ಶ್ರೀರಂಗಪಟ್ಟಣ | ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಪ್ರಜ್ಞಾವಂತರ ಪ್ರತಿಭಟನೆ

Date:

Advertisements

ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಮಾತನಾಡಿರುವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಶ್ರೀರಂಗಪಟ್ಟಣದ ಪ್ರಜ್ಞಾವಂತರು ಪ್ರತಿಭಟನೆ ನಡೆಸಿ ರಾಷ್ಟ್ರಪತಿಯವರಿಗೆ ತಹಶಿಲ್ದಾರರ ಮೂಲಕ ಮನವಿ ಪತ್ರ ಸಲ್ಲಿಸಿದರು.

IMG 20241221 WA0001

ನಾವು ಭಾರತ ಒಕ್ಕೂಟದಲ್ಲಿ ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕವಾಗಿ ಸಮಾನತೆಯಿಂದ, ಸ್ವಚ್ಛಂದ ವಾಗಿ, ಸ್ವಾತಂತ್ರ್ಯದಿಂದ ಬದುಕಲಿಕ್ಕೆ ಕಾರಣ ಸಂವಿಧಾನ. ಅದನ್ನು ಕೊಟ್ಟ ಅಂಬೇಡ್ಕರ್ ಕಾರಣ ಎಂದು ಪ್ರಜ್ಞಾವಂತರ ವೇದಿಕೆಯ ವೆಂಕಟೇಶ್ ಹೇಳಿದರು.

ಅವರು ಶ್ರೀರಂಗಪಟ್ಟಣದಲ್ಲಿ ಶುಕ್ರವಾರ ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ಧ ಅಮಿತ್ ಶಾರ ಅವಹೇಳನಕಾರಿ ಮಾತನ್ನು ಖಂಡಿಸಿ, ಒಕ್ಕೂಟ ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಶ್ರೀರಂಗಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ಪ್ರಜ್ಞಾವಂತರ ವೇದಿಕೆ ಹಾಗೂ ಇನ್ನಿತರ ಪ್ರಗತಿಪರ ಸಂಘಟನೆಗಳು ಹಮ್ಮಿಕೊಂಡಿದ್ದ ಪ್ರತಿಭಟನೆ ಮಾತನಾಡಿದರು.

Advertisements

ಸಂವಿಧಾನದ ಕಾರಣದಿಂದ, ಅಂಬೇಡ್ಕರ್ ಕಾರಣದಿಂದ ಅಮಿತ್ ಶಾಗೆ ರಾಜಕೀಯ ಹುದ್ದೆ ಸಿಕ್ಕಿದೆ. ಇಂತಹ ವ್ಯಕ್ತಿ ಬಾಬಾ ಸಾಹೇಬರನ್ನು ವಿರುದ್ಧ ಮಾತಾಡಿರೋದು ಸಂವಿಧಾನ ಶಿಲ್ಪಿಗೆ ಮಾಡಿರುವ ಅವಮನ. ಈ ಕೂಡಲೇ ಅವರು ವಜಾ ಆಗಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಮಂಡ್ಯ l ಕನ್ನಡ ಸಾಹಿತ್ಯ ಸಮ್ಮೇಳನದ ಅವ್ಯವಸ್ಥೆ; ಶಾಲಾ ಮಕ್ಕಳಿಗೆ ಬಸ್ ವ್ಯವಸ್ಥೆ ಇಲ್ಲದೆ ಪರದಾಟ

ಕರ್ನಾಟಕ ರಾಜ್ಯ ರೈತ ಸಂಘದ ಪಾಂಡು ಮಾತನಾಡಿ, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಕರೆಯುವುದು ಪ್ಯಾಷನ್ ಆಗಿಬಿಟ್ಟಿದೆ ಅವರ ಬದಲಿಗೆ ದೇವರನ್ನು ಸ್ಮರಿಸಿದರೆ ಸ್ವರ್ಗ ಪ್ರಾಪ್ತಿಯಾಗುತ್ತದೆ” ಎಂದು ಹೇಳಿಕೆ ನೀಡಿರುವ ಶಾರ ರಾಜೀನಾಮೆಯನ್ನು ಈ ಕೂಡಲೇ ಪಡೆಯಲಿ ಎಂದು ಒತ್ತಾಯಿಸಿದರು.

ಬಿಎಸ್ಪಿಯ ಪಕ್ಷದ ಗೋವಿಂದರಾಜು ಮಾತನಾಡಿ, ಏನು ನಮ್ಮನ್ನು ಗೌರವಿಸದ, ಹೆಚ್ಚಿನ ಸ್ಥಾನಮಾನದಲ್ಲಿ ಕಾಣದಂತ ಇಂತಹ ಸಂವಿಧಾನ ನಮಗೆ ಬೇಡ, ಅದನ್ನು ಒಪ್ಪಿಕ್ಕೆ ನಾವು ತಯಾರಿಲ್ಲ ಅಂತ ಜನ ಸಂಘ ಹೇಳುತಿತ್ತು. ಆ ಮಾತನ್ನು ಶಾನಂತವರು ಮುಂದಕ್ಕೆ ಕೊಂಡೊಯ್ಯುತ್ತಿದ್ದಾರೆ. ಶಾನಂತವರೂ ಕೂಡ ನಮಗೆ ಬೇಕಿಲ್ಲ. ಈ ಕೂಡಲೇ ಅವರ ರಾಜೀನಾಮೆ ಪಡೆಯಲಿ ಎಂದು ಆಗ್ರಹಿಸಿದರು.

ಇದನ್ನು ನೋಡಿದ್ದೀರಾ? ಮಂಡ್ಯ ಸಾಹಿತ್ಯ ಸಮ್ಮೇಳನ: ವಿಶೇಷತೆಗಳೇನು?

ಮನವಿ ಪತ್ರವನ್ನು ರಾಷ್ಟ್ರಪತಿಯವರಿಗೆ ತಹಶಿಲ್ದಾರರ ಮೂಲಕ ನೀಡಲಾಯಿತು. ಈ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕತಮ್ಮೇಗೌಡ, ದಸಂಸದ ಗಾಂಜಾಂ ರವಿಚಂದ್ರ, ಚಂದ್ರಣ್ಣ, ಪ್ರಿಯಾ ರಮೇಶ್, ಮುಸ್ಲಿಂ ಸೌಹಾರ್ದ ವೇದಿಕೆಯ ಅಬ್ದುಲ್ ಸುಕೂರ್, ಅಯೂಬ್, ಅರಕೆರೆ ಶಿವಯ್ಯ, ಡಿಎಸ್ಎಸ್ ಹಾಗೂ ರೈತ ಸಂಘದ ಇನ್ನಿತರ ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X