿಲ್ಲ” ಎಂದು ಆರೋಪಿಸಿದರು.

ತನಿಖಾಧಿಕಾರಿಗಳ‌ ಮೇಲಿಂದ ಮೇಲೆ ಒತ್ತಡ ಹಾಕಲಾಗಿದೆ. ರವಿಯವರನ್ನು ಕ್ರಷ‌ರ್‌ಗಳ ಜಾಗದಲ್ಲಿ ಅಕ್ರಮವಾಗಿ ಪೋಲೀಸರು ಕರೆದು ಕೊಂಡು ಹೋಗಿದ್ದಾರೆ. ಇಡೀ ರಾತ್ರಿ ನಾಲೈದು ಜಿಲ್ಲೆಗಳಲ್ಲಿ ಸುತ್ತಾಡಿಸಿದ್ದಾರೆ. ಸಿದ್ದರಾಮಯ್ಯ ಅವರಿಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೊಡಲಿ. ಈ ಘಟನೆ ಇತಿಹಾಸದಲ್ಲಿ ದಾಖಲಾಗುತ್ತದೆ. ಕಾಂಗ್ರೆಸ್‌ ಸರ್ಕಾರಕ್ಕೆ ಕಪ್ಪು ಚುಕ್ಕೆ” ಎಂದು ಅಶೋಕ್‌ ಹೇಳಿದರು.

ವಿಜಯೇಂದ್ರ ಏನು ಹೇಳಿದರು?

ಬಿ ವೈ ವಿಜಯೇಂದ್ರ ಮಾತನಾಡಿ, “ಘಟನೆ ನಡೆಯುತ್ತಲೇ ಎಲ್ಲ ಮಾಧ್ಯಮಗಳು ಅದರಲ್ಲೂ ದೃಶ್ಯ ಮಾಧ್ಯಮಗಳು ಕ್ಷಣ ಕ್ಷಣವೂ ಸಿ ಟಿ ರವಿ ಅವರ ಬಗ್ಗೆ ಸುದ್ದಿ ಮಾಡಿದ್ದೀರಿ. ಮಾಧ್ಯಮಗಳ ಸುದ್ದಿಯಿಂದ ಕೂಡಲೇ ಹೈಕೋರ್ಟ್‌ನಿಂದ ಬಿಡುಗಡೆಯಾಗಿದ್ದಾರೆ. ಇಡೀ ದಿನ ಕಾಂಗ್ರೆಸ್‌ ಸರ್ಕಾರದ ನಡೆ ಬಗ್ಗೆ ಪ್ರಸಾರ ಮಾಡಿದ್ದೀರಿ. ನಿಮಗೆ ಧನ್ಯವಾದ ತಿಳಿಸುವೆ. ನಾವು ಇಲ್ಲಿಗೆ ಇದನ್ನು ಕೈ ಬಿಡುವುದಿಲ್ಲ. ಮುಂದೆ ಹೋರಾಟ ರೂಪಿಸುತ್ತೇವೆ” ಎಂದರು.

ಸಿ ಟಿ ರವಿ ಹೇಳಿದ್ದಿಷ್ಟು?

“ಯಾವುದೇ ನೋಟಿಸ್‌ ನೀಡದೇ ನನ್ನ ಬಂಧಿಸಲಾಯಿತು. ಒಂದೇ ರಾತ್ರಿಯಲ್ಲಿ ನಾಲ್ಕು ಜಿಲ್ಲೆ, 50 ಹಳ್ಳಿಗಳಲ್ಲಿ ಪೊಲೀಸರು ನನ್ನ ವಾಹನದಲ್ಲಿ ಅಲೆದಾಡಿಸಿದರು. ನನ್ನನ್ನು ಮಾನಸಿಕವಾಗಿ ಕುಗ್ಗಿಸುವ ಪ್ರಯತ್ನ ನಡೆಯಿತು. ನಮ್ಮ ಪಕ್ಷದ ನಾಯಕರು ನನ್ನ ಬೆಂಬಲವಾಗಿ ನಿಂತಿದ್ದಕ್ಕೆ ನಾನು ಈಗ ಹೊರಗೆ ಬಂದೆ. ಉಳಿದ ವಿಚಾರಗಳನ್ನು ಮತ್ತೆ ಹೇಳುವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X