ಮಹಿಳೆಯರಿಗೆ ಅಪಮಾನ ಮಾಡುವುದು ನಮ್ಮ ಸಂಸ್ಕೃತಿ ಎಂದು ಬಿಜೆಪಿ ಒಪ್ಪಿಕೊಳ್ಳಲಿ: ಡಿ ಕೆ ಶಿವಕುಮಾರ್

Date:

Advertisements

ಮಹಿಳೆಯರಿಗೆ ಅಪಮಾನ, ಹೀನ ಮಾತುಗಳೇ ನಮ್ಮ ಸಂಸ್ಕೃತಿ ಎಂದು ಬಿಜೆಪಿ ಒಪ್ಪಿಕೊಳ್ಳಲಿ. ನಾವು ತಕರಾರು ಮಾಡುವುದಿಲ್ಲ ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿ, “ಸಿ.ಟಿ. ರವಿ ಕೇವಲ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಮಾತ್ರ ಮಾತನಾಡಿಲ್ಲ. ಸಿದ್ದರಾಮಯ್ಯ ಅವರ ಬಗ್ಗೆಯೂ ಹೀನ ಮಾತು ಆಡಿದ್ದಾರೆ. ಸದನದಲ್ಲಿ ನಿತ್ಯ ಸುಮಂಗಲಿ ಎಂದು ಪದ ಬಳಕೆ ಮಾಡಿದ್ದಾರೆ. ರವಿ ಅವರ ಮಾತುಗಳು ಸರಿಯೋ ತಪ್ಪೋ ಎಂದು ಬಿಜೆಪಿ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಲಿ” ಎಂದು ತಿಳಿಸಿದರು.

“ಚಿಕ್ಕಮಗಳೂರು ಜನ ಎಂದರೆ ಸುಸಂಸ್ಕೃತ ಜನ. ಅಂತಹವರ ನಡುವಿನಿಂದ ಇಂತಹ ವ್ಯಕ್ತಿ ಬಂದಿರುವುದು ದುರಂತ. ನಮ್ಮ ಪಕ್ಷದ ಯಾವುದೇ ನಾಯಕರು ಈ ರೀತಿ ಮಾತನಾಡಿದ್ದರೆ ನಾನು ಖಂಡಿಸುತ್ತಿದ್ದೆ. ಆದರೆ ಬಿಜೆಪಿ ನಾಯಕರು ತಮ್ಮ ಪಕ್ಷದ ನಾಯಕರ ರಕ್ಷಣೆಗೆ ನಿಂತಿದ್ದಾರೆ. ಮುನಿರತ್ನ ಪ್ರಕರಣ ಇದೇ ಆರ್.ಅಶೋಕ್ ಏನು ಹೇಳಿದ್ದರು? ಎಫ್ ಎಸ್ ಎಲ್ ವರದಿಯಲ್ಲಿ ಸತ್ಯಾಂಶ ಬಂದ ನಂತರ ಪಕ್ಷದಿಂದ ಹೊರಹಾಕುವುದಾಗಿ ಹೇಳಿದ್ದರು. ಈ ಪ್ರಕರಣದಲ್ಲಿ ಅವರು ಒಂದು ಭಾಗವಾಗಿದ್ದರೂ ಆತನನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದೇ ಅವರ ನಾಯಕತ್ವ. ಅವರ ಮುತ್ತು ರತ್ನಗಳನ್ನು ಅವರೇ ಇಟ್ಟುಕೊಳ್ಳಲಿ” ಎಂದು ಕಿಡಿಕಾರಿದರು.

Advertisements

ಅವರ ಮನೆ, ಪಕ್ಷದಲ್ಲಿ ಏನಾದರೂ ನಾನೇ ಕಾರಣ!

ಸಿ. ಟಿ. ರವಿ ಅವರನ್ನು ರಾತ್ರಿಯಿಡೀ ಪೊಲೀಸರು ಸುತ್ತಾಡಿಸಿದರು ಎಂದು ನಿಮ್ಮ ವಿರುದ್ಧ ಬೆಟ್ಟು ಮಾಡಿ ತೋರುತ್ತಿದ್ದಾರೆ ಎಂದು ಕೇಳಿದಾಗ, “ಈ ವಿಚಾರದಲ್ಲಿ ನೀವುಂಟು, ಪೊಲೀಸ್ ಉಂಟು. ಅವರ ಮನೆಯಲ್ಲಿ ಏನಾದರೂ ನಾನೇ ಕಾರಣ. ಅವರ ಪಕ್ಷದಲ್ಲಿ ಏನಾದರೂ ನಾನೇ ಕಾರಣ. ಹೊರಗಡೆ ಏನಾದರೂ ನಾನೇ ಕಾರಣ. ನನ್ನ ಸ್ಮರಿಸದಿದ್ದರೆ ಅವರಿಗೆ ನಿದ್ದೆ ಬರುವುದಿಲ್ಲ” ಎಂದು ತಿಳಿಸಿದರು.

ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ಲೆಕ್ಕ ಚುಕ್ತಾ

ಇದಕ್ಕೆಲ್ಲ ಕೊನೆಯಾಡುತ್ತೇವೆ ಎಂಬ ಸಿ.ಟಿ ರವಿ ಹೇಳಿಕೆ ಬಗ್ಗೆ ಕೇಳಿದಾಗ, “ಇಂತಹ ಲೆಕ್ಕ ಚುಕ್ತಾಗಳನ್ನು ಬಹಳ ನೋಡಿದ್ದೇವೆ. ಬಹಳ ಸಂತೋಷ. ಅವರೊಬ್ಬರೇ ಲೆಕ್ಕ ಚುಕ್ತಾ ಮಾಡುತ್ತಾರ? ಎಲ್ಲರೂ ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ಲೆಕ್ಕ ಚುಕ್ತಾ ಮಾಡುತ್ತಾರೆ. ಬಿಜೆಪಿಯವರು ತಮ್ಮ ಹೇಳಿಕೆ ಮುಚ್ಚಿಕೊಳ್ಳಲು ಪೊಲೀಸರ ಮೇಲೆ ಆರೋಪ ಮಾಡುತ್ತಿದ್ದಾರೆ. ಇವರ ಆಡಳಿತದಲ್ಲಿ ಪೊಲೀಸರನ್ನು ಹೇಗೆ ಬಳಸಿಕೊಂಡಿದ್ದರು” ಎಂದು ಮಾರ್ಮಿಕವಾಗಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X